ಪ್ರಚಲಿತ

ಭೂಮಿಗೆ ಹತ್ತಿರವಾಗುತ್ತಿರೋ ಸುನೀತಾ ವಿಲಿಯಮ್ಸ್

ಭೂಮಿಗೆ ಹತ್ತಿರವಾಗುತ್ತಿರೋ ಸುನೀತಾ ವಿಲಿಯಮ್ಸ್ಬರೋಬ್ಬರಿ 9 ತಿಂಗಳ ಬಳಿಕ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ ಮತ್ತು ಬುಚ್ ವಿಲ್ಲೋರ್ ಇಂದು ಭೂಮಿಯತ್ತ ಹೊರಟಿದ್ದಾರೆ. ಸ್ಪೇಸ್‌ಎಕ್ಸ್ ಸಂಸ್ಥೆಯ ಸಂಸ್ಥಾಪಕ ಎಲೋನ್ ಮಸ್ಕರ್, ‘ಸ್ಪೇಸ್‌ಎಕ್ಸ್‌ ಡ್ರಾಗನ್‌ ಬಾಹ್ಯಾಕಾಶ ನಿಲ್ದಾಣದೊಂದಿಗೆ ಡಾಕ್ ಆಗಿದೆ’ ಎಂದು ತಿಳಿಸಿದ್ದಾರೆ. ಶುಕ್ರವಾರ ಸಂಜೆ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾದ ಕ್ರೂ-10 ಸ್ಪೇಸ್‌ಎಕ್ಸ್‌ ಕ್ರೂ ಡ್ರಾಗನ್ ಕ್ಯಾಪ್ಸುಲ್ ಐಎಸ್‌ಎಸ್‌ಗೆ ತಲುಪಿತು. ಎಲ್ಲವೂ ಅಂದುಕೊಂಡಂತೆ ನಡೆದರೆ ಭಾರತೀಯ ಕಾಲಮಾನ ಬುಧವಾರ (ಮಾ. 19) ಬೆಳಗ್ಗೆ 3.27ಕ್ಕೆ ಭೂಮಿಗೆ ಕಾಲಿಡಲಿದ್ದಾರೆ.

ಭೂಮಿಗೆ ಹತ್ತಿರವಾಗುತ್ತಿರೋ ಸುನೀತಾ ವಿಲಿಯಮ್ಸ್ Read More »

ಅರಂಬೂರು : ಶ್ರದ್ಧಾ ಭಕ್ತಿಯಿಂದ ನಡೆಯುತ್ತಿದೆ ದೈವಂಕಟ್ಟು ಮಹೋತ್ಸವ

ಆಲೆಟ್ಟಿ ಗ್ರಾಮದ ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ ಅಂಗವಾಗಿ ಮಾ.16ರಂದು ಶ್ರೀ ವಿಷ್ಣುಮೂರ್ತಿ ದೈವ,ಶ್ರೀ ಚಾಮುಂಡಿಯಮ್ಮ ಶ್ರೀ ಗುಳಿಗ ದೈವದ ಕೋಲ ನಡೆಯಿತು.ಸಂಜೆ ಕೈವೀದ್ ನಂತರ ಶ್ರೀ ವಯನಾಟ್ ಕುಲವನ್ ಹಾಗೂ ಸಹಪರಿವಾರ ದೈವಗಳಿಗೆ ಕೂಡಲಾಯಿತು.ಮಾ.17ರಂದು ಶ್ರೀ ಕಾರ್ನರ್ ದೈವದ ವೆಳ್ಳಾಟಂ,ಕೊರಚ್ಚನ್ ದೈವದ ವೆಳ್ಳಾಟಂ,ಶ್ರೀ ಕಂಡನಾರ್ ಕೇಳನ್ ದೈವದ ವೆಳ್ಳಾಟಂ ನಂತರ ಬಪ್ಪಿಡಲ್ ನಡೆಯಿತು.ನಂತರ ಶ್ರೀ ವಿಷ್ಣುಮೂರ್ತಿ ದೈವಕ್ಕೆ ಕೂಡಲಾಯಿತು.ತದನಂತರ ಶ್ರೀ ವಯನಾಟ್ ಕುಲವನ್ ದೈವದ ವೆಳ್ಳಾಟಂ ನಡೆಯಿತು.ಕರ್ನಾಟಕ

ಅರಂಬೂರು : ಶ್ರದ್ಧಾ ಭಕ್ತಿಯಿಂದ ನಡೆಯುತ್ತಿದೆ ದೈವಂಕಟ್ಟು ಮಹೋತ್ಸವ Read More »

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪ್ರಕರಣ ದಾಖಲು

ಕಳೆದ ಮಾರ್ಚ್ 9ರಂದು ದಕ್ಷಿಣಕನ್ನಡ ಜಿಲ್ಲೆಯ ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ಪಾದಯಾತ್ರೆ ಸಮಾರೋಪ ಸಮಾರಂಭದ ಕಾರ್ಯಕ್ರಮದಲ್ಲಿ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ ಹಿಂದೂ ಯುವಕರು ಅನ್ಯಧರ್ಮದವರನ್ನು ಪ್ರೀತಿಸಿ ವಿವಾಹವಾಗಿ ಎಂದು ಕರೆ ನೀಡಿದ್ದರು. ಮತಾಂತರ ಎಂದು ಬಡಿದಾಡಿದ್ದು ಸಾಕು ಮಾಡಿ. ಎಲ್ಲಿವರೆಗೆ ಲವ್ ಜಿಹಾದ್, ಮತಾಂತರ ಬಗ್ಗೆ ಮಾತನಾಡೋದು ಎಂದಿದ್ದರಲ್ಲದೇ, ಎಷ್ಟು ದಿನ ನಮ್ಮ ಹುಡುಗಿಯರನ್ನೇ ನೋಡ್ತಿಯಪ್ಪ. ಬೇರೆ ಧರ್ಮದ ಹುಡುಗಿಯರನ್ನೂ ನೋಡು. ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಬೇಕು ಎಂದು ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದ್ದರು.ಸೂಲಿಬೆಲೆಯವರ ಈ ಹೇಳಿಕೆ

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪ್ರಕರಣ ದಾಖಲು Read More »

ಆರ್.ಎಸ್.ಎಸ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು? ಇಲ್ಲಿದೆ ಮಾಹಿತಿ ಓದಿ

ಜನ್ಮ ನೀಡಿದ ರಾಷ್ಟ್ರವೇ ಮೊದಲು’ ಮತ್ತು “ಜನ ಸೇವೆಯೇ ಜನಾರ್ದನ ಸೇವೆ’ ಎಂಬುದನ್ನು ನನಗೆ ಆರ್‌ಎಸ್‌ಎಸ್‌ ಕಲಿಸಿಕೊಟ್ಟಿತು. ಹೀಗಾಗಿ ನನ್ನ ಬದುಕಿನ ಮೂಲ ಉದ್ದೇಶವನ್ನು ಕಲಿಸಿದ್ದು ಆರ್‌ಎಸ್ಎಸ್‌ ಎಂದು ನಾನು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.ಅವರು ಅಮೆರಿಕದ ಪಾಡ್‌ಕಾಸ್ಟರ್, ಎ.ಐ. ಸಂಶೋಧಕ ಲೆಕ್ಸ್ ಫ್ರಿಡ್ಮಿನ್ ಜತೆಗಿನ 3 ಗಂಟೆಗಳ ಸುದೀರ್ಘ ಸಂವಾದದಲ್ಲಿ ಮೋದಿ ತಮ್ಮ ಬಾಲ್ಯದಿಂದ ಪ್ರಧಾನಿಯಾಗುವವರೆಗಿನ ಏಳುಬೀಳಿನ ಜೀವನ ಚರಿತ್ರೆಯನ್ನು ಮೋದಿ ಹಂಚಿಕೊಂಡಿದ್ದಾರೆ. ನಮ್ಮ ಹಳ್ಳಿಯಲ್ಲಿ ಆರೆಸ್ಸೆಸ್‌ನ 1 ಶಾಖೆಯಿತ್ತು.

ಆರ್.ಎಸ್.ಎಸ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು? ಇಲ್ಲಿದೆ ಮಾಹಿತಿ ಓದಿ Read More »

ದೈವರಾಧನೆ ಸಾಮರಸ್ಯದ ಸಂಕೇತ : ನಳೀನ್ ಕುಮಾರ್ ಕಟೀಲ್

ತುಳುನಾಡಿನಲ್ಲಿ ಹಿರಿಯರು ನಂಬಿಕೊಂಡು ಬಂದಿರುವಂತಹ ದೈವಾರಾಧನೆ ಸಾಮರಸ್ಯದ ಸಂಕೇತ ತವಾಗಿದೆ.ದೈವರಾಧನೆ,ನಾಗಾರಾಧನೆ ಇಲ್ಲಿನ ವಿಶೇಷತೆ. ದೈವಾರಾಧನೆಯಿಂದ ಎಲ್ಲರನ್ನು ಒಗ್ಗೂಡಿಸಲುಸಾಧ್ಯ.ದೈವಾರಾಧನೆಯ ಪಾಡ್ಡನಗಳಿಂದ ತುಳು ಸಂಸ್ಕೃತಿ,ಆಚಾರ,ವಿಚಾರ,ಪರಂಪರೆಗಳು ಉಳಿದಿದೆ” ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.ಮಾ.15 ರಂದು ಸುಳ್ಯ ಬೂಡು ಪರಿಸರದ ಸತ್ಯಪದಿನಾಜಿ,ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯ ಸಮಾರೋಪ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ

ದೈವರಾಧನೆ ಸಾಮರಸ್ಯದ ಸಂಕೇತ : ನಳೀನ್ ಕುಮಾರ್ ಕಟೀಲ್ Read More »

ಅರಂತೋಡು : ಶ್ರೀ ದುರ್ಗಾ ಗೆಳೆಯರ ಬಳಗ ವತಿಯಿಂದ ಹೊನಲು ಬೆಳಕಿನ ಹಗ್ಗ ಜಗ್ಗಾಟ ಸ್ಪರ್ಧೆ

ಅರಂತೋಡು ಶ್ರೀ ದುರ್ಗಾ ಗೆಳೆಯರ ಬಳಗ ವತಿಯಿಂದ ಮಹಿಳೆಯರ ಮತ್ತು ಪುರುಷರ ಹೊನಲು ಬೆಳಕಿನ ಹಗ್ಗ ಜಗ್ಗಾಟ ಅರಂತೋಡು ತೋಟಂಪಾಡಿ ಶ್ರೀ ಉಳ್ಳಾಕುಳು ದೈವಸ್ಥಾನ ವಠಾರ ದಲ್ಲಿ ಮಾ.16 ರಂದು ನಡೆಯಿತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ದುರ್ಗಾ ಗೆಳೆಯರ ಬಳಗ ಅಧ್ಯಕ್ಷ ಲಿಖಿನ್ ಕಳುಬೈಲು ವಹಿಸಿದರು.ಪಂದ್ಯಾಟದ ಉದ್ಘಾಟನೆಯನ್ನು ತೋಟಂ ಶ್ರೀ ಉಳ್ಳಾ ಕುಳು ದೈವಸ್ಥಾನ ಅಧ್ಯಕ್ಷ ಕಿಶೋರ್ ಕುಮಾರ್ ಉಳುವಾರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಎಲ್ಲ ಊರಿನ ಆಟ ಗಾರರು ನಮ್ಮ ಗ್ರಾಮೀಣ ಪ್ರದೇಶದಲ್ಲಿ ಎಲ್ಲರನ್ನೂ

ಅರಂತೋಡು : ಶ್ರೀ ದುರ್ಗಾ ಗೆಳೆಯರ ಬಳಗ ವತಿಯಿಂದ ಹೊನಲು ಬೆಳಕಿನ ಹಗ್ಗ ಜಗ್ಗಾಟ ಸ್ಪರ್ಧೆ Read More »

ಶ್ರತಿ ವಿಸ್ಮಿತ್ ಗೌಡ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

ಸಮಾಜ ಕಲ್ಯಾಣ ಸಂಸ್ಥೆ ಹಾಗೂ ವಿಶ್ವ ಕನ್ನಡ ಜಾನಪದ ಪರಿಷತ್ ಬೆಂಗಳೂರು ಇದರ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯಕ್ಷಗಾನ ಕ್ಷೇತ್ರದ ಸಾಧನೆಗಾಗಿ ನೀಡುವ ರಾಷ್ಟ್ರೀಯ ವೀರವನಿತೆ ಯಕ್ಷಗಾನ ನೃತ್ಯ ಕಲಾ ರತ್ನ ಪ್ರಶಸ್ತಿಗೆ ತುಳು ಹಾಗೂ ಕನ್ನಡ ಭಾಷೆಯ ಯಕ್ಷಗಾನ ಕಲಾವಿದೆ ಹಾಗೂ ತಾಳಮದ್ದಳೆಯಲ್ಲಿಯೂ ಸಾಧನೆ ಮಾಡಿದ ಬಲ್ನಾಡಿನ ಶ್ರುತಿ ವಿಸ್ಮಿತ್ ಆಯ್ಕೆಯಾಗಿದ್ದಾರೆ. ಎ.೬ರಂದು ಬೆಂಗಳೂರಿನ ಅಕ್ಕಮಹಾದೇವಿ ಸಭಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಇವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಶ್ರತಿ ವಿಸ್ಮಿತ್ ಗೌಡ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ Read More »

ನಮ್ಮ ಶ್ರದ್ಧಾ ಕೇಂದ್ರಗಳು ಜೀರ್ಣೋದ್ಧಾರಗೊಂಡಾಗ ಜೀವನದಲ್ಲಿ ಸುಖ ಶಾಂತಿ ನೆಲೆಸುತ್ತದೆ : ಭಾಗೀರಥಿ ಮುರುಳ್ಯ

ನಮ್ಮ ಶ್ರದ್ದಾ ಕೇಂದ್ರಗಳಾದ ಮಂದಿರಗಳು, ದೈವಸ್ಥಾನಗಳನ್ನು ಕಾಲ ಕಾಲಕ್ಕೆ ಜೀರ್ಣೋದ್ದಾರಗೊಳಿಸಿದಾಗ ನಮ್ಮ ಜೀವನದಲ್ಲಿ ಸುಖ ಶಾಂತಿಯಿಂದ ಇರಲು ಸಾಧ್ಯ” ಎಂದು ಶಾಸಕಿ ಭಾಗೀರಥಿ ಮುರುಳ್ಯ ಅಭಿಪ್ರಾಯಪಟ್ಟಿದ್ದಾರೆ.ಅವರು ಸುಳ್ಯ ಬೂಡುವಿನ ಸತ್ಯಪದಿನಾಜಿ, ಕುಪ್ಪೆ ಪಂಜುರ್ಜಿ ಮತ್ತು ಗುಳಿಗ ಸಾನಿಧ್ಯ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಶಾಸಕರು ಈ ಭಾಗದ ಜನರ ಕೋರಿಕೆಯಂತೆ ಇಲ್ಲಿಗೆ ನೀರಿನ ವ್ಯವಸ್ಥೆಗಾಗಿ ಬೋರ್‌ವೆಲ್ ಕೊರೆಸಲು ಅನುದಾನ ನೀಡುವುದಾಗಿ ಭರವಸೆ ನೀಡಿದರು.ಕರ್ಲಪ್ಪಾಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ

ನಮ್ಮ ಶ್ರದ್ಧಾ ಕೇಂದ್ರಗಳು ಜೀರ್ಣೋದ್ಧಾರಗೊಂಡಾಗ ಜೀವನದಲ್ಲಿ ಸುಖ ಶಾಂತಿ ನೆಲೆಸುತ್ತದೆ : ಭಾಗೀರಥಿ ಮುರುಳ್ಯ Read More »

ಸುಳ್ಯ : ಸಹಕಾರಿ ರತ್ನ ಚಂದ್ರಾ ಕೋಲ್ಚಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮ

ಸಹಕಾರಿ ರತ್ನ ಚಂದ್ರ ಕೋಲ್ಟಾರ್ ಅಭಿನಂದನಾ ಸಮಿತಿ ವತಿಯಿಂದ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ ಬೆಂಗಳೂರು ಇದರ ನೂತನ ನಿರ್ದೇಶಕರಾಗಿ ಆಯ್ಕೆಯಾಗಿರುವ ಚಂದ್ರ ಕೋಲ್ಟಾರ್ ಅವರಿಗೆ ಅಭಿನಂದನಾ ಸಮಾರಂಭ ಮತ್ತು ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಇದರ ನೂತನ ಅಧ್ಯಕ್ಷ ಎಸ್.ಚಂದ್ರಶೇಖರ ಮೈಸೂರು ಇವರ ಅಧಿಕೃತ ಭೇಟಿ ಹಾಗೂ ಸನ್ಮಾನ ಕಾರ್ಯಕ್ರಮ ಮಾ.15 ರಂದು ಲಯನ್ಸ್ ಸೇವಾ ಸದನದಲ್ಲಿ ನಡೆಯಿತು.ಸಮಾರಂಭವನ್ನು ಉದ್ಘಾಟಿಸಿದ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಲದ ನಿರ್ದೇಶಕರಾದ ಎಸ್.ಚಂದ್ರಶೇಖ‌ರ್ ರವರು

ಸುಳ್ಯ : ಸಹಕಾರಿ ರತ್ನ ಚಂದ್ರಾ ಕೋಲ್ಚಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮ Read More »

ಬೂಡು : ಶ್ರೀ ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ

ಸುಳ್ಯದ ಬೂಡು ಪರಿಸರದಲ್ಲಿರುವ ಶ್ರೀ ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಮಾ.16ರಂದು ನಡೆಯಿತು.ಬೆಳಗ್ಗೆ ಯಿಂದ ವೈದಿಕ ಕಾರ್ಯಕ್ರಮಗಳು ನಡೆಯುವುದು. ಬೆಳಗ್ಗೆ ವೃಷಭ ಲಗ್ನದಲ್ಲಿ ಪ್ರತಿಷ್ಟೆ, ಕಲಶಾಭಿಷೇಕ ನಡೆಯಿತು.

ಬೂಡು : ಶ್ರೀ ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ Read More »

error: Content is protected !!
Scroll to Top