Uncategorized

ರೋಚಕ ಗೆಲುವಿನೊಂದಿಗೆ ಪೈನಲ್ ಪ್ರವೇಶಿಸಿದ ಭಾರತೀಯ ಕ್ರಿಕೆಟ್ ತಂಡ

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್‌ನ 2ನೇ ಸೆಮಿ ಫೈನಲ್ ಪಂದ್ಯದಲ್ಲಿ, ಭಾರತದ ಆರಂಭಿಕ ಆಟಗಾರ ಸಂಜು ಸ್ಯಾಟ್ಸನ್ 42 ಎಸೆತಗಳಲ್ಲಿ 89 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಅವರ ಈ ಪ್ರದರ್ಶನದಿಂದ ಭಾರತ ತಂಡವು ಇಂಗ್ಲೆಂಡ್ ತಂಡಕ್ಕೆ 254 ರನ್‌ಗಳ ಬೃಹತ್ ಗುರಿ ನೀಡಿತ್ತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡವು 7 ವಿಕೆಟ್ ನಷ್ಟಕ್ಕೆ 246 ರನ್ ಗಳಿಸಿ ಸೋಲು ಕಂಡಿತು.ಈ ಮೂಲಕ ಟೀಂ ಇಂಡಿಯಾ 8 ರನ್‌ಗಳ ಅಂತರದಲ್ಲಿ ಭರ್ಜರಿಯಾಗಿ […]

ರೋಚಕ ಗೆಲುವಿನೊಂದಿಗೆ ಪೈನಲ್ ಪ್ರವೇಶಿಸಿದ ಭಾರತೀಯ ಕ್ರಿಕೆಟ್ ತಂಡ Read More »

ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾ ಅತ್ ವತಿಯಿಂದ ರಂಜಾನ್ ಕಿಟ್ ವಿತರಣೆ

ಸುಳ್ಯ ತಾಲ್ಲೂಕು ಸಮಸ್ತ ಸಂಯುಕ್ತ ಜಮಾ ಅತ್ ವತಿಯಿಂದ ತಾಲೋಕಿನ 15ಜಮಾ ಅತ್ ನ 80ಅರ್ಹ ಕುಟುಂಬ ಗಳಿಗೆ ಆಹಾರದ ಕಿಟ್ ವಿತರಣೆಯು ಸುಳ್ಯ ಸುಪ್ರೀಂ ಹಾಲ್ ನಲ್ಲಿ ಮಾ 1ರಂದು ನಡೆಯಿತು, ಸಮಸ್ತ ಸಂಯುಕ್ತ ಜಮಾ ಅತ್ ಉಪಾಧ್ಯಕ್ಷ ಹಾಜಿ ಇಬ್ರಾಹಿಂ ಕತ್ತರ್ ಅಧ್ಯಕ್ಷತೆ ವಹಿಸಿದರು, ಕೋಶಾಧಿಕಾರಿ ಹಮೀದ್ ಹಾಜಿ ದುವಾ ನೆರವೇರಿಸಿದರುಮುಖ್ಯ ಅತಿಥಿ ಕರ್ನಾಟಕ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ ಎಂ ಶಾಹಿದ್ ತೆಕ್ಕಿಲ್ ಆಹಾರ ಸಾಮಾಗ್ರಿಗಳ ಕಿಟ್

ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾ ಅತ್ ವತಿಯಿಂದ ರಂಜಾನ್ ಕಿಟ್ ವಿತರಣೆ Read More »

ರಾಜ್ಯದಲ್ಲಿ ಖಾಲಿ ಇರುವ 56 ಸಾವಿರ ಹುದ್ದೆಗಳ ಭರ್ತಿಗೆ ಸಚಿವ ಸಂಪುಟ ಒಪ್ಪಿಗೆ

ರಾಜ್ಯ ಸರ್ಕಾರದಲ್ಲಿ ಖಾಲಿ ಹುದ್ದೆಗಳನೇಮಕಾತಿ ಆಗ್ರಹಿಸಿ ಇತ್ತೀಚಿಗೆ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಭಾರಿ ಪ್ರತಿಭಟನೆಗೆ ಮಣಿದ ಸಿದ್ದರಾಮಯ್ಯ ಸರ್ಕಾರ ಗುರುವಾರ ನೇಮಕಾತಿ ಸಂಬಂಧ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 56 ಸಾವಿರ ಹುದ್ದೆ ಭರ್ತಿಗೆ ಒಪ್ಪಿಗೆ ಸೂಚಿಸಲಾಗಿದೆ.ಸಂಪುಟ ಸಭೆಯಲ್ಲಿ ನೇಮಕಾತಿಗೆ ಇರೋ ಸಾಧಕ ಭಾಧಕಗಳ ಬಗ್ಗೆ ಚರ್ಚಿಸಿದ್ದು, ಅಂತಿಮವಾಗಿ ಮೀಸಲಾತಿ ಮಿತಿ ಶೇ.50 ಮೀರದಂತೆ ಒಳಮೀಸಲಾತಿಯೊಂದಿಗೆ ನೇಮಕಾತಿ ನಡೆಸಲು ತೀರ್ಮಾನಿಸಿದೆ.

ರಾಜ್ಯದಲ್ಲಿ ಖಾಲಿ ಇರುವ 56 ಸಾವಿರ ಹುದ್ದೆಗಳ ಭರ್ತಿಗೆ ಸಚಿವ ಸಂಪುಟ ಒಪ್ಪಿಗೆ Read More »

ದ.ಕ ಜಿಲ್ಲೆಯ ಬಾಳೆ ಎಲೆಗೆ ಕೇರಳದಲ್ಲಿ ಭಾರೀ ಬೇಡಿಕೆ

ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬೆಳೆಯುವ ಕದಳಿ ಬಾಳೆ ಎಲೆಗಳಿಗೆ ನೆರೆಯ ಕೇರಳ ರಾಜ್ಯದಲ್ಲಿ ಭಾರೀ ಬೇಡಿಕೆ ವ್ಯಕ್ತವಾಗಿದೆ. ವಿಶೇಷವಾಗಿ ಹಬ್ಬ -ಜಾತ್ರೆ, ಮದುವೆ ಸಮಾರಂಭ ಮತ್ತು ದೇವಸ್ಥಾನಗಳ ಅನ್ನಸಂತರ್ಪಣೆ ಕಾರ್ಯಕ್ರಮ ಗಳ ಸಂದರ್ಭಗಳಲ್ಲಿ ಈ ಬಾಳೆ ಎಲೆಗಳಿಗೆ ಭಾರೀ ಬೇಡಿಕೆ ಇರುತ್ತದೆ.ಕೇರಳದಲ್ಲಿ ನಡೆಯುವ ವಿಷು ಸಹಿತ ವಿವಿಧ ಹಬ್ಬಗಳು ಹಾಗೂ ದೇವಸ್ಥಾನಗಳ ಉತ್ಸವ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಬಾಳೆ ಎಲೆಗಳ ಆವಶ್ಯಕತೆ ಇರುತ್ತದೆ. ಕೇರಳದಲ್ಲಿ ಸಾಂಪ್ರದಾಯಿಕ ಶೈಲಿಯ ಊಟಕ್ಕೆ ಪ್ರಾಧಾನ್ಯತೆ ನೀಡಲಾಗುವ ಕಾರಣ ವ್ಯಾಪಾರಿಗಳು ದ.ಕ. ಹಾಗೂ

ದ.ಕ ಜಿಲ್ಲೆಯ ಬಾಳೆ ಎಲೆಗೆ ಕೇರಳದಲ್ಲಿ ಭಾರೀ ಬೇಡಿಕೆ Read More »

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಜಖಂ,ಪ್ರಯಾಣಿಕರಿಗೆ ಗಾಯ

ಸುಳ್ಯ ತಾಲೂಕಿನ ಸುಳ್ಯ ಬೆಳ್ಳಾರೆ ಚೊಕ್ಕಾಡಿ ರಸ್ತೆಯಬೇಂಗಮಲೆಯಲ್ಲಿ ಫೆ.23ರಂದು ಮರವೊಂದು ಚಲಿಸುತ್ತಿರುವ ಕಾರಿನ ಮೇಲೆ ಬಿದ್ದು ಕಾರು ಸಂಪೂರ್ಣ ಜಖಂಗೊಂಡು ಪ್ರಯಾಣಿಕರು ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾದ ಘಟನೆ ವರದಿಯಾಗಿದೆ.ಸುಳ್ಯದ ಉಮ್ಮರ್ ಎಂಬವರ ಸ್ವಿಫ್ಟ್ ಡಿಸೈರ್ ಕಾರಲ್ಲಿ ಸುಳ್ಯ ಸ್ಟೇಟ್ ಬ್ಯಾಂಕ್ ಮೇನೇಜ‌ರ್ ಉತ್ಸವ್ ಚಕ್ರವರ್ತಿ ಹಾಗೂ ಇನ್ನೊಬ್ಬರು ಫೀಲ್ಡ್‌ ಸ್ಟಾಫ್ ಸಾಲ ವಸೂಲಾತಿಗಾಗಿ ಬಾಡಿಗೆ ಕಾರಲ್ಲಿ ಪಂಜ ಕಡೆಗೆ ಹೋಗಿ ಬೆಳ್ಳಾರೆಯಿಂದ ಕಡೆಯಿಂದ ಸುಳ್ಯ ಕಡೆಗೆ ಹಿಂತಿರುಗಿ ಬರುತ್ತಿದ್ದರು. ಬೇಂಗಮಲೆಯಲ್ಲಿ ರಸ್ತೆಬದಿಯಲ್ಲಿದ್ದ ದೊಡ್ಡ ಚೇರೆ ಮರ ಚಲಿಸುತ್ತಿದ್ದ

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಜಖಂ,ಪ್ರಯಾಣಿಕರಿಗೆ ಗಾಯ Read More »

ದೇಹವನ್ನು ತಂಪಾಗಿಸಿಕೊಳ್ಳಲು ಕಲ್ಲಂಗಡಿ ತಿನ್ನುವ ಮೊದಲು ನೂರು ಬಾರಿ ಯೋಚಿಸುವುದು ಅಗತ್ಯ

ಇದೀಗ ಬೇಸಿಗೆ ಆರಂಭವಾಗಿ ಉರಿ ಬಿಸಿಲಿನ ಉಷ್ಣತೆ ಹೆಚ್ಚುತ್ತಿದೆ.ಉರಿ ಬಿಸಿಲಿನಿಂದ ದೇಹವನ್ನು ತಂಪು ಮಾಡಿಕೊಳ್ಳಲು ಕೆಲವರು ಹಣ್ಣು, ಜ್ಯೂಸ್ ಮತ್ತು ಐಸ್ ಕ್ರೀಂ ಸೇವಿಸುತ್ತಾರೆ, ನೀವು ಖುಷಿಯಿಂದ ಸವಿಯುವ ಈ ಆಹಾರಗಳು ನಿಜಕ್ಕೂ ಸುರಕ್ಷಿತವೋ ಎಂದು ಆರೋಗ್ಯ ಇಲಾಖೆ ಸಂಶಯ ವ್ಯಕ್ತಪಡಿಸಿದೆ. ಹೀಗಾಗಿ ಸದ್ಯದಲ್ಲೇ ಈ ಉತ್ಪನ್ನಗಳ ಸ್ಯಾಂಪಲ್ ಟೆಸ್ಟ್ ನಡೆಸಲು ತೀರ್ಮಾನಿಸಲಾಗಿದೆ.ಬೇಸಿಗೆ ದಿನಗಳಲ್ಲಿ ಕಲ್ಲಂಗಡಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ವ್ಯಾಪಾರಿಗಳು ಹೆಚ್ಚು ಮಾರಾಟ ಮಾಡಲು ಮತ್ತು ಗ್ರಾಹಕರನ್ನು ಆಕರ್ಷಿಸಲು ಕೃತಕ ಬಣ್ಣಗಳನ್ನು ಬಳಸುವ ಪ್ರಕರಣಗಳು ಪತ್ತೆಯಾಗಿವೆ. ಕೆಲವು

ದೇಹವನ್ನು ತಂಪಾಗಿಸಿಕೊಳ್ಳಲು ಕಲ್ಲಂಗಡಿ ತಿನ್ನುವ ಮೊದಲು ನೂರು ಬಾರಿ ಯೋಚಿಸುವುದು ಅಗತ್ಯ Read More »

25 ಕೋಟಿ ಅನುದಾನ ಅಧಿಕೃತ ಪ್ರಕಟಣೆ ಅಲ್ಲ- ಸುಳ್ಯ ಶಾಸಕ ಕಚೇರಿ ಪ್ರಕಟಣೆ

ಸುಳ್ಯ:ಮುಖ್ಯಮಂತ್ರಿ ವಿಶೇಷ ಅನುದಾನ 25 ಕೋಟಿ ಎಂಬ ವಿಷಯದಲ್ಲಿ ಕೆಲವು ಸ್ಥಳೀಯ ಪತ್ರಿಕೆಗಳಲ್ಲಿ ಪ್ರಕಟವಾದ ವಿವರ ಶಾಸಕರ ಅಧಿಕೃತ ಪ್ರಕಟಣೆ ಅಲ್ಲ. ಮುಖ್ಯಮಂತ್ರಿ ಮೂಲ ಸೌಕರ್ಯ ನಿಧಿ 25ಕೋಟಿ ಅನುದಾನ ಹಂಚಿಕೆಯ ವಿವರಗಳು ಪ್ರಕಟವಾಗಿದ್ದು ಇದು ಶಾಸಕರ ಕಛೇರಿಯಿಂದ ಅಧಿಕೃತವಾಗಿ ಕೊಟ್ಟಿರುವುದಿಲ್ಲ. ಮುಂದಿನ ದಿನಗಳಲ್ಲಿ ಈ ಕುರಿತು ಅಧಿಕೃತವಾಗಿ ಶಾಸಕರ ಕಚೇರಿ ಪ್ರಕಟಣೆ ಹೊರಡಿಸಲಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಅವರ ಕಚೇರಿ ಪ್ರಕಟಣೆ ತಿಳಿಸಿದೆ.

25 ಕೋಟಿ ಅನುದಾನ ಅಧಿಕೃತ ಪ್ರಕಟಣೆ ಅಲ್ಲ- ಸುಳ್ಯ ಶಾಸಕ ಕಚೇರಿ ಪ್ರಕಟಣೆ Read More »

ನೆದರ್ಲ್ಯಾಂಡ್ಸ್ ವಿರುದ್ಧ ಭಾರತ ತಂಡಕ್ಕೆ 17 ರನ್ ಗಳ ಅಂತರದ ಭರ್ಜರಿ ಗೆಲುವು

ಅಹ್ಮದಾಬಾದ್‌ನಲ್ಲಿ ಬುಧವಾರ ನಡೆದ ‘ಎ’ ಗುಂಪಿನ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ಸ್ ತಂಡಗಳು ಮುಖಾಮುಖಿಯಾದವು. ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿ 194 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ನೆದರ್ಲ್ಯಾಂಡ್ಸ್ ತಂಡ 176 ರನ್ ಗಳಿಸಿ ಸೋಲು ಕಂಡಿದೆ. ಈ ಮೂಲಕ ಟೀಂ ಇಂಡಿಯಾ 17 ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸಿದೆ.

ನೆದರ್ಲ್ಯಾಂಡ್ಸ್ ವಿರುದ್ಧ ಭಾರತ ತಂಡಕ್ಕೆ 17 ರನ್ ಗಳ ಅಂತರದ ಭರ್ಜರಿ ಗೆಲುವು Read More »

ಸಂಪಾಜೆ : ಕೊಡಗು ದ.ಕ ಗಡಿಭಾಗದಲ್ಲಿ ಭಾರೀ ಮಳೆ

ಅರಂತೋಡು : ಫೆ.18ರಂದು ದ.ಕ ಕೊಡಗು ಗಡಿಭಾಗವಾದ ಸಂಪಾಜೆ ಚೆಕ್ ಪೋಸ್ಟ್ ವಠಾರದಲ್ಲಿ ಸಾಧಾರಣ ಮಳೆ ಸುರಿದ ಘಟನೆ ವರದಿಯಾಗಿದೆ.ಕಳೆದ ಕೆಲವು ದಿನಗಳಿಂದ ಸುಡು ಬಿಸಿಲಿನ ವಾತಾವರಣ ಇದ್ದು, ಇಂದು ಸುಮಾರು 11 ಗಂಟೆಯ ವೇಳೆಗೆ ಮೋಡ ಕವಿದ ವಾತಾವರಣವಿತ್ತು. ಸಂಜೆ ೪.೩೦ರ ವೇಳೆಗೆ ಧಾರಾಕಾರ ಮಳೆ ಸುರಿಯಿತು. ಸುಮಾರು ೧೦ ನಿಮಿಷಗಳ ಕಾಲಮಳೆ ಸುರಿದು ಇಳೆ ತಂಪಾಯಿತು.ಅರೆಕಲ್ಲು,ಕೊಯನಾಡು,ಜೋಡುಪಾಲ,ಮದೆನಾಡು,ದೇವರಕೊಲ್ಲಿ ಇತರೆಡೆ ಮಳೆ ಸುರಿದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಸುಳ್ಯ ನಗರ ಸೇರಿದಂತೆ ತಾಲೂಕಿನ ಗ್ರಾಮಗಳಲ್ಲಿ ಕಳೆದ ಮೂರು ದಿವಸಗಳಿಂದ

ಸಂಪಾಜೆ : ಕೊಡಗು ದ.ಕ ಗಡಿಭಾಗದಲ್ಲಿ ಭಾರೀ ಮಳೆ Read More »

ತೊಡಿಕಾನ : ವೈಭವದಿಂದ ನಡೆದ ಮಲ್ಲಿಕಾರ್ಜುನ ದೇವರ ದರ್ಶನ ಬಲಿ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಪೂರ್ವ ಸಂಪ್ರದಾಯದಂತೆ ಬ್ರಹ್ಮಶ್ರೀ ಆರೋತ್ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿಮಹಾಶಿವರಾತ್ರಿ ಉತ್ಸವದ ಪ್ರಯಕ್ತ ಫೆ.16ರಂದು ಶ್ರೀ ದೇವರ ದರ್ಶನ ಬಲಿ ನಡೆಯಿತು.ಬಳಿಕ ಮಹಾಪೂಜೆ ನಡೆದು ಪ್ರಸಾದ ವಿತರಣೆ,ತುಲಾಭಾರ ಸೇವೆ ನಡೆಯಿತು.ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವ ಯು.ಕೆ,ಸದಸ್ಯರಾದ ಕೆ.ಕೆ ಬಾಲಕ್ರಷ್ಣ ಕುಂಟುಕಾಡು,ಮಾಲತಿ ಬೋಜಪ್ಪ ಗೌಡ,ವಸಂತ ಪೆಲ್ತಡ್ಕ, ತಿಮ್ಮಯ್ಯ ಮೆತ್ತಡ್ಕ,ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಯು.ಎಂ ಕಿಶೋರ್ ಉಳುವಾರು,ಸದಸ್ಯರಾದ ಚಂದ್ರಕಲಾ ಕುತ್ತಮೊಟ್ಟೆ,ಎಸ್.ಪಿ ಲೋಕನಾಥ ,ಅರಂತೋಡು ತೊಡಿಕಾನ ಪ್ರಾಥಮಿಕ ಕ್ರಷಿ ಪತ್ತಿನ

ತೊಡಿಕಾನ : ವೈಭವದಿಂದ ನಡೆದ ಮಲ್ಲಿಕಾರ್ಜುನ ದೇವರ ದರ್ಶನ ಬಲಿ Read More »

error: Content is protected !!
Scroll to Top