Uncategorized

ಮನೆಯ ಹಿಂಬದಿಯ ಬಾವಿಗೆ ಬಿದ್ದ ಮಗುವಿನ ರಕ್ಷಣೆ

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಘಟನೆ ಕೊಣಾಜೆಯ ಬೆಳ್ಳ ಸಮೀಪದ ಮಾರಿಯಮ್ಮಗೋಳಿ ಎಂಬಲ್ಲಿಂದ ವರದಿಯಾಗಿದೆ. ಒಂದು ಒಂದೂವರೆ ವರ್ಷದ ಮಗುವೊಂದು ಆಟವಾಡುತ್ತಾ ಹೋಗಿ ಮನೆಯ ಹಿಂಭಾಗದಲ್ಲಿ ಇರುವ ಬಾವಿಗೆ ಬಿದ್ದಿದೆ. ಕೂಡಲೇ ಮನೆ ಮಂದಿ ಬೊಬ್ಬೆ ಹಾಕಿದಾಗ ಮಗುವಿನ ಚಿಕ್ಕಪ್ಪ ಜೀವನ್ ಬಾವಿಗೆ ಹಾರಿದ್ದಾರೆ. ಬಳಿಕ ಸ್ಥಳೀಯ ಯುವಕ ವಿವೇಕ್ ಪೂಜಾರಿ ಬಾವಿಗಿಳಿದು ಮಗುವನ್ನು ರಕ್ಷಿಸಿದ್ದಾರೆ . ಅದೃಷ್ಟವಶಾತ್ ಯಾವುದೇ ಅಪಾಯವಾಗದೇ ಮಗು ತಾಯಿಯ ಮಡಿಲು ಸೇರಿದೆ. ಬಳಿಕ ಮಗುವನ್ನು ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ವೈದ್ಯರು ಪರೀಕ್ಷೆ […]

ಮನೆಯ ಹಿಂಬದಿಯ ಬಾವಿಗೆ ಬಿದ್ದ ಮಗುವಿನ ರಕ್ಷಣೆ Read More »

ಕಾಮಗಾರಿ ನಡೆಯದೆ ನೆನೆಗುದಿಗೆ ಬಿದ್ದ ನಿರ್ಮಾಣ ಹಂತದ ಅಂಬೇಡ್ಕರ್ ಭವನ ಕಾಮಗಾರಿ ಪರಿಶೀಲಿಸಿದ ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯದಲ್ಲಿ ನಿರ್ಮಾಣ ಹಂತದಲ್ಲಿ ಕಾಮಗಾರಿ ನಡೆಯದೆ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಅಂಬೇಡ್ಕ‌ರ್ ಭವನ ಕಟ್ಟಡದ ಸ್ಥಳಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯರವರು ಅಕ್ಟೋಬರ್ ೨೭ರಂದು ಭೇಟಿ ನೀಡಿ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವೀಕ್ಷಣೆ ನಡೆಸಿದರು.ಸಂದರ್ಭದಲ್ಲಿ ಶಾಸಕರೊಂದಿಗೆ ಇದ್ದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಇಂಜಿನಿಯರ್ ಹಾಗೂ ಗುತ್ತಿಗೆದಾರರಲ್ಲಿ ಮುಂದಿನ ಕಾಮಗಾರಿಗೆ ಬೇಕಾಗಿರುವ ಎಸ್ಟಿಮೇಟ್ ಕೂಡಲೇ ತಯಾರಿಸಿ ಕೊಡುವ ಕುರಿತು ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರುಗಳಾದ ಎಸ್.ಎನ್‌. ಮನ್ಮಥ, ಶುಭೋದ್

ಕಾಮಗಾರಿ ನಡೆಯದೆ ನೆನೆಗುದಿಗೆ ಬಿದ್ದ ನಿರ್ಮಾಣ ಹಂತದ ಅಂಬೇಡ್ಕರ್ ಭವನ ಕಾಮಗಾರಿ ಪರಿಶೀಲಿಸಿದ ಶಾಸಕಿ ಭಾಗೀರಥಿ ಮುರುಳ್ಯ Read More »

ಮೊಂತಾ ಚಂಡಮಾರುತದ ಪ್ರಭಾವ,ಕರ್ನಾಟಕದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ!

ಮೊಂತಾ ಚಂಡಮಾರುತ ನಾಳೆ ಆಂಧ್ರ ಪ್ರದೇಶದ ತೀರಕ್ಕೆ ಅಪ್ಪಳಿಸಲಿದ್ದು, ಕರ್ನಾಟಕಕ್ಕೆ ಭಾರೀ ಮಳೆಯ ಎಚ್ಚರಿಕೆಯನ್ನ ಹವಾಮಾನ ಇಲಾಖೆ ನೀಡಿದೆ. ಕಳೆದ ತಿಂಗಳಿನಲ್ಲಿ ವಿಪರೀತ ಮಳೆಯಿದ್ದ ಕಾರಣ ಹಲವು ಶಾಲಾ – ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇದೀಗ ಮತ್ತೆ ಧಾರಾಕಾರ ಮಳೆಯಾಗುವ ಪರಿಣಾಮ ಅಕ್ಟೋಬರ್ 28ರಂದು ಮಂಗಳವಾರ ರಾಜ್ಯದ ಹಲವು ಜಿಲ್ಲೆಗಳ ಶಾಲಾ – ಕಾಲೇಜುಗಳಇಗೆ ರಜೆ ಘೋಷಣೆ ಮಾಡುವ ಸಾಧ್ಯತೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ,

ಮೊಂತಾ ಚಂಡಮಾರುತದ ಪ್ರಭಾವ,ಕರ್ನಾಟಕದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ! Read More »

ವಿಶ್ವಸಂಸ್ಥೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಸಂಸದ ಕ್ಯಾ. ಚೌಟ ಅವರಿಗೆ ಪುತ್ತೂರಿನಲ್ಲಿ ಬಿಜೆಪಿಯಿಂದ ಸನ್ಮಾನ

ಪುತ್ತೂರು: ಅಮೆರಿಕದ ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾರತವನ್ನು ಪ್ರತಿನಿಧಿಸಿ ದಕ್ಷಿಣ ಕನ್ನಡ ಕ್ಷೇತ್ರಕ್ಕೆ ವಿಶೇಷ ಹೆಮ್ಮೆಯುಂಟು ಮಾಡಿರುವ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಇಂದು ಭಾರತೀಯ ಜನತಾ ಪಾರ್ಟಿಯ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಗೌರವಿಸಲಾಯಿತು. ಇಲ್ಲಿನ ಪಕ್ಷದ ಕಚೇರಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು, ವಿಶ್ವಸಂಸ್ಥೆಯ ಅಧಿವೇಶನದಲ್ಲಿ ಭಾಗವಹಿಸುವುದಕ್ಕೆ ಭಾರತದ ಸರ್ವಪಕ್ಷಗಳ ನಿಯೋಗದಲ್ಲಿ ತೆರಳುವುದಕ್ಕೆ ತಮ್ಮನ್ನು ಗುರುತಿಸಿ ಅವಕಾಶ ನೀಡುವ ಮೂಲಕ ವಿಶೇಷ ಮನ್ನಣೆ

ವಿಶ್ವಸಂಸ್ಥೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಸಂಸದ ಕ್ಯಾ. ಚೌಟ ಅವರಿಗೆ ಪುತ್ತೂರಿನಲ್ಲಿ ಬಿಜೆಪಿಯಿಂದ ಸನ್ಮಾನ Read More »

ಕಾಂಗ್ರೆಸ್‌ನ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿ ಡಾ. ಕಲ್ಲಡ್ಕ ಪ್ರಭಾಕರ ಭಟ್‌ ಮೇಲೆ ಕೇಸ್‌: ಸಂಸದ ಕ್ಯಾ. ಚೌಟ ಆಕ್ರೋಶ

ಮಂಗಳೂರು: ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರು, ಹಿಂದುತ್ವದ ಪ್ರಬಲ ಧ್ವನಿ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಮೇಲೆ ರಾಜಕೀಯ ಪ್ರೇರಿತ ಮೊಕದ್ದಮೆ ಹೂಡಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಆರೋಪಿಸಿದ್ದಾರೆ. ಹಿಂದೂ ಸಮಾಜದ ಆದರಣೀಯರಾಗಿರುವ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಬಗ್ಗೆ ಸಚಿವ ಪ್ರಿಯಾಂಕ ಖರ್ಗೆ ಅವರು ಕೇವಲವಾಗಿ ಮಾತಾಡಿರುವುದು ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ರಾಷ್ಟ್ರೀಯ ವಿಚಾರಧಾರೆಗಾಗಿ

ಕಾಂಗ್ರೆಸ್‌ನ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿ ಡಾ. ಕಲ್ಲಡ್ಕ ಪ್ರಭಾಕರ ಭಟ್‌ ಮೇಲೆ ಕೇಸ್‌: ಸಂಸದ ಕ್ಯಾ. ಚೌಟ ಆಕ್ರೋಶ Read More »

ರಬ್ಬರ್ ಟ್ಯಾಪರ್ ಕುಸಿದು ಬಿದ್ದು ಸಾವು

ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ಕಾರ್ಮಿಕರೊಬ್ಬರು ಕುಸಿದು ಬಿದ್ದು ಮೃತ ಪಟ್ಟ ಘಟನೆ ಕಡಬ ತಾಲೂಕಿನ ಮರ್ದಾಳ ಸಮೀಪದ ಐತ್ತೂರು ಗ್ರಾಮದಿಂದ ವರದಿಯಾಗಿದೆ.ಮ್ರತಪಟ್ಟ ವ್ಯಕ್ತಿಯನ್ನು ಸುರೇಶ ಎಂದು ಗುರುತಿಸಲಾಗಿದೆ.ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದಾಗ ಕುಸಿದು ಬಿದ್ದರು.ಬಳಿಕ ಚಿಕಿತ್ಸೆಗಾಗಿ ಕಡಬ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ವೈದ್ಯಾಧಿಕಾರಿಯವರು ಪರಿಕ್ಷಿಸಿ ಮೃತಪಟ್ಟಿರುವುದಾಗಿ ಘೋಷಿಸಿರುವುದಾಗಿ ತಿಳಿದು ಬಂದಿದೆ.ಪತ್ನಿ ದಿವ್ಯ ಅವರು ಒಂದು ವಾರದ ಹಿಂದೆ ದೀಪಾವಳಿ ಹಬ್ಬದ ಪ್ರಯುಕ್ತ ಅವರ ಮಕ್ಕಳನ್ನು ಕರೆದುಕೊಂಡು ಸುಳ್ಯ ತಾಲೂಕಿನ ಕೂಟೇಲು ಎಂಬಲ್ಲಿಗೆ ಹೋಗಿದ್ದರು.

ರಬ್ಬರ್ ಟ್ಯಾಪರ್ ಕುಸಿದು ಬಿದ್ದು ಸಾವು Read More »

ದೇಶದಲ್ಲೇ ವಿನೂತನ ಮಾದರಿಯಲ್ಲಿ ನಡೆಯಲಿದೆ ಹನುಮಗಿರಿ ಬ್ರಹ್ಮಕಲಶೋತ್ಸವ

2026ರ ಏಪ್ರಿಲ್ 9 ರಿಂದ 12ರ ವರೆಗೆ ನಡೆಯಲಿರುವ ಶ್ರೀಕ್ಷೇತ್ರ ಹನುಮಗಿರಿ ಶ್ರೀ ಕೋದಂಡರಾಮ ಮತ್ತು ಪಂಚಮುಖಿ ಆಂಜನೇಯ ದೇವರ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಸಮಿತಿ ರಚನೆ ಮತ್ತು ಸಮಾಲೋಚನಾ ಸಭೆಯು ಅಕ್ಟೋಬರ್ 26ರಂದು ಹನುಮಗಿರಿಯ ವೈದೇಹಿ ಸಭಾಭವನದಲ್ಲಿ ನಡೆಯಿತು. ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಮಾತನಾಡಿಬ್ರಹ್ಮಕಲಶೋತ್ಸವದ ಸಮಾಲೋಚನೆಗೆ ಕರೆದಿದ್ದ ಪ್ರಥಮ ಸಭೆಗೆ 500ಕ್ಕೂ ಅಧಿಕ ಜನ ಸೇರಿರುವುದು ಅತ್ಯದ್ಭುತ. ಶ್ರೀ ಕ್ಷೇತ್ರ ಹನುಮಗಿರಿಯ ಬ್ರಹ್ಮ ಕಲಶೋತ್ಸವ ರಾಷ್ಟ್ರಮಟ್ಟದಲ್ಲೇ ಶ್ರೇಷ್ಠ ಕಾರ್ಯಕ್ರಮವಾಗಿ ಮೂಡಿ ಬರಲಿದೆ.

ದೇಶದಲ್ಲೇ ವಿನೂತನ ಮಾದರಿಯಲ್ಲಿ ನಡೆಯಲಿದೆ ಹನುಮಗಿರಿ ಬ್ರಹ್ಮಕಲಶೋತ್ಸವ Read More »

ಬಾಲಕಿಯರು ನಾಪತ್ತೆ

ದಿನಾಂಕ 24.10.2025 ರಂದು ಮುಳಬಾಗಿಲು ನಗರದ ಮುತ್ಯಾಲಾಪೇಟೆಯ ವಾಸಿ ರಮೇಶ್‌ ರವರ ಮಕ್ಕಳಾದ ತನುಶ್ರೀ 11 ವರ್ಷ ಹಾಗೂ ಮೋನಿಕಾ 14 ವರ್ಷ ಇವರು ಮುಳಬಾಗಿಲು ನಗರದ ಜ್ಞಾನ ವಾಹಿನಿ ಶಾಲೆಯಲ್ಲಿ ಓದುತ್ತಿದ್ದು ಇಂದು ಬೆಳಿಗ್ಗೆ ಶಾಲೆಗೆ ಹೋಗುವುದಾಗಿ ಮನೆಯಿಂದ ಹೋಗಿದ್ದು ಶಾಲೆಗೂ ಹೋಗದೆ ಮನೆಗೂ ಬರದೇ ಕಾಣೆಯಾಗಿರುತ್ತಾರೆ. ಎಲ್ಲ ಕಡೆ ವಿಚಾರಿಸಲಾಗಿ ಎಲ್ಲಿಯೂ ಪತ್ತೆಯಾಗಿರುವುದಿಲ್ಲ .ಕಾಣೆಯಾದ ತಮ್ಮ ಮಕ್ಕಳ ಪತ್ತೇಗಾಗಿ ಕೋರಿರುತ್ತಾರೆ. ಸದರಿ ಮಕ್ಕಳ ಮಾಹಿತಿಗಾಗಿ ಎಲ್ಲ ಬೀಟ್ ಗ್ರೂಪ್ ಗಳಿಗೆ ಶೇ‌ರ್ ಮಾಡಲು ಮೇಲಾಧಿಕಾರಿಗಳು

ಬಾಲಕಿಯರು ನಾಪತ್ತೆ Read More »

ಅರೆಭಾಷೆ ಗ್ರಾಮೋತ್ಸವ ಮೂಲಕ ಅರೆಭಾಷಿಕರ ಸಂಸ್ಕ್ರತಿ, ಸಂಪ್ರದಾಯ ಉಳಿವಿಗೆ ಪ್ರಯತ್ನ : ಸದಾನಂದ ಮಾವಜಿ

ಇಂದು ಬಡ್ಡಡ್ಕದಲ್ಲಿ ಅರೆಭಾಷೆ ಗ್ರಾಮೋತ್ಸವಕ್ಕೆ ಚಾಲನೆ ನೀಡಲಾಗಿದೆ‌.ಅರೆಭಾಷೆ ಗ್ರಾಮೋತ್ಸವ ಮೂಲಕ ಅರೆಭಾಷಿಕರ ಸಂಸ್ಕ್ರತಿ, ಸಂಪ್ರದಾಯ,ಆಚರಣೆಗಳ ಉಳಿವಿಗೆ ಪ್ರಯತ್ನಿಸಲಾಗುವುದೆಂದು ಕರ್ನಾಟಕ ಅರೆಭಾಷೆ ಸಂಸ್ಕ್ರತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಹೇಳಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ಆಲೆಟ್ಟಿಯ ಬಡ್ಡಡ್ಕ ರಾಮಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಅ. 26 ರಂದು ನಡೆದ ಅರೆಭಾಷೆ ಗ್ರಾಮೋತ್ಸವ 2025ರ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸುಳ್ಯ

ಅರೆಭಾಷೆ ಗ್ರಾಮೋತ್ಸವ ಮೂಲಕ ಅರೆಭಾಷಿಕರ ಸಂಸ್ಕ್ರತಿ, ಸಂಪ್ರದಾಯ ಉಳಿವಿಗೆ ಪ್ರಯತ್ನ : ಸದಾನಂದ ಮಾವಜಿ Read More »

ಸ್ಪಂದನ ಗೆಳೆಯರ ಬಳಗ (ರಿ.) ಅಡ್ತಲೆ ಇವರ ಪಂಚಸಪ್ತತಿ ಸ್ವಚ್ಛತಾ ಅಭಿಯಾನ-2025 ನಾಲ್ಕನೇ ಕಾರ್ಯಕ್ರಮ

ಯುವಜನ ಸಂಯುಕ್ತ ಮಂಡಳಿ (ರಿ.)ಸುಳ್ಯ ಇದರ ಆಶ್ರಯದಲ್ಲಿ ಸ್ಪಂದನ ಗೆಳೆಯರ ಬಳಗ (ರಿ.) ಅಡ್ತಲೆ ಇವರ ವತಿಯಿಂದ ಪಂಚಸಪ್ತತಿ ಸ್ವಚ್ಛತಾ ಅಭಿಯಾನದ ನಾಲ್ಕನೇ ಕಾರ್ಯಕ್ರಮ ಅರಂತೋಡು ಗ್ರಾಮ ಪಂಚಾಯತಿಯ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮದೊಂದಿಗೆ ನಡೆಯಿತು.ಗ್ರಾಮ ಪಂಚಾಯತ್ ಅರಂತೋಡು,ಚಂದನ ಯುವತಿ ಮಂಡಲ (ರಿ.) ಅಡ್ತಲೆ, ನಾಗರಿಕ ಹಿತರಕ್ಷಣಾ ವೇದಿಕೆ ಅಡ್ತಲೆಯ ಸಹಯೋಗದೊಂದಿಗೆ ನಡೆದ ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಸುಮಾರು 30ಕ್ಕೂ ಮಿಕ್ಕಿ ಸದಸ್ಯರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು. ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳ ಸಹಿತ ಅರಂತೋಡು ಪೇಟೆಯಲ್ಲಿ

ಸ್ಪಂದನ ಗೆಳೆಯರ ಬಳಗ (ರಿ.) ಅಡ್ತಲೆ ಇವರ ಪಂಚಸಪ್ತತಿ ಸ್ವಚ್ಛತಾ ಅಭಿಯಾನ-2025 ನಾಲ್ಕನೇ ಕಾರ್ಯಕ್ರಮ Read More »

error: Content is protected !!
Scroll to Top