Uncategorized

ಮಡಿಕೇರಿ ಮಂಗಳೂರು‌ ರಸ್ತೆಯಲ್ಲಿ ಬಸ್ಸು ಚಾಲಕನಿಗೆ ಹೃದಯಘಾತವಾಗಿ ಬರೆಗೆ ಗುದ್ದಿದ ಬಸ್ಸು ,ಚಾಲಕ ಸಾವು,ಪ್ರಯಾಣಿಕರು ಪಾರು

ಬೆಂಗಳೂರಿನಿಂದ ಸುಳ್ಯ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಒಂದರ ಚಾಲಕನಿಗೆ ಹೃದಯಾಘಾತವಾಗಿ ಬಸ್ ನಿಯಂತ್ರಣ ತಪ್ಪಿ ಬರೆಗೆ ಗುದ್ದಿ ನಿಂತ ಹಾಗೂ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿ ಚಾಲಕ ಹ್ರದಯಘಾತದಿಂದ ಸಾವನ್ನಪ್ಪಿದ ಮೇ.8ರಂದು ಮುಂಜಾನೆ ಮಡಿಕೇರಿ ಬಳಿಯ ಕಾಟಿಗೇರಿಯಿಂದ ವರದಿಯಾಗಿದೆ.ರಾತ್ರಿ ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗುವ ಪೂರ್ಣಿಮ ಬಸ್ ನಿನ್ನೆ ರಾತ್ರಿ ಬೆಂಗಳೂರಿನಿಂದ ಹೊರಟಿತು. ಇಂದು ಮುಂಜಾನೆ ಮಡಿಕೇರಿ ದಾಟಿ ಬರುತ್ತಿರುವಾಗ ಕಾಟಿಕೇರಿ ಬಳಿ ತಿರುವಿನಲ್ಲಿ ಬಸ್ ಚಾಲಕ ಶಿವಕುಮಾರ್ ಹೃದಯಾಘಾತಕ್ಕೊಳಗಾಗಿ ಬಸ್ ನಿಯಂತ್ರಣ ತಪ್ಪಿ […]

ಮಡಿಕೇರಿ ಮಂಗಳೂರು‌ ರಸ್ತೆಯಲ್ಲಿ ಬಸ್ಸು ಚಾಲಕನಿಗೆ ಹೃದಯಘಾತವಾಗಿ ಬರೆಗೆ ಗುದ್ದಿದ ಬಸ್ಸು ,ಚಾಲಕ ಸಾವು,ಪ್ರಯಾಣಿಕರು ಪಾರು Read More »

ಕಲ್ಲುಗುಂಡಿ : ಹಿರಿಯ ಯಕ್ಷಗಾನ ಕಲಾವಿದ ಪಕೀರಪ್ಪ ಪೂಜಾರಿ ನಿಧನ

ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಚೆಟ್ಟಕಲ್ಲು ನಿವಾಸಿ, ಹಿರಿಯ ಯಕ್ಷಗಾನ ಕಲಾವಿದ, ಪಕೀರಪ್ಪ ಪೂಜಾರಿಯವರು ಅಲ್ಪಕಾಲದ ಅಸೌಖ್ಯದಿಂದ ಮೇ. 7 ರಂದು ನಿಧನರಾದರು.ಮೃತರು ಪುತ್ರರಾದ ರಾಮಕೃಷ್ಣ, ತೇಜಪ್ರಕಾಶ್, ಚಂದ್ರಶೇಖ‌ರ್, ಪುತ್ರಿಯನ್ನು ಸೊಸೆಯಂದಿರು, ಅಳಿಯ, ಮೊಮ್ಮಕ್ಕಳನ್ನು ಅಗಲಿದ್ದಾರೆ.

ಕಲ್ಲುಗುಂಡಿ : ಹಿರಿಯ ಯಕ್ಷಗಾನ ಕಲಾವಿದ ಪಕೀರಪ್ಪ ಪೂಜಾರಿ ನಿಧನ Read More »

ಆಪರೇಷನ್‌ ಸಿಂಧೂರ್‌ಗೆ ವರ್ಷದ ಸಂಭ್ರಮ : ವೀಡಿಯೊ ಹಂಚಿಕೊಂಡ ಭಾರತೀಯ ಸೇನೆ

ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ್’ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ಸಂಭ್ರಮದಲ್ಲಿದ್ದು ಈ ಹಿನ್ನೆಲೆಯಲ್ಲಿ, ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ಅಡಗಿದ್ದ ಉಗ್ರರ ವಿರುದ್ಧ ನಡೆದಿದ್ದ ಕಾರ್ಯಾಚರಣೆಯ ವಿಶೇಷ ವೀಡಿಯೊವನ್ನು ಬಿಡುಗಡೆ ಮಾಡಿದೆ. ಒಂದು ವರ್ಷದ ಹಿಂದೆ, ಭಾರತದ ಭದ್ರತೆಗೆ ಸವಾಲಾಗಿದ್ದ ಭಯೋತ್ಪಾದಕ ತಾಣಗಳನ್ನು ಗುರಿಯಾಗಿಸಿಕೊಂಡು ರಹಸ್ಯ ಕಾರ್ಯಾಚರಣೆ ನಡೆಸಿ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಲಾಗಿತ್ತು. ಭಾರತದ ಮೇಲೆ ಕಣ್ಣು ಹಾಕುವ ಅಥವಾ ಭಯೋತ್ಪಾದನೆಗೆ ಬೆಂಬಲ ನೀಡುವ ಶಕ್ತಿಗಳನ್ನು ಭಾರತೀಯ ಸೇನೆ ಹುಡುಕಿ ಶಿಕ್ಷಿಸುತ್ತದೆ ಎಂಬಸಂದೇಶವನ್ನು ಈ ವೀಡಿಯೊ ನೀಡಿದೆ.

ಆಪರೇಷನ್‌ ಸಿಂಧೂರ್‌ಗೆ ವರ್ಷದ ಸಂಭ್ರಮ : ವೀಡಿಯೊ ಹಂಚಿಕೊಂಡ ಭಾರತೀಯ ಸೇನೆ Read More »

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು : ಸುಳ್ಯದಲ್ಲಿ ಬಿಜೆಪಿಯಿಂದ ಸಿಹಿತಿಂಡಿ ಹಂಚಿ ಸಂಭ್ರಮಾಚರಣೆ

ಪಂಚರಾಜ್ಯ ರಾಜ್ಯ ಚುನಾವಣೆಯ ಮೂರು ರಾಜ್ಯಗಳ್ಲಿ ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ಸುಳ್ಯ ಬಿಜೆಪಿ ವತಿಯಿಂದ ಖಾಸಗಿ ಬಸ್ ನಿಲ್ದಾಣದ ಬಳಿಯಲ್ಲಿ ವಿಜಯೋತ್ಸವ ಆಚರಿಸಲಾಯಿತು.ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಜಿಲ್ಲಾ ಬಿಜೆಪಿ ಮುಖಂಡ ರಾಕೇಶ್ ರೈ ಕೆಡೆಂಜಿ, ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಪುಷ್ಪಾ ಮೇದಪ್ಪ,ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ ಬಿ.ಕೆ. ಸುಳ್ಯ ಸಿ‌.ಎ ವಿಕ್ರಂ ಅಡ್ಪಂಗಾಯ,

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು : ಸುಳ್ಯದಲ್ಲಿ ಬಿಜೆಪಿಯಿಂದ ಸಿಹಿತಿಂಡಿ ಹಂಚಿ ಸಂಭ್ರಮಾಚರಣೆ Read More »

ಪ್ರತಿ ಮನೆಯಲ್ಲಿ ಭಜನೆಯ ನಾದ ಮೊಳಗಬೇಕು : ಮಾಧವ ಗೌಡ

ಭಜನೆಯ ಮೂಲಕ ಭಗವಂತನ ನಾಮಸ್ಮರಣೆ ಮಾಡುವುದಿಂದ ಮನಸ್ಸಿಗೆ ಶ್ರೇಷ್ಠ ಸುಖ ಸಿಗುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆಯ ಸುಳ್ಯ ಯೋಜನಾ ಕಚೇರಿಯ ಯೋಜನಾಧಿಕಾರಿ ಮಾಧವ ಗೌಡ ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸುಳ್ಯ ,ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್,ಸುಳ್ಯ ವಲಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಇದರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರದ ಉದ್ಘಾಟನಾ

ಪ್ರತಿ ಮನೆಯಲ್ಲಿ ಭಜನೆಯ ನಾದ ಮೊಳಗಬೇಕು : ಮಾಧವ ಗೌಡ Read More »

ಜೇಸಿಐ ಸುಳ್ಯ ಪಯಸ್ವಿನಿ ಘಟಕ ವತಿಯಿಂದ ವಿಶ್ವ ಕಾರ್ಮಿಕ ದಿನ ಆಚರಣೆ 

ಜೇಸಿಐ ಸುಳ್ಯ ಪಯಸ್ವಿನಿವತಿಯಿಂದ  ವಿಶ್ವ ಕಾರ್ಮಿಕ ದಿನಾಚರಣೆ    ಕಾರ್ಯಕ್ರಮವನ್ನು  ಮೇ 2ರಂದು   ಸಂಚಯ ನಿವಾಸ ಚೂಂತಾರು ಇಲ್ಲಿ ಆಚರಿಸಲಾಯಿತು. ಜೇಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷೆ ಜೇಸಿ ಲತಾಶ್ರೀ ಸುಪ್ರೀತ್ ಮೋಂಟಡ್ಕ  ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಕಾರ್ಮಿಕ ದಿನದ ಪ್ರಯುಕ್ತ ಶ್ರಮಿಕ ವರ್ಗದ ಜನರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಎಲೇಕ್ಟ್ರಿಷನ್ ಆಗಿ ಗುರುತಿಸಿ ಕೊಂಡಿರುವ ಶ್ರೀ. ಹರಿಶ್ಚಂದ್ರ ತಂಟೆಪ್ಪಾಡಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಶ್ರೀ. ವಸಂತ ಶೆಟ್ಟಿ ಬೆಳ್ಳಾರೆ, ಅಧ್ಯಕ್ಷರು ದೆಹಲಿ ತುಳು ಸಿರಿ,

ಜೇಸಿಐ ಸುಳ್ಯ ಪಯಸ್ವಿನಿ ಘಟಕ ವತಿಯಿಂದ ವಿಶ್ವ ಕಾರ್ಮಿಕ ದಿನ ಆಚರಣೆ  Read More »

ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ವಿವಿಧ ವೈಧಿಕ ಕಾರ್ಯಕ್ರಮ

ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿಮೇ. 2ರಂದು ಪೂರ್ವಹ್ನ 8 ರಿಂದ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ 12 ಕಾಯಿ ಗಣಪತಿ ಹವನ,ಆಶ್ಲೇಷಾಬಲಿ, ಶತರುದ್ರಾಭಿಷೇಕ, ಕಲಶಅಭಿಷೇಕ ಹಾಗೂ ಪರಿವಾರ ದೈವಗಳಿಗೆ ಹಾಗೂ ನಾಗದೇವರಿಗೆ ಕಲಶ ಅಭಿಷೇಕ,ತಂಬಿಲ ಸೇವೆಗಳು ನಡೆಯಿತು.ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿ ಪ್ರಸಾದ್ ಕಾನತ್ತೂರು.ಸದಸ್ಯರಾದ ಸಂತೋಷ ಕುಮಾರ್ ರೈ, ಧರ್ಮಣ್ಣ ನಾಯ್ಕ ಗರಡಿ,ಮಾಯಿಲಪ್ಪ, ಎಣ್ಮೂರು,ಧರ್ಮಪಾಲ ಮರಕಡ,ಪವಿತ್ರ ,ಮಾಲೆಟ್ಟಿ, ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು.

ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ವಿವಿಧ ವೈಧಿಕ ಕಾರ್ಯಕ್ರಮ Read More »

ಶ್ರದ್ಧಾ ಭಕ್ತಿಯಿಂದ ನಡೆದ ಅಡ್ತಲೆ ಕುಟುಂಬಸ್ಥರ ಧರ್ಮ ನಡಾವಳಿ

ಅರಂತೋಡು ಗ್ರಾಮದ ಅಡ್ತಲೆ ಕುಟುಂಬಸ್ಥರ ಆದಿಮನೆಯಲ್ಲಿ ಧರ್ಮ ನಡಾವಳಿ ಏ.30 ಮತ್ತು ಮೇ.1ರಂದು ಶ್ರದ್ಧಾ ಭಕ್ತಿಯಿಂದ ನಡೆಯಿತು.ಏ.3೦ನೇ ಗುರುವಾರ ಪೂರ್ವಾಹ್ನ ಗಂಟೆ 10-೦೦ರಿಂದಶ್ರೀ ವೆಂಕಟ್ರಮಣ ದೇವರ ಹರಿಸೇವೆ ನಡೆಯಿತು.ಸಂಜೆ ಗಂಟೆ 6-00ಕ್ಕೆಶ್ರೀ ದೈವಗಳ ಭಂಡಾರ ತೆಗೆಯಲಾಯಿತು‌. ರಾತ್ರಿ ಗಂಟೆ 8-00ರ ನಂತರ ಉಪದೈವಗಳ ನೇಮ ನಡೆಯಿತು. ಮೇ 1ನೇ ಶುಕ್ರವಾರ ಶ್ರೀ ಧರ್ಮದೈವದ ನಡಾವಳಿ ಮತ್ತು ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆರಾತ್ರಿ ಗಂಟೆ 6-00ರಿಂದ ಉಪದೈವಗಳ ನೇಮೋತ್ಸವ ನಡೆಯಿತು.ಈ ಸಂದರ್ಭದಲ್ಲಿ ಅಧ್ಯಕ್ಷರಾದ ಗಿರೀಶ್ ಹೆಚ್,ಕುಟುಂಬದ ಹಿರಿಯರಾದ ಹೊನ್ನಪ್ಪ

ಶ್ರದ್ಧಾ ಭಕ್ತಿಯಿಂದ ನಡೆದ ಅಡ್ತಲೆ ಕುಟುಂಬಸ್ಥರ ಧರ್ಮ ನಡಾವಳಿ Read More »

ನಾಳೆ ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಪ್ರಯುಕ್ತ ವಿವಿಧ ವೈಧಿಕ ಕಾರ್ಯಕ್ರಮ

ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿಮೇ. 2ರಂದು ಪೂರ್ವಹ್ನ 8 ರಿಂದ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ 12 ಕಾಯಿ ಗಣಪತಿ ಹವನ,ಆಶ್ಲೇಷಾಬಲಿ, ಶತರುದ್ರಾಭಿಷೇಕ, ಕಲಶಅಭಿಷೇಕ ಹಾಗೂ ಪರಿವಾರ ದೈವಗಳಿಗೆ ಹಾಗೂ ನಾಗದೇವರಿಗೆ ಕಲಶ ಅಭಿಷೇಕ,ತಂಬಿಲ ಸೇವೆಗಳು ನಡೆಯಲಿದೆ .ಎಲ್ಲಾ ಭಕ್ತಭಿಮಾನಿಗಳು ಆಗಮಿಸಿ ಪ್ರಸಾದ ಸ್ವೀಕರಿಸ ಬೇಕಾಗಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿ ಪ್ರಸಾದ್ ಕಾನತ್ತೂರು ವಿನಂತಿಸಿಕೊಂಡಿದ್ದಾರೆ.

ನಾಳೆ ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಪ್ರಯುಕ್ತ ವಿವಿಧ ವೈಧಿಕ ಕಾರ್ಯಕ್ರಮ Read More »

ದಕ್ಷಿಣ ಕನ್ನಡ,ಉಡುಪಿ,ಕಾಸರಗೋಡು ಭಾಗದಲ್ಲಿ ರಾತ್ರಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆ

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಹಗಲು ತೀವ್ರ ಬಿಸಿಲು ಮತ್ತು ಸೆಖೆ ಇರಲಿದ್ದರೂ, ಸಂಜೆ ಹಾಗೂ ರಾತ್ರಿ ವೇಳೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಬೆಳಗಾವಿ ಮತ್ತು ಧಾರವಾಡದ ಗಡಿ ಭಾಗಗಳಲ್ಲೂ ಮಳೆ ನಿರೀಕ್ಷಿಸಲಾಗಿದೆ.ಮುಂದಿನ ಮೂರು ದಿನಗಳ ಕಾಲ ಈ ಭಾಗಗಳಲ್ಲಿ ಉತ್ತಮ ಮಳೆ ಮುಂದುವರಿಯಲಿದ್ದು, ಕಂಗಾಲಾಗಿದ್ದ ಜನರಿಗೆ ಬಿಸಿಲಿನಿಂದ ದೊಡ್ಡ ಮಟ್ಟದ ಸಮಾಧಾನ ಸಿಗಲಿದೆ.

ದಕ್ಷಿಣ ಕನ್ನಡ,ಉಡುಪಿ,ಕಾಸರಗೋಡು ಭಾಗದಲ್ಲಿ ರಾತ್ರಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆ Read More »

error: Content is protected !!
Scroll to Top