Uncategorized

ಬಸ್ ಡೋರ್ ತೆಗೆಯಲು ಸತಾಯಿಸಿದ ಡ್ರೈವರ್ : ಪ್ರಯಾಣಿಕರಿಂದ ದೂರು,ಡ್ರೈವರ್ ರೂಟ್ ಬದಲಾವಣೆ

ಸುಳ್ಯ‌ ಕೊಯನಾಡು ಕೆಎಸ್ ಆರ್ ಟಿಸಿ ಬಸ್ ಡ್ರೈವರ್ ಪ್ರಯಾಣಿಕರು ಬಸ್‌ನಿಂದ ಇಳಿಯಲು ಕೇಳಿಕೊಂಡರೆ ಬಸ್ ಡೋರ್ ತೆಗೆಯದೇ ಸತಾಯಿಸುತ್ತಿರುವ ಕುರಿತು ಸಾರ್ವಜನಿಕರಿಂದ ಡಿಪ್ಪೋ ಮ್ಯಾನೇಜರ್ ರಿಗೆ ದೂರು ಹೋದ ಪರಿಣಾಮ, ವಿಚಾರಣೆ ‌ನಡೆಸಿದ ಅಧಿಕಾರಿಗಳು ಆ ಡ್ರೈವರ್ ರೂಟ್ ಬದಲಾವಣೆ ಮಾಡಿರುವುದಾಗಿ ತಿಳಿದು ಬಂದಿದೆ. ಸುಳ್ಯ – ಕೊಯನಾಡು‌ ನಡುವೆ ಸಂಚಾರಿಸುವ ಕೆ.ಎಸ್.ಆರ್.ಟಿ‌. ಸಿ ಬಸ್ ನಲ್ಲಿ ಚಾಲಕನೋರ್ವ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿ ಪ್ರಯಾಣಿಕರಿಗೆ ಸಮಸ್ಯೆ ಉಂಟು ಮಾಡುತ್ತಾನೆಂದು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಪ್ರಯಾಣಿಕರು ಹಲವು ಬಾರಿ […]

ಬಸ್ ಡೋರ್ ತೆಗೆಯಲು ಸತಾಯಿಸಿದ ಡ್ರೈವರ್ : ಪ್ರಯಾಣಿಕರಿಂದ ದೂರು,ಡ್ರೈವರ್ ರೂಟ್ ಬದಲಾವಣೆ Read More »

ಚಂದನ ಸಾಹಿತ್ಯ ವೇದಿಕೆ ವತಿಯಿಂದ ದೀಪಾವಳಿ ಕವಿಗೋಷ್ಠಿ

ಚಂದನ ಸಾಹಿತ್ಯ ವೇದಿಕೆಯ ನೂತನ ಅಧ್ಯಕ್ಷರಾದ ಸಂಧ್ಯಾ (ಸಾನು ) ಉಬರಡ್ಕ ಅವರ ನೇತೃತ್ವದಲ್ಲಿ ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ “ದೀಪಾವಳಿ ಕವಿಗೋಷ್ಠಿ-2025” ಕಾರ್ಯಕ್ರಮವು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಅ. 26ರಂದು ಜರುಗಿತು. ದೀಪಾವಳಿ ಕವಿಗೋಷ್ಠಿ ಕಾರ್ಯಕ್ರಮದ ಉದ್ಘಾಟನೆಯನ್ನು ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ ಗೌರವಾಧ್ಯಕ್ಷರಾದ ಎಚ್. ಭೀಮರಾವ್ ವಾಷ್ಠರ್ ಅವರು ವಹಿಸಿದ್ದರು. ಕವಿಗೋಷ್ಠಿ ಅಧ್ಯಕ್ಷತೆಯನ್ನು ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ ಅಧ್ಯಕ್ಷರಾದ ಸಾನು ಉಬರಡ್ಕ ವಹಿಸಿದ್ದರು.

ಚಂದನ ಸಾಹಿತ್ಯ ವೇದಿಕೆ ವತಿಯಿಂದ ದೀಪಾವಳಿ ಕವಿಗೋಷ್ಠಿ Read More »

ಹಿರಿಯ ಯಕ್ಷಗಾನ ಕಲಾವಿದ, ರಂಗ ನಿರ್ದೇಶಕ ಜೀವನ್ ರಾಂ ಸುಳ್ಯ ಅವರ ತಂದೆ ಸುಜನ ಸುಳ್ಯ ಇನ್ನಿಲ್ಲ

ಹಿರಿಯ ಯಕ್ಷಗಾನ ಕಲಾವಿದ ಖ್ಯಾತ ರಂಗ ನಿರ್ದೇಶಕ ಜೀವನ್ ರಾಂ ಸುಳ್ಯ ಅವರ ತೀರ್ಥರೂಪರಾದ ರಂಗಮನೆಯ ಸುಜನಾ ಸುಳ್ಯ ( ಎಸ್.ಎನ್‌.ಜಯರಾಮ)ರವರು ಸೆ.24ರಂದು ಮುಂಜಾನೆ 5.50 ಕ್ಕೆ ವಿಧಿವಶರಾದರು. ಅವರಿಗೆ 89 ವರ್ಷ ವಯಸ್ಸಾಗಿತ್ತು. ವಯೋಸಹಜ ನಿಶ್ಯಕ್ತಿಯಿಂದಿದ್ದ ಅವರು ಎರಡು ದಿನಗಳಿಂದ ಆರೋಗ್ಯ ಹದಗೆಟ್ಟು ಸುಳ್ಯದ ಜ್ಯೋತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಹಿರಿಯ ಯಕ್ಷಗಾನ ಕಲಾವಿದ, ರಂಗ ನಿರ್ದೇಶಕ ಜೀವನ್ ರಾಂ ಸುಳ್ಯ ಅವರ ತಂದೆ ಸುಜನ ಸುಳ್ಯ ಇನ್ನಿಲ್ಲ Read More »

ಅರಂತೋಡು : ಸ್ಕೂಟಿಗಳ ನಡುವೆ ಅಪಘಾತ

ಅರಂತೋಡಿನಲ್ಲಿ ಎರಡು ಸ್ಕೂಟಿಗಳ ನಡುವೆ ಗುರುವಾರ ಅಪಘಾತವಾಗಿ ಸ್ಕೂಟಿಗಳು ಜಖಂಗೊಂಡ ವರದಿಯಾಗಿದೆ.ಕಾಸರಗೋಡು ಮೂಲದ ಕಬೀರ್ ಎಂಬವರು ಮಡಿಕೇರಿಯಿಂದ ಕಾಸಗೋಡಿಗೆ ತೆರಳುತ್ತಿದ್ದಾಗ ತೊಡಿಕಾನ ಕಡೆಯಿಂದ ಬರುತ್ತಿದ್ದ ಅಡ್ಯಡ್ಕ ಸಿ.ಆರ್.ಸಿ ಕಾಲೋನಿ‌ ನಿವಾಸಿ ಗುಣಶೀಲ ಅವರ ಸಹೋದರ ದೊರೈಸ್ವಾಮಿ ‌.ಪಿ ಅವರ ಸ್ಕೂಟಿ ನಡುವೆ ಅಪಘಾತ ಸಂಭವಿಸಿದೆ.ಪರಿಣಾಮವಾಗಿ ಸ್ಕೂಟಿ ಸವಾರರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.ಪ್ರಕರಣವ‌ನ್ನು ರಾಜಿಯಲ್ಲಿ ಇತ್ಯರ್ಥ ಪಡಿಸಲಾಗಿದೆ ಎಂದು ತಿಳಿದು ಬಂದಿದೆ.

ಅರಂತೋಡು : ಸ್ಕೂಟಿಗಳ ನಡುವೆ ಅಪಘಾತ Read More »

ಸುಳ್ಯದ ಸೋಜಾ ಇಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯಕ್ತ ಭಾರೀ ದರ ಕಡಿತ ಮಾರಾಟ,ಪ್ರತಿ ಖರೀದಿಗೆ ಗಿಪ್ಟ್

ಸುಳ್ಯದಲ್ಲಿ ಅತೀ ಕಡಿಮೆ ದರದಲ್ಲಿ ಅತ್ಯುತ್ತಮ ಗುಣ ಮಟ್ಟದ ಇಲೆಕ್ಟ್ರಾನಿಕ್ಸ್ ಹಾಗೂ ಫರ್ನೀಚರ್ ಮಾರಾಟ ಮಾಡುವ ಮೂಲಕ ಗ್ರಾಹಕರ ಮನ ಗೆದ್ದ ಸುಳ್ಯದ ಪ್ರತಿಷ್ಠಿತ ಇಲೆಕ್ಟ್ರಾನಿಕ್ಸ್‌ನಲ್ಲಿ ಮಳಿಗೆ ಸೋಜಾ ಇಲೆಕ್ಟ್ರಾನಿಕ್ಸ್ ಅತ್ಯುತ್ತಮ ಗುಣಮಟ್ಟದ ಮತ್ತು ಬ್ರಾಂಡೆಡ್ ಇಲೆಕ್ಟ್ರಾನಿಕ್ಸ್ ಉಪಕರಣಗಳ ಮಾರಾಟಕ್ಕೆ ಹೆಸರುವಾಸಿಯಾಗಿದೆ.ಸುಳ್ಯ ಮುಖ್ಯ ರಸ್ತೆಯಲ್ಲಿ ಶ್ರೀರಾಮ್ ಪೇಟೆಯಲ್ಲಿ ಕಶ್ಯಪ್ ಕಾಂಪ್ಲೆಕ್ಸ್‌ನಲ್ಲಿರುವ ಸೋಜಾ ಇಲೆಕ್ಟ್ರಾನಿಕ್ಸ್ ಕಳೆದ 26 ವರ್ಷಗಳಿಂದ ಜನರ ವಿಶ್ವಾಸ ಗಳಿಸಿದ ಸಂಸ್ಥೆ. ದೀಪಾವಳಿ ಹಬ್ಬದ ಪ್ರಯುಕ್ತ ಸೋಜಾ ಇಲೆಕ್ಟ್ರಾನಿಕ್ಸ್‌ನಲ್ಲಿ ಆಕರ್ಷಕ ಆಫರ್‌ಗಳುನ್ನು ಘೋಷಿಸಲಾಗಿದೆ. ಎಲ್ಲಾ ವಸ್ತುಗಳಲ್ಲಿಯೂ

ಸುಳ್ಯದ ಸೋಜಾ ಇಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯಕ್ತ ಭಾರೀ ದರ ಕಡಿತ ಮಾರಾಟ,ಪ್ರತಿ ಖರೀದಿಗೆ ಗಿಪ್ಟ್ Read More »

ಇರುಮುಡಿ ಹೊತ್ತು ಹದಿನೆಂಟು ಮೆಟ್ಟಿಲೇರಿ ಅಯ್ಯಪ್ಪನ ದರ್ಶನ ಪಡೆದ ರಾಷ್ಟ್ರಪತಿ ದ್ರೌಪದಿ ಮರ್ಮು

ರಾಷ್ಟ್ರಪತಿ ದ್ರೌಪದಿ ಮುರ್ಮು ಇರುಮುಡಿ ಹೊತ್ತು ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಇಂದು ಬೆಳಿಗ್ಗೆ ಪಂಪಾ ಮೂಲಕ ವಿಶೇಷ ವಾಹನದಲ್ಲಿ ಶಬರಿಮಲೆಗೆ ತೆರಳಿದ ರಾಷ್ಟ್ರಪತಿಗಳು ಹದಿನೆಂಟು ಮೆಟ್ಟಿಲೇರಿ ಅಯ್ಯಪ್ಪನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಾಲ್ಕು ದಿನಗಳ ಕಾಲ ಕೇರಳ ಪ್ರವಾಸದಲ್ಲಿರುವ ರಾಷ್ಟ್ರಪತಿ ದೌಪದಿ ಮುರ್ಮು ಅವರು ಇಂದು ಶಬರಿಮಲೆಗೆ ಆಗಮಿಸಿದ್ದಾರೆ. ಬೆಳಿಗ್ಗೆ ಹೆಲಿಕಾಪ್ಟರ್ ಮೂಲಕ ಕೇರಳದ ಪಟ್ಟಣಂತಿಟ್ಟ ಬಳಿಯ ಪ್ರಮದಂ ಗೆ ಬಂದ ಅವರು ಬಳಿಕ ವಾಹನದಲ್ಲಿ ಪಂಪೆಗೆ ಆಗಮಿಸಿದ್ದಾರೆ. ಪಂಪಾ ನದಿಯಲ್ಲಿ ಸ್ನಾನ ಮಾಡುವ

ಇರುಮುಡಿ ಹೊತ್ತು ಹದಿನೆಂಟು ಮೆಟ್ಟಿಲೇರಿ ಅಯ್ಯಪ್ಪನ ದರ್ಶನ ಪಡೆದ ರಾಷ್ಟ್ರಪತಿ ದ್ರೌಪದಿ ಮರ್ಮು Read More »

ಸಂಪಾಜೆ ಮಹಮ್ಮಾಯಿ ದೈವಸ್ಥಾನ ದೇವಸ್ಥಾನಕ್ಕೆ ಟಿ ಎಂ ಶಾಹಿದ್ ತೆಕ್ಕಿಲ್ ಭೇಟಿ

ಸಂಪಾಜೆ ಗ್ರಾಮದ ಅಲಡ್ಕ ಮಹಮ್ಮಾಯಿ ದೈವಸ್ಥಾನ ದೇವಸ್ಥಾನಕ್ಕೆ ಹಾಗೂ ಪರಿಶಿಷ್ಟ ಜಾತಿ ಕಾಲನಿಯ ಸಮುದಾಯ ಭವನಕ್ಕೆ ಕರ್ನಾಟಕ ಸರ್ಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ಅವರು ಭೇಟಿ ನೀಡಿದರುಅಲಡ್ಕ ಮಹಮ್ಮಾಯಿ ದೈವಸ್ಥಾನ ದೇವಸ್ಥಾನ ಅಡಳಿತ ಮಂಡಳಿ ಹಾಗೂ ಕಾಲನಿ ನಿವಾಸಿಗಳು ಟಿ ಎಂ ಶಾಹಿದ್ ತೆಕ್ಕಿಲ್ ರವರಿಗೆ ಸನ್ಮಾನ ಮಾಡಿ ದೀಪಾವಳಿ ಶುಭಾಶಯ ಕೋರಿ ಸಮುದಾಯದ ಭವನದ ಮೆಲ್ಚಾವಣಿ ರಚಿನೆಗೆ ಅನುದಾನ ಹಾಗು ದೈವಸ್ಥಾನ ದೇವಸ್ಥಾನದ ಕಟ್ಟಡ ನಿರ್ಮಾಣಕ್ಕೆ

ಸಂಪಾಜೆ ಮಹಮ್ಮಾಯಿ ದೈವಸ್ಥಾನ ದೇವಸ್ಥಾನಕ್ಕೆ ಟಿ ಎಂ ಶಾಹಿದ್ ತೆಕ್ಕಿಲ್ ಭೇಟಿ Read More »

ಅಕ್ರಮ ಜಾ‌ನುವಾರು ಸಾಗಾಟ ಮಾಡುತ್ತಿದ್ದ ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಪೊಲೀಸರು!

ಅಕ್ರಮ ಗೋಸಾಗಾಟ ತಡೆಯಲು ಯತ್ನಿಸಿದ ಪೊಲೀಸರ ವಾಹನಕ್ಕೆ ಡಿಕ್ಕಿ ಹೊಡೆದ ಆರೋಪಿಗೆ ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಘಟನೆ ಈಶ್ವರಮಂಗಲ ಸಮೀಪದ ಬೆಳ್ಳಿಚಡವು ಎಂಬಲ್ಲಿ ಅ.22 ರಂದು ಬೆಳಗ್ಗಿನ ಜಾವ ನಡೆದಿದೆ. ಕಾಸರಗೋಡು ನಿವಾಸಿ ಅಬ್ದುಲ್ಲಾ (40) ಬಂಧಿತ ಆರೋಪಿ.ಆರೋಪಿ ಅಬ್ದುಲ್ಲಾ (40), ಐಚರ್ ವಾಹನದಲ್ಲಿ 10 ಜಾನುವಾರಗಳನ್ನು ಸಾಗಿಸುತ್ತಿದ್ದ. ಆತನೇ ಚಾಲಕನಾಗಿದ್ದು, ಇನ್ನೊಬ್ಬ ಆರೋಪಿಯೂ ವಾಹನದಲ್ಲಿದ್ದ. ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಆತನು ನಿಲ್ಲಿಸಿಲ್ಲ. ಈ ವೇಳೆ ಪೊಲೀಸರು ಸುಮಾರು 10 ಕಿಮೀ ದೂರ

ಅಕ್ರಮ ಜಾ‌ನುವಾರು ಸಾಗಾಟ ಮಾಡುತ್ತಿದ್ದ ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಪೊಲೀಸರು! Read More »

ಅಂಜಲಿ ಮೊಂಟೇಸ್ಸೂರಿ ಶಾಲೆಯಲ್ಲಿ ದೀಪಾವಳಿ ಹಬ್ಬದ ಸಂಭ್ರಮ

ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ಶಾಲೆಯ ಸಂಚಾಲಕರು ಶ್ರೀಮತಿ ಗೀತಾಂ ಜಲಿಯವರು ದೀಪ ಬೆಳಗಿಸಿ ದೀಪಾವಳಿ ಹಬ್ಬದ ವಿಶೇಷತೆಯನ್ನು ಕತೆ ಮುಖಾಂತರ ತಿಳಿಸಿದರು. ಶಿಕ್ಷಕರು, ಮಕ್ಕಳು ದೀಪ ಹಚ್ಚಿಸಿಹಿ ಹಂಚಿ ಸಂತೋಷ ಪಟ್ಟರು.

ಅಂಜಲಿ ಮೊಂಟೇಸ್ಸೂರಿ ಶಾಲೆಯಲ್ಲಿ ದೀಪಾವಳಿ ಹಬ್ಬದ ಸಂಭ್ರಮ Read More »

ಅರಂಬೂರು: ಹೋಟೆಲ್ ಶ್ರೀ ಚಾಮುಂಡೇಶ್ವರಿ ಲೋಕಾರ್ಪಣೆ

ಅರಂಬೂರು ನಾಗೇಶ್ ರೈಯವರ ಮಾಲಕತ್ವದ ಹೋಟೆಲ್ ಶ್ರೀ ಚಾಮುಂಡೇಶ್ವರಿ (ಸಸ್ಯಹಾರಿ ಮತ್ತು ಮಾಂಸಹಾರಿ) ಅ. 20 ರಂದು ಅರಂಬೂರಿನಲ್ಲಿ ಉದ್ಘಾಟನೆಗೊಂಡಿದೆ.ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿಯವರು ನೂತನ ಹೋಟೇಲ್ ನ್ನು ಉದ್ಘಾಟಿಸಿ ಶುಭ ಹಾರೈಸಿದರು.ಮುಖ್ಯ ಅತಿಥಿಗಳಾಗಿ ವಿಶ್ರಾಂತ ಪ್ರಾಂಶುಪಾಲ ಕೆ.ಆರ್.ಗಂಗಾಧರ್, ನ.ಪಂ. ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಆಲೆಟ್ಟಿ ಗ್ರಾ.ಪಂ. ಅಧ್ಯಕ್ಷೆ ವೀಣಾ ವಸಂತ್, ಸುಳ್ಯ ತಾಲೂಕು ವರ್ತಕರ ಸಂಘದ ಗೌರವಾಧ್ಯಕ್ಷ ಪಿ.ಬಿ.ಸುಧಾಕರ ರೈ, ಉದ್ಯಮಿಗಳಾದ ಲ. ರಮೇಶ್ ಶೆಟ್ಟಿ, ದೇವಿಪ್ರಸಾದ್ ಕುದ್ಪಾಜೆ, ಆಲೆಟ್ಟಿ ಗ್ರಾ.ಪಂ.

ಅರಂಬೂರು: ಹೋಟೆಲ್ ಶ್ರೀ ಚಾಮುಂಡೇಶ್ವರಿ ಲೋಕಾರ್ಪಣೆ Read More »

error: Content is protected !!
Scroll to Top