Uncategorized

ಅರಂತೋಡು : ಕಸ್ತೂರಿ ರಂಗನ್ ಕರಡು ವರದಿಗೆ ಆಕ್ಷೇಪಣೆ ಸಲ್ಲಿಸಲು ವಿಶೇಷ ಗ್ರಾಮ ಸಭೆ ಕರೆಯಲು ಪಿ.ಡಿ.ಒ ಅವರಿಗೆ ಮನವಿ ಸಲ್ಲಿಸಿದ ಅರಂತೋಡು ತೊಡಿಕಾನ ಗ್ರಾಮಸ್ಥರು

ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ವಿಶೇಷ ಗ್ರಾಮ ಸಭೆ ಕರೆದು ನಿರ್ಣಯಿಸಿ ಸರಕಾರಕ್ಕೆ ಬರೆಯಬೇಕೆಂದು ಅರಂತೋಡು ಗ್ರಾಮ ಪಂಚಾಯತ್ ಪಿ.ಡಿ.ಒ‌ ಜಯಪ್ರಕಾಶ್ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಉಪಾಧ್ಯಕ್ಷ ತೀರ್ಥರಾಮ‌ ಉಳುವಾರು ಹಾಗೂ ಅರಂತೋಡು ತೊಡಿಕಾನ ಗ್ರಾಮದ ರೈತರು ಮನವಿ ಸಲ್ಲಿಸಿದ್ದಾರೆ.ರೈತಾಪಿ ವರ್ಗದ ಸುಳ್ಯ ತಾಲೂಕಿನ ಕೆಲವು ಗ್ರಾಮಗಳಲ್ಲಿ ಪೂರ್ವಜರಿಂದ ಬಂದಂತಹ ಭೂಮಿಯಲ್ಲಿ ಕೃಷಿ ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಾ ಬಂದಿದ್ದೇವೆ. ಆದರೆ ಈಗಿನ ಸರಕಾರಗಳು ಬಡ ಕೃಷಿಕರ ತಲೆಯ ಮೇಲೆ ಕಲ್ಲುಚಪ್ಪಡಿ ಎಳೆಯಲು […]

ಅರಂತೋಡು : ಕಸ್ತೂರಿ ರಂಗನ್ ಕರಡು ವರದಿಗೆ ಆಕ್ಷೇಪಣೆ ಸಲ್ಲಿಸಲು ವಿಶೇಷ ಗ್ರಾಮ ಸಭೆ ಕರೆಯಲು ಪಿ.ಡಿ.ಒ ಅವರಿಗೆ ಮನವಿ ಸಲ್ಲಿಸಿದ ಅರಂತೋಡು ತೊಡಿಕಾನ ಗ್ರಾಮಸ್ಥರು Read More »

ವರಮಹಾಲಕ್ಷ್ಮೀ ಪೂಜೆ – ವಿಶೇಷತೆ ಮತ್ತು ಮಹತ್ವ

ವರಮಹಾಲಕ್ಷ್ಮೀ ಪೂಜೆ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಗಗಳಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸುವ ಪ್ರಮುಖ ಹಿಂದೂ ಹಬ್ಬವಾಗಿದೆ. ಶ್ರಾವಣ ಮಾಸದ ಶುಕ್ರವಾರದಂದು ಲಕ್ಷ್ಮೀ ದೇವಿಯನ್ನು ಪೂಜಿಸಿ, ಕುಟುಂಬದ ಸುಖ, ಸಮೃದ್ಧಿ ಮತ್ತು ಕ್ಷೇಮಕ್ಕಾಗಿ ಪ್ರಾರ್ಥಿಸುವುದು ಈ ಹಬ್ಬದ ವಿಶೇಷತೆ.ಪೂಜೆಯ ವಿಶೇಷತೆಪುರಾಣದ ನಂಬಿಕೆಯ ಪ್ರಕಾರ, ವರಮಹಾಲಕ್ಷ್ಮೀ ದೇವಿಯ ಆರಾಧನೆಯಿಂದ ಅಷ್ಟಲಕ್ಷ್ಮಿಯರ ಕೃಪೆ ದೊರೆಯುತ್ತದೆ ಎಂದು ಭಕ್ತರು ನಂಬುತ್ತಾರೆ. ಧನಲಕ್ಷ್ಮಿ, ಧಾನ್ಯಲಕ್ಷ್ಮಿ, ಧೈರ್ಯಲಕ್ಷ್ಮಿ, ವಿದ್ಯಾಲಕ್ಷ್ಮಿ ಸೇರಿದಂತೆ ವಿವಿಧ ರೂಪಗಳಲ್ಲಿ ಲಕ್ಷ್ಮೀ ದೇವಿಯನ್ನು ಸ್ಮರಿಸಲಾಗುತ್ತದೆ.ಹಬ್ಬದ ದಿನ ಮನೆಗಳನ್ನು ಸ್ವಚ್ಛಗೊಳಿಸಿ, ಪೂಜಾ ಸ್ಥಳವನ್ನು

ವರಮಹಾಲಕ್ಷ್ಮೀ ಪೂಜೆ – ವಿಶೇಷತೆ ಮತ್ತು ಮಹತ್ವ Read More »

ಬಿಜೆಪಿಯವರು, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ನಮ್ಮನ್ನು ಜೈಲಿಗೆ ಹಾಕಿದರೂ, ನೇಣಿಗೆ ಹಾಕಿದರೂ ನಾವು ವಂದೇ ಮಾತರಂ ಗೀತೆಯ ಎರಡೇ ಚರಣವನ್ನು ಹಾಡುವುದು!

‘ವಂದೇ ಮಾತರಂ’ ಗೀತೆಯ ಎರಡು ಚರಣಗಳನ್ನು ಮಾತ್ರ ಹಾಡುವುದೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.ದೆಹಲಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಹರಿಪ್ರಸಾದ್, ‘ವಂದೇ ಮಾತರಂ ಗೀತೆ ಹಾಡಿದ್ದಕ್ಕೆ ಜೈಲು ಸೇರಿದ್ದು ಕಾಂಗ್ರೆಸ್‌ನವರು. ನಾವು ವಂದೇ ಮಾತರಂ ಗೀತೆಯನ್ನು ಒಪ್ಪಿಕೊಳ್ಳುತ್ತೇವೆ. ಆದರೆ 2 ಚರಣವನ್ನು ಮಾತ್ರ ಹಾಡುತ್ತೇವೆ. ಬಿಜೆಪಿಯವರು, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ನಮ್ಮನ್ನು ಜೈಲಿಗೆ ಹಾಕಿದರೂ, ನೇಣಿಗೆ ಹಾಕಿದರೂ ನಾವು ಎರಡೇ ಚರಣವನ್ನು ಹಾಡುತ್ತೇವೆ’ ಎಂದು ಒತ್ತಿ ಹೇಳಿದ್ದಾರೆ.

ಬಿಜೆಪಿಯವರು, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ನಮ್ಮನ್ನು ಜೈಲಿಗೆ ಹಾಕಿದರೂ, ನೇಣಿಗೆ ಹಾಕಿದರೂ ನಾವು ವಂದೇ ಮಾತರಂ ಗೀತೆಯ ಎರಡೇ ಚರಣವನ್ನು ಹಾಡುವುದು! Read More »

ಆಲೆಟ್ಟಿ : ಸದಾದಶಿವ ದೇವಳದಲ್ಲಿ ನಾಗರ ಪಂಚಮಿ ಆಚರಣೆ

ಆಲೆಟ್ಟಿ ಸದಾಶಿವ ದೇವಳದಲ್ಲಿ ನಾಗಕಲ್ಲಿಗೆ ಹಾಲು ಎರೆಯುವುದರ ಮೂಲಕ ನಾಗರ ಪಂಚಮಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ದೇವಳದ ಸಮತಿಯವರು ಊರವರು ಉಪಸ್ಥಿತರಿದ್ದರು.

ಆಲೆಟ್ಟಿ : ಸದಾದಶಿವ ದೇವಳದಲ್ಲಿ ನಾಗರ ಪಂಚಮಿ ಆಚರಣೆ Read More »

ನಾಳೆ ನಾಗರ ಪಂಚಮಿ ಪ್ರಯುಕ್ತ ಸಾರ್ವಜನಿಕ ರಜೆ ಘೋಷಣೆ

ನಾಗರಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ನಾಳೆ ನಾಗರ ಪಂಚಮಿ ಪ್ರಯುಕ್ತ ಸಾರ್ವಜನಿಕ ರಜೆ ಘೋಷಣೆ Read More »

ಕೆಸರು ಗದ್ದೆ ಕ್ರೀಡಾಕೂಟವನ್ನು ಉಳಿಸಿಕೊಳ್ಳುವುದು ನಮ್ಮ ಜವಾಬ್ದಾರಿ : ಸುಧಾಕರ ರೈ.ಪಿ.ಬಿ

ಕೆಸರು ಗದ್ದೆ ಕ್ರೀಡಾಕೂಟವನ್ನು ಉಳಿಸಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಪಿ.ಬಿ.ಸುಧಾಕರ ರೈ ಹೇಳಿದರು.ಸುಳ್ಯದ ಯುವಜನ ಸಂಯುಕ್ತ ಮಂಡಳಿ, ಅಜ್ಜಾವರ ಪ್ರತಾಪ ಯುವಕ ಮಂಡಲ, ಚೈತ್ರ ಯುವತಿ ಮಂಡಲ ಇದರ ವತಿಯಿಂದ 5 ನೇ ವರ್ಷದ ಕಂಡದ ಗೌಜಿ ಕೆಸರ್ದ ಪರ್ವವನ್ನು ಆ.16ರಂದು ಅಜ್ಜಾವರದ ಕೊರಂಗುಬೈಲು ಗದ್ದೆಯಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.ಯುವ ಸಂಘಟನೆಗಳು ಇಲ್ಲಿ ಕೆಸರು ಗದ್ದೆ ಕ್ರೀಡಾಕೂಟ ಹಮ್ಮಿಕೊಂಡು ನಮ್ಮ‌ ಹಿಂದಿನ ಪರಂಪೆಯನ್ನು ನೆನಪಿಸುವ ಕಾರ್ಯ ಮಾಡಿರುವುದು ಶ್ಲಾಘನೀಯ,ಕ್ರೀಡಾಕೂಟಕ್ಕೆ ಪ್ರತಿವರ್ಷ

ಕೆಸರು ಗದ್ದೆ ಕ್ರೀಡಾಕೂಟವನ್ನು ಉಳಿಸಿಕೊಳ್ಳುವುದು ನಮ್ಮ ಜವಾಬ್ದಾರಿ : ಸುಧಾಕರ ರೈ.ಪಿ.ಬಿ Read More »

ಕಾಡಾನೆ ಓಡಿಸಲು ಗಾಳಿಯಲ್ಲಿ ಹಾರಿಸಿದ ಗುಂಡು ಸ್ಕೂಟರ್ ಸವಾರನಿಗೆ ತಗುಲಿ ಗಾಯ

ಸುಳ್ಯ ಬೇಂಗಮಲೆ ರಸ್ತೆ ಪಕ್ಕ ಕಾಡಾನೆ ಓಡಿಸಲು ಅರಣ್ಯ ಇಲಾಖೆಯವರು ಗಾಳಿಯಲ್ಲಿ ಹಾರಿಸಿದ ಗುಂಡು ಸ್ಕೂಟರ್ ಸವಾರರೊಬ್ಬರ ಕಾಲಿಗೆ ತಾಗಿ ಗಾಯಗೊಂಡ ಘಟನೆ ವರದಿಯಾಗಿದೆ.ಪೆರುವಾಜೆ ಗ್ರಾಮದ ಏನಡ್ಕ ರಾಘವ ಪ್ರಭು ಎಂಬವರು ಗುಂಡು ತಗುಲಿ ಗಾಯಗೊಂಡ ವ್ಯಕ್ತಿ.ಕಲ್ಲುಗುಂಡಿಯ ಕೆನರಾ ಬ್ಯಾಂಕ್ ಉದ್ಯೋಗಿಯಾದ ಅವರು ಆ.12 ರಂದು ಸಂಜೆ ಕೆಲಸ ಮುಗಿಸಿ ಸಂಪಾಜೆಯಿಂದ ಸಂಜೆ ಪೆರುವಾಜೆಯ ಮನೆಗೆ ಹೋಗುತ್ತಿದ್ದಾಗ ಐವರ್ನಾಡು ಗ್ರಾಮದ ಬೇಂಗಮಲೆ ಎಂಬಲ್ಲಿ ಕಾಡಾನೆಗಳು ಇದ್ದವು ಎನ್ನಲಾಗಿದೆ.ಆನೆ ರಸ್ತೆ ದಾಟುತ್ತಿರುವುದನ್ನು ನೋಡಿ, ಸ್ಕೂಟಿಯನ್ನು ಅವರು ತಿರುಗಿಸಿದರು.ಆ ಹೊತ್ತಿಗೆ

ಕಾಡಾನೆ ಓಡಿಸಲು ಗಾಳಿಯಲ್ಲಿ ಹಾರಿಸಿದ ಗುಂಡು ಸ್ಕೂಟರ್ ಸವಾರನಿಗೆ ತಗುಲಿ ಗಾಯ Read More »

ತೊಡಿಕಾನ : ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ 80ನೇ ಸ್ವಾತಂತ್ರ್ಯ ದಿನ ಆಚರಣೆ

ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೇಶವ ಯು.ಕೆ. ಧ್ವಜಾರೋಹಣ ನೆರವೇರಿಸಿದರು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಲಕ್ಷ್ಮೀಷ ಗಬ್ಲಡ್ಕ,ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಪಿ.ಬಿ.ದಿವಾಕರ ರೈ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಜೀರ್ಣೋದ್ಧಾರ ಸಮಿತಿ ಸದಸ್ಯರು,ನಿಕಟ ಪೂರ್ವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರು, ಅರ್ಚಕ ಹಾಗೂ ಸಿಬ್ಬಂದಿ ವರ್ಗದವರು, ಶಾಲಾ ಮಕ್ಕಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ತೊಡಿಕಾನ : ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ 80ನೇ ಸ್ವಾತಂತ್ರ್ಯ ದಿನ ಆಚರಣೆ Read More »

ಸುಳ್ಯ ತಾಲೂಕು ಕಚೇರಿಗೆ ಲೋಕಾಯುಕ್ತ ದಿಡೀರ್ ದಾಳಿ!

ಸುಳ್ಯ ತಾಲೂಕು ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಆ.12ರಂದು ದಿಡೀರ್ ದಾಳಿ ನಡೆಸಿದ್ದಾರೆ.ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಕಡತಗಳ ಪರಿಶೀಲನೆ,ಸಾರ್ವಜನಿಕರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ‌.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಸುಳ್ಯ ತಾಲೂಕು ಕಚೇರಿಗೆ ಲೋಕಾಯುಕ್ತ ದಿಡೀರ್ ದಾಳಿ! Read More »

ಫ್ರಿಡ್ಜ್ ಏಕಾಏಕಿ ಭಾರೀ ಸದ್ದಿನೊಂದಿಗೆ ಸ್ಫೋಟಗೊಂಡು ಮನೆಗೆ ಭಾರೀ ಪ್ರಮಾಣದಲ್ಲಿ ಹಾನಿ

ಫ್ರಿಡ್ಜ್ ಏಕಾಏಕಿ ಭಾರೀ ಸದ್ದಿನೊಂದಿಗೆ ಸ್ಫೋಟಗೊಂಡು ಮನೆಗೆ ಭಾರೀ ಪ್ರಮಾಣದಲ್ಲಿ ಹಾನಿಯಾದ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಆತೂರಿನಲ್ಲಿ ಆ.11ರ ಸಂಜೆ ನಡೆದಿದೆ.ಈ ಘಟನೆ ನಡೆದಿರುವುದು ಆತೂರಿನ ಸಿದ್ದಿಕ್ ಅವರ ಮನೆಯಲ್ಲಿ.ಮನೆಯಲ್ಲಿದ್ದ ಫ್ರಿಡ್ಜ್‌ನಲ್ಲಿ ತಾಂತ್ರಿಕ ದೋಷ ಅಥವಾ ಶಾರ್ಟ್ ಸರ್ಕ್ಯೂಟ್‌ನಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಭಾರೀ ಶಬ್ದದೊಂದಿಗೆ ಸ್ಫೋಟಗೊಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಸ್ಫೋಟದ ತೀವ್ರತೆಗೆ ಮನೆಯ ಗೋಡೆಗಳು, ಮೇಲ್ಛಾವಣಿ ಹಾಗೂ ಪೀಠೋಪಕರಣಗಳಿಗೆ ಹಾನಿಯಾಗಿದೆ. ಸ್ಫೋಟದ ಬೆನ್ನಲ್ಲೇ ಬೆಂಕಿ ಮನೆಯೊಳಗೆ ವ್ಯಾಪಿಸಿದ್ದರಿಂದ ಇತರ ಎಲೆಕ್ಟ್ರಾನಿಕ್ ಉಪಕರಣಗಳು

ಫ್ರಿಡ್ಜ್ ಏಕಾಏಕಿ ಭಾರೀ ಸದ್ದಿನೊಂದಿಗೆ ಸ್ಫೋಟಗೊಂಡು ಮನೆಗೆ ಭಾರೀ ಪ್ರಮಾಣದಲ್ಲಿ ಹಾನಿ Read More »

error: Content is protected !!
Scroll to Top