Uncategorized

ದ್ವಿತೀಯ ಪಿಯುಸಿ ಫಲಿತಾಂಶ : ಉಡುಪಿ ಜಿಲ್ಲೆಗೆ ಮೊದಲ ಸ್ಥಾನ, ದ.ಕ ಜಿಲ್ಲೆ ದ್ವಿತೀಯ

2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಮಧ್ಯಾಹ್ನ ಪ್ರಕಟವಾಗಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಂಜೆ ಸುದ್ದಿಗೋಷ್ಠಿ ನಡೆಸಿ ಜಿಲ್ಲಾವಾರು ಫಲಿತಾಂಶದ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಈ ಬಾರಿ ಶೇ.86.48ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. 7,10,363 ವಿದ್ಯಾರ್ಥಿಗಳ ಪೈಕಿ 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಇನ್ನು ಈ ಬಾರಿಯೂ ಕೂಡ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಪ್ರಥಮ, ಯಾದಗಿರಿ ಕೊನೆ ಸ್ಥಾನದಲ್ಲಿದೆ. ಶೇ. 96.39 ಫಲಿತಾಂಶ ಪಡೆದು […]

ದ್ವಿತೀಯ ಪಿಯುಸಿ ಫಲಿತಾಂಶ : ಉಡುಪಿ ಜಿಲ್ಲೆಗೆ ಮೊದಲ ಸ್ಥಾನ, ದ.ಕ ಜಿಲ್ಲೆ ದ್ವಿತೀಯ Read More »

ಪಿಯುಸಿ ವಿಜ್ಞಾನ ವಿಭಾಗದಲ್ಲಿ‌ ಸಮನ್ಯು ಶೆಟ್ಟಿ ದ.ಕ ಜಿಲ್ಲೆಗೆ ಪ್ರಥಮ

ಮಂಗಳೂರಿನ ಎಕ್ಸ್ ಪರ್ಟ್ ಪಿ.ಯು. ಕಾಲೇಜಿನ ವಿಜ್ಞಾನ ವಿದ್ಯಾರ್ಥಿ, ಸುಳ್ಯದ ಸುದೇಶ್ ಶೆಟ್ಟಿ ಮತ್ತು ಶ್ರೀಮತಿ ಅಕ್ಷತಾ ಎಸ್‌. ಶೆಟ್ಟಿ ದಂಪತಿಯ ಪುತ್ರ ಸಮನ್ಯು ಎಸ್.ಶೆಟ್ಟಿ ವಿಜ್ಞಾನ ವಿಭಾಗದಲ್ಲಿ 598 ಅಂಕ ಗಳಿಸಿ ದ.ಕ. ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.

ಪಿಯುಸಿ ವಿಜ್ಞಾನ ವಿಭಾಗದಲ್ಲಿ‌ ಸಮನ್ಯು ಶೆಟ್ಟಿ ದ.ಕ ಜಿಲ್ಲೆಗೆ ಪ್ರಥಮ Read More »

ಕಾಳಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಿಂದ ತೊಡಿಕಾನ ದೇವಳಕ್ಕೆ 2100 ಕೆ.ಜಿ.ಅಕ್ಕಿ, 200ಕೆ.ಜಿ ಬೆಲ್ಲ ಕೊಡುಗೆ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ಜಾತ್ರೋತ್ಸವದ ಸಮಾರಾಧನೆಗೆ ಏ.8ರಂದು ಶ್ರೀ ಹಿಮಕರ ಕಲ್ಲಗದ್ದೆ ಬೆಂಗಳೂರು ಇವರ ನೇತೃತ್ವದಲ್ಲಿ ಶ್ರೀ ಕಾಳಿಕಾ ದುರ್ಗಾಪರಮೇಶ್ವರಿ ದೇವಸ್ಥಾನ ವಿದ್ಯಾರಣ್ಯಪುರ ಬೆಂಗಳೂರು ಇಲ್ಲಿಂದ ಸುಮಾರು 2100 ಕೆ.ಜಿ.ಅಕ್ಕಿ, 200ಕೆ.ಜಿ.ಬೆಲ್ಲವನ್ನು ಸಮರ್ಪಿಸಿದರು. ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಶ್ರೀ ಸಂತೋಷ್ ಕುತ್ತಮೊಟ್ಟೆಯವರು ಶಾಲು ಹೊದಿಸಿ, ಶ್ರೀ ದೇವರ ಪ್ರಸಾದ ಕೊಡಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ಯು.ಯಂ.ಕಿಶೋರ್ ಕುಮಾರ್, ಶ್ರೀ ಕಾಳಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ನೌಕರರಾದ ಶ್ರೀ

ಕಾಳಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಿಂದ ತೊಡಿಕಾನ ದೇವಳಕ್ಕೆ 2100 ಕೆ.ಜಿ.ಅಕ್ಕಿ, 200ಕೆ.ಜಿ ಬೆಲ್ಲ ಕೊಡುಗೆ Read More »

ಮಡಪ್ಪಾಡಿ : ಜೋಡು ಪಾಷಾಣಮೂರ್ತಿ ದೈವದ ಹರಕೆ ಕೋಲ

ಮಡಪ್ಪಾಡಿ ಪುಂಡರಿಕ ಗೌಡ ಅವರ ಮನೆಯಲ್ಲಿ ಏಪ್ರಿಲ್.5ರಂದು ಜೋಡು ಪಾಷಾಣ ಮೂರ್ತಿ ದೈವದ ಹರಕೆ ಕೊಲ ನಡೆಯಿತು.ಈ ಸಂದರ್ಭದಲ್ಲಿ ಕುಟುಂಬಸ್ಥರು ನೆಂಟರಿಷ್ಟರು,ಊರಿನವರು ಉಪಸ್ಥಿತರಿದ್ದರು.

ಮಡಪ್ಪಾಡಿ : ಜೋಡು ಪಾಷಾಣಮೂರ್ತಿ ದೈವದ ಹರಕೆ ಕೋಲ Read More »

ಏ.9ಕ್ಕೆ ಪಿ.ಯು.ಸಿ ಫಲಿತಾಂಶ

ರಾಜ್ಯ ವಿಧಾನಸಭಾ ಉಪಚುನಾವಣೆಗಳ ನೀತಿಸಂಹಿತೆ ಹಾಗೂ ಕೊನೆ ಕ್ಷಣದಲ್ಲಿ ಉಂಟಾದ ತಾಂತ್ರಿಕ ತೊಂದರೆಯಿಂದಾಗಿ ಇಂದು(ಏ.07) ಪ್ರಕಟವಾಗಬೇಕಿದ್ದ ದ್ವಿತೀಯ ಪಿ.ಯು.ಸಿ ಪರೀಕ್ಷಾ ಫಲಿತಾಂಶವನ್ನು ಏಪ್ರಿಲ್ 09ರಂದು ಪ್ರಕಟಿಸಲಾಗುವುದು ಎಂದು ಮಂಡಳಿ ತಿಳಿಸಿದೆ ದ್ವಿತೀಯ ಪಿ.ಯು.ಸಿ ಫಲಿತಾಂಶವನ್ನು ಆನ್‌ಲೈನ್ ನಲ್ಲಿ ವೀಕ್ಷಿಸಲು ಅಧಿಕ್ರತ ವೆಬ್ ಸೈಟ್ karresults.nic.in ಭೇಟಿ ನೀಡಿ ಮುಖಪುಟದಲ್ಲಿರುವ ‘Karnataka 2nd PUC Result 2026’ ಲಿಂಕ್ ಕ್ಲಿಕ್ ಮಾಡಿ ರಿಜಿಸ್ಟ್ರೇಷನ್‌ ನಂಬ‌ರ್ ಹಾಗೂ ಜನ್ಮದಿನಾಂಕ ನಮೂದಿಸಿ ‘Submit’ ಬಟನ್ ಒತ್ತಿದ ತಕ್ಷಣ ನಿಮ್ಮ ಅಂಕಪಟ್ಟಿ ಪರದೆಯ

ಏ.9ಕ್ಕೆ ಪಿ.ಯು.ಸಿ ಫಲಿತಾಂಶ Read More »

48 ಗಂಟೆ ಎಚ್ಚರದಿಂದ ಇರಲು ಸೂಚನೆ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ಭಾರತದ ರಾಯಭಾರ ಕಚೇರಿಯು 48 ಗಂಟೆಗಳ ಕಾಲ ಜಾಗರೂಕತೆಯಿಂದಿರಲು ಮತ್ತು ಮನೆಯಿಂದ ಹೊರಬರದಂತೆ ತುರ್ತು ಸೂಚನೆ ನೀಡಿದೆ.ಜೊತೆಗೆ ಭಾರತದ ರಾಯಭಾರ ಕಚೇರಿ ಜೊತೆ ಸಂಪರ್ಕದಲ್ಲಿ ಇರುವಂತೆ ತಿಳಿಸಿದೆ. ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಇರಾನ್ ಮೇಲೆ ಶೀಘ್ರದಲ್ಲಿ ದಾಳಿ ನಡೆಸುವುದಾಗಿ ಎಚ್ಚರಿಸಿದ ಬೆನ್ನಲ್ಲೇ ಈ ಮುನ್ನೆಚ್ಚರಿಕೆ ಸೂಚನೆಯನ್ನು ಅಲ್ಲಿನ ಭಾರತೀಯರಿಗೆ ನೀಡಲಾಗಿದೆ.

48 ಗಂಟೆ ಎಚ್ಚರದಿಂದ ಇರಲು ಸೂಚನೆ Read More »

ತೊಡಿಕಾನ : ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಅಡ್ತಲೆ ಸ್ಪಂದನ ಗೆಳಯರ ಬಳಗದಿಂದ ಶ್ರಮ ಸೇವೆ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವದ ಪೂರ್ವಭಾವಿಯಾಗಿ ಏ.5ರಂದು ಸೀಮೆಯ 18 ಗ್ರಾಮಗಳ ಭಕ್ತಾಧಿಗಳ ಮತ್ತು ಸಂಘ ಸಂಸ್ಥೆಗಳ ಸಹಬಾಗಿತ್ವದಲ್ಲಿ ದೇವಸ್ಥಾನದ ಪವಿತ್ರ ತೀರ್ಥ ಮೂಲಗಳಾದ ವಾರಾಣಸಿ ತೀರ್ಥ ಮತ್ತು ಮತ್ಸತೀರ್ಥ ಹಾಗೂ ದೇವಸ್ಥಾನದ ಪರಿಸರದ ಸ್ವಚ್ಛತೆ ಸಲುವಾಗಿ ಬ್ರಹತ್ ಕರಸೇವೆ ನಡೆಯಿತು.ಈ ಕರಸೇವೆಯಲ್ಲಿ ಸ್ಪಂದನ‌ ಗೆಳೆಯರ ಬಳಗ ಅಡ್ತಲೆ ತಂಡದವರು ಭಾಗವಹಿಸಿದರು. 18 ಗ್ರಾಮಗಳ ಸುಮಾರು 500ಕ್ಕೂ ಮಿಕ್ಕಿ ಕರಸೇವಕರು ಭಾಗವಹಿಸಿದರು‌.

ತೊಡಿಕಾನ : ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಅಡ್ತಲೆ ಸ್ಪಂದನ ಗೆಳಯರ ಬಳಗದಿಂದ ಶ್ರಮ ಸೇವೆ Read More »

ಇಂದು ಆಲೆಟ್ಟಿ, ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ಸುಳ್ಯ ಸೀಮಾಧಿಪತಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಹಂಚಿಕೆ ಮತ್ತು ಹಸಿರುವಾಣಿ ಸಂಗ್ರಹಣೆ ಕುರಿತು ಸಭೆ

ಸುಳ್ಯ ಸೀಮಾಧಿಪತಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಹಂಚಿಕೆ ಮತ್ತು ಹಸಿರುವಾಣಿ ಸಂಗ್ರಹಣೆ ಕುರಿತಾದ ಸಭೆ ಇಂದು ದಿನಾಂಕ 07-04-2026 ನೇ ಮಂಗಳವಾರ ಸುಳ್ಯ, ಆಲೆಟ್ಟಿ ಮತ್ತು ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ಸಭೆ ನಡೆಯಲಿದ್ದು ಗ್ರಾಮ /ಬೈಲಿಗೆ ಸಂಬಂಧಪಟ್ಟ ಮನೆಯವರು ಕೆಳಗೆ ತಿಳಿಸಿದ ಸ್ಥಳದಲ್ಲಿ ಸೇರಬೇಕಾಗಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಣ ಕೇಶವ ಕೊಳಲುಮೂಲೆ ಹಾಗೂ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ವಿನಂತಿಸಿಕೊಂಡಿದ್ದಾರೆ.ಸುಳ್ಯಶಾಂತಿನಗರಸ್ಥಳ: ಶ್ರೀ ಮುತ್ತಪ್ಪ ದೇವಸ್ಥಾನಸಮಯ :ಸಂಜೆ 7:30ಕ್ಕೆಆಲೆಟ್ಟಿಅರಂಬೂರುಸ್ಥಳ

ಇಂದು ಆಲೆಟ್ಟಿ, ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ಸುಳ್ಯ ಸೀಮಾಧಿಪತಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಹಂಚಿಕೆ ಮತ್ತು ಹಸಿರುವಾಣಿ ಸಂಗ್ರಹಣೆ ಕುರಿತು ಸಭೆ Read More »

ಇಂದು ಗರಡಿಬೈಲ್ ಶ್ರೀ ಉಲ್ಲಾಕ್ಳು, ಕಾಚು ಕುಜುಂಬ ದೈವಸ್ಥಾನ ದಲ್ಲಿ ಸ್ವರ್ಣಪ್ರಶ್ನೆ ಚಿಂತನೆ

ಇಂದು 6-4-26 ನೇ ಸೋಮವಾರ ಪೂರ್ವಹ್ನ 10 ರಿಂದ ಗರಡಿಬೈಲ್ ಶ್ರೀ ಉಲ್ಲಾಕ್ಳು, ಕಾಚು ಕುಜುoಬ ದೈವಸ್ಥಾನ ದಲ್ಲಿ ಸ್ವರ್ಣಪ್ರಶ್ನೆ ಚಿಂತನೆಯು ದೈವಜ್ಞರು ನಡೆಸಲಿಧಾರೆ ಭಕ್ತಾದಿಗಳು ಆಗಮಿಸಬೇಕಾಗಿ ಶ್ರೀ ಸಧಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತ್ಥೂ ರ್ ತಿಳಿಸಿರುತಾರೆ.

ಇಂದು ಗರಡಿಬೈಲ್ ಶ್ರೀ ಉಲ್ಲಾಕ್ಳು, ಕಾಚು ಕುಜುಂಬ ದೈವಸ್ಥಾನ ದಲ್ಲಿ ಸ್ವರ್ಣಪ್ರಶ್ನೆ ಚಿಂತನೆ Read More »

ಅಜ್ಜಾವರ : ಶ್ರೀ ಮಹಿಷಮರ್ದಿನೀ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವ ಆರಂಭ

ಶ್ರೀ ಮಹಿಷಮರ್ದಿನೀ ದೇವಸ್ಥಾನ ಅಜ್ಜಾವರ ಕಾಲಾವಧಿ ಜಾತ್ರೋತ್ಸವ ಪ್ರಯುಕ್ತ ಈದಿನ ಬೆಳಗ್ಗೆ 10.30 ಕ್ಕೆ ಉಗ್ರಾಣ ತುಂಬಿಸುವ ಕಾರ್ಯಕ್ರಮದೊಂದಿಗೆ ಪ್ರಾರಂಭವಾಯಿತು.ಅಜ್ಜಾವರ ಶ್ರೀ ಮಹಿಷಮರ್ದಿನೀ ಸೇವಾ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಎ ಶಿವರಾವ್ ಬಯಂಬು ಅವರು ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಸೇವಾ ಟ್ರಸ್ಟ್ ಸದಸ್ಯರು, ಜೀರ್ಣೋದ್ದಾರ ಸಮಿತಿ, ಉತ್ಸವ ಸಮಿತಿ, ಊರ ಭಕ್ತಾದಿಗಳು ಉಪಸ್ಥಿತರಿದ್ದರು.

ಅಜ್ಜಾವರ : ಶ್ರೀ ಮಹಿಷಮರ್ದಿನೀ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವ ಆರಂಭ Read More »

error: Content is protected !!
Scroll to Top