Uncategorized

ಸುಳ್ಯ : ಮೊಸರು ಕುಡಿಕೆ ಉತ್ಸವಕ್ಕೆ ಅದ್ದೂರಿ ಚಾಲನೆ

ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡ, ಮೊಸರು ಕುಡಿಕೆ ಉತ್ಸವ ಸಮಿತಿ ಆಶ್ರಯದಲ್ಲಿ ೧೨ನೇ ವರ್ಷದ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಗೆ ಚೆನ್ನಕೇಶವ ದೇವಳದ ವಠಾರದಲ್ಲಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಡಾ. ಹರಪ್ರಸಾದ್ ತುದಿಯಡ್ಕ ಅದ್ದೂರಿ ಚಾಲನೆ ನೀಡಿ ಶುಭಹಾರೈಸಿದರು. ಹಿಂದೂ ಯುವಕರ ಅಟ್ಟಿ ಮಡಿಕೆ ಒಡೆಯುವ ಸ್ಪರ್ಧೆಗೆ ಅಟಲ್ ಬಿಹಾರಿ ವಾಜಪೇಯಿ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಹರೀಶ್‌ ಕಂಜಿಪಿಲಿ ಮಡಿಕೆ ಒಡೆಯುವ ಮೂಲಕ ಹಾಗೂ ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ಬಾಲಚಂದ್ರ ಅಡ್ಕಾ‌ರ್ […]

ಸುಳ್ಯ : ಮೊಸರು ಕುಡಿಕೆ ಉತ್ಸವಕ್ಕೆ ಅದ್ದೂರಿ ಚಾಲನೆ Read More »

ನಾಪತ್ತೆಯಾದ ಪಿಕಪ್ ಪತ್ತೆ

ಐವರ್ನಾಡಿನಲ್ಲಿ ಅಂಗಡಿಯ ಎದುರು ನಿಲ್ಲಿಸಿದ್ದ ಪಿಕಪ್ ವಾಹನವೊಂದು ಕೆಲವು ದಿನಗಳ ಹಿಂದೆ ನಿಲ್ಲಿಸಿದ ಕಳವಾಗಿದ್ದು ಕಾರ್ಕಳದಲ್ಲಿ ಪತ್ತೆಯಾದ ಘಟನೆ ಆ.19 ರಂದು ನಡೆದಿದೆ.ಎನ್.ಎಸ್.ಸೌಂಡ್ಸ್ & ಲೈಟಿಂಗ್ಸ್,ಶಾಮಿಯಾನ ಅಂಗಡಿ ಮಾಲಕ ಸುನಿಲ್‌ ನಿಡ್ಡಾಜೆಯವರು ಆ.11 ರಂದು ತನ್ನ ಅಂಗಡಿ ಎದುರು ನಿಲ್ಲಿಸಿದ್ದ ಪಿಕಪ್ ಕಾಣೆಯಾಗಿತ್ತು.ಈ ಬಗ್ಗೆ ಅವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.ಪ್ರಕರಣ ದಾಖಲಿಸಿಕೊಂಡ ಬೆಳ್ಳಾರೆ ಪೊಲೀಸರು ಮುಖ್ಯ ರಸ್ತೆಯಲ್ಲಿರುವ ಸಿ.ಸಿ.ಕೆಮರಾಗಳನ್ನು ಪರಿಶೀಲಿಸಿದ್ದರು. ಇಂದು ಕಾರ್ಕಳ ತಾಲೂಕಿನ ಮುಡೂರು ಎಂಬಲ್ಲಿ ಪಿಕಪ್ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.

ನಾಪತ್ತೆಯಾದ ಪಿಕಪ್ ಪತ್ತೆ Read More »

ಜಿ.ಪಂ., ತಾ.ಪಂ.ಗೆ ಇನ್ನೂ ಮೂರು ತಿಂಗಳಲ್ಲಿ ಚುನಾವಣೆ ?

ಐದು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ತಾಲೂಕು ಪಂಚಾ ಯತ್, ಜಿಲ್ಲಾ ಪಂಚಾಯತ್ ಚುನಾವಣೆ ಇನ್ನು 3 ತಿಂಗಳಲ್ಲಿ ನಡೆಯುವ ನಿರೀಕ್ಷೆ ಮೂಡಿದೆ. 3 ತಿಂಗಳಲ್ಲಿ ಚುನಾವಣೆ ನಡೆಸುವುದಾಗಿ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.ತಾಲೂಕು ಪಂಚಾಯತ್‌ನ ಕ್ಷೇತ್ರ ವಿಂಗಡಣೆ ಕಾರ್ಯ ಈಗಾಗಲೇ ಮುಗಿದಿದೆ. ಕ್ಷೇತ್ರ ಮೀಸಲಾತಿ ನಿಗದಿ ಮಾಡುವ ಪ್ರಕ್ರಿಯ ಮಾತ್ರ ಬಾಕಿ ಇದೆ. ಅದನ್ನು ಶೀಘ್ರವೇ ಮಾಡುವುದಾಗಿ ಸಚಿವರು ಹೇಳಿದ್ದಾರೆ.ಜತೆಗೆ ಗ್ರಾಮ ಪಂಚಾಯತ್‌ಗಳ ಅವಧಿ ಡಿಸೆಂಬರ್, ಜನವರಿಯಲ್ಲಿ ಮುಗಿಯಲಿದ್ದು, ಇನ್ನು ಮುಂದಕ್ಕೆ ಪಕ್ಷದ ಚಿಹ್ನೆಯ

ಜಿ.ಪಂ., ತಾ.ಪಂ.ಗೆ ಇನ್ನೂ ಮೂರು ತಿಂಗಳಲ್ಲಿ ಚುನಾವಣೆ ? Read More »

ಮಡಪ್ಪಾಡಿ: ಪೂಂಬಾಡಿ ಪರಿಸರದಲ್ಲಿ ಕೃಷಿ ತೋಟಕ್ಕೆ ಒಂಟಿ ಸಲಗ ದಾಳಿ, ಕೃಷಿ ಹಾನಿ

ಮಡಪ್ಪಾಡಿ ಗ್ರಾಮದ ಪೂಂಬಾಡಿಯಲ್ಲಿ ಒಂಟಿ ಸಲಗವೊಂದು ಕೃಷಿ ತೋಟಕ್ಕೆ ದಾಳಿ ನಡೆಸಿ ಅಪಾರ ಹಾನಿ ಮಾಡಿರುವ ಘಟನೆ ವರದಿಯಾಗಿದೆ. ಪೂಂಬಾಡಿ ಗಣಪಯ್ಯ ಗೌಡರವರ ತೋಟಕ್ಕೆ ರಾತ್ರಿ ಸುಮಾರು 1 ಗಂಟೆಯ ವೇಳೆಗೆ ದಾಳಿ ಮಾಡಿದ ಒಂಟಿ ಸಲಗ 10ಹೆಚ್ಚು ತೆಂಗಿನ ಮರ, ಅಪಾರ ಬಾಳೆ ಗಿಡ ನಾಶ ಮಾಡದೆ. ಅವರ ಮನೆಯ ಬಳಿ ತೋಟದಲ್ಲಿ ದಾರಿ ಮಧ್ಯೆ ತೋಡು ಹರಿಯುತ್ತಿದ್ದು, ಅಲ್ಲಿ ದ್ವಿಚಕ್ರ ದಾಟಿಸಲು ಸಾಧ್ಯವಾಗದ ಸಂದರ್ಭ ತೋಡಿನ ಒಂದು ಬದಿ ತೋಟದಲ್ಲಿ ಇರಿಸಿ ಹೋಗಿದ್ದಾರೆ. ಅದೇ

ಮಡಪ್ಪಾಡಿ: ಪೂಂಬಾಡಿ ಪರಿಸರದಲ್ಲಿ ಕೃಷಿ ತೋಟಕ್ಕೆ ಒಂಟಿ ಸಲಗ ದಾಳಿ, ಕೃಷಿ ಹಾನಿ Read More »

ಇಂದು(ಆ.19) ಸುಳ್ಯದಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ

ವಿಶ್ವ ಹಿಂದೂ ಪರಿಷತ್ ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ಸುಳ್ಯದಲ್ಲಿ ಹಿಂದೂ ಬಾಂಧವರನ್ನು ಸಂಘಟಿಸುವ ಸಲುವಾಗಿ ಶ್ರೀ ಕೃಷ್ಣ ಪರಮಾತ್ಮನ ಜನ್ಮ ದಿನಾಚರಣೆಯನ್ನು ಆಚರಿಸುವ ನಿಟ್ಟಿನಲ್ಲಿ ಶಾಂತಿ ಸುವ್ಯವಸ್ಥೆಯೊಂದಿಗೆ 12 ನೇ ವರ್ಷದ ಮೊಸರು ಕುಡಿಕೆ ಉತ್ಸವವನ್ನು ಅರ್ಥಪೂರ್ಣವಾದ ಶೋಭಾಯಾತ್ರೆ ಆಚರಣೆ ಇಂದು ಮಧ್ಯಾಹ್ನನತಂತರ ನಡೆಯಲಿದೆ.ಆ. 19 ರಂದು ಮದ್ಯಾಹ್ನದ ನಂತರ ನಡೆಯಲಿರುವ ಉತ್ಸವದಉದ್ಘಾಟನೆಯನ್ನು ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಮೊಕೇಸರರಾದ ಡಾ. ಹರಪ್ರಸಾದ್ ತುದಿಯಡ್ಕ ನೆರವೇರಿಸಲಿದ್ದಾರೆ. ಸಂಜೆ ನಡೆಯುವ ಧಾರ್ಮಿಕ ಸಭೆಯಲ್ಲಿ ಖ್ಯಾತ ವಾಗ್ನಿಗಳಾದ ಚಕ್ರವರ್ತಿ ಸೂಲಿಬೆಲೆ

ಇಂದು(ಆ.19) ಸುಳ್ಯದಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ Read More »

ಒಂದೇ ದೇಹ, ಎರಡು ತಲೆ-ಹೃದಯಗಳಿರುವ ಶಿಶು ಜನನ

ಪ್ರಕ್ರತಿಯಲ್ಲಿ ವಿಚಿತ್ರ ಘಟನೆಗಳು ಸಂಭವಿಸುತ್ತ ಇರುತ್ತವೆ.ಮಧ್ಯಪ್ರದೇಶದ ಇಂದೋರ್‌ನಲ್ಲಿ ಅಪರೂಪದ ವೈದ್ಯಕೀಯ ಘಟನೆಯೊಂದು ವರದಿಯಾಗಿದೆ. ಮಹಾರಾಜ ತುಕೋಜಿರಾವ್‌ ಆಸ್ಪತ್ರೆಯಲ್ಲಿ ಸೋನಾಲಿ ಮತ್ತು ಅಸಾರಾಂ ದಂಪತಿಗೆ ಎರಡು ತಲೆ, ಎರಡು ಹೃದಯ, ನಾಲ್ಕು ತೋಳು ಮತ್ತು ಎರಡು ಕಾಲುಗಳಿರುವ ಮಗು ಜನಿಸಿದೆ. ಈ ಅವಳಿ ಶಿಶುವಿಗೆ ಒಂದೇ ಎದೆ ಮತ್ತು ಹೊಟ್ಟೆ ಇದ್ದು, ವೈದ್ಯಕೀಯ ವಿಜ್ಞಾನದಲ್ಲಿ ಇದನ್ನು ಸಂಯೋಜಿತ ಅವಳಿಗಳು ಎಂದು ಕರೆಯಲಾಗುತ್ತದೆ. ಇದೊಂದು ಅಪರೂಪದ ಘಟನೆಯಾಗಿದ್ದು, ಇಂತಹ ಶಿಶುಗಳ ಬದುಕುಳಿಯುವ ಸಾಧ್ಯತೆ ತೀರಾ ಕಡಿಮೆ ಎಂದು ವೈದ್ಯರು ತಿಳಿಸಿದ್ದಾರೆ.

ಒಂದೇ ದೇಹ, ಎರಡು ತಲೆ-ಹೃದಯಗಳಿರುವ ಶಿಶು ಜನನ Read More »

ಸುಳ್ಯ ಸರಕಾರ ಪದವಿ ಪೂರ್ವ ಕಾಲೇಜು ನೂತನ ಅಕ್ಷರ ದಾಸೋಹ ಕೊಠಡಿಗೆ ಭೂಮಿ ಪೂಜೆ,ಅಮೃತ ಮಹೋತ್ಸವ ಲೋಗೋ ಮತ್ತು ಮನವಿ ಪತ್ರ ಬಿಡುಗಡೆ

ಸುಳ್ಯ ಸರ್ಕಾರಿ ಪದವಿಪೂರ್ವ ಕಾಲೇಜು ಅಮೃತ ಮಹೋತ್ಸವ-2025 ಈ ಕಾರ್ಯಕ್ರಮದ ಅಂಗವಾಗಿ ಸಂಸ್ಥೆಯಲ್ಲಿ ನೂತನ ಅಕ್ಷರ ದಾಸೋಹ ಕೊಠಡಿಗೆ ಭೂಮಿ ಪೂಜೆ ಕಾರ್ಯಕ್ರಮ ಆ.18 ರಂದು ನಡೆಯಿತು.ಅಕಾಡೆಮಿ ಆಫ್‌ ಲಿಬರಲ್ ಎಜ್ಯುಕೇಶನ್ ಇದರ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ರವರು ನೂತನ ಕಟ್ಟಡಕ್ಕೆ ಶಿಲಾನ್ಯಾಸವನ್ನು ನೆರವೇರಿಸಿದರು.ಬಳಿಕ ಮಾತನಾಡಿದ ಅವರು “ಈ ಶಾಲೆಯಲ್ಲಿ ಸಾವಿರಾರು ಮಂದಿ ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆದು ತಮ್ಮ ಜೀವನವನ್ನು ರೂಪಿಸಿಕೊಂಡಿದ್ದಾರೆ. ನೂರಾರು ಮಂದಿ ಹಳೆ ವಿದ್ಯಾರ್ಥಿಗಳು ಇಂದು ಜಿಲ್ಲಾ ಮಟ್ಟದಿಂದ ಹಿಡಿದು ರಾಷ್ಟ್ರಮಟ್ಟದವರೆಗೆ ವಿವಿಧ

ಸುಳ್ಯ ಸರಕಾರ ಪದವಿ ಪೂರ್ವ ಕಾಲೇಜು ನೂತನ ಅಕ್ಷರ ದಾಸೋಹ ಕೊಠಡಿಗೆ ಭೂಮಿ ಪೂಜೆ,ಅಮೃತ ಮಹೋತ್ಸವ ಲೋಗೋ ಮತ್ತು ಮನವಿ ಪತ್ರ ಬಿಡುಗಡೆ Read More »

ಗ್ರಾಮೀಣ ಆಟಗಳು ಮನಸ್ಸಿಗೆ ಹೆಚ್ಚು ಸಂತೋಷ ನೀಡುವ ಆಟಗಳಾಗಿವೆ

ಅರಂತೋಡು, ಆ. 19 : ಗ್ರಾಮೀಣ ಕ್ರೀಡೆಗಳು‌ ಮನಸ್ಸಿಗೆ ತುಂಬಾ ಸಂತೋಷ ನೀಡುವ ಕ್ರೀಡೆಯಾಗಿದೆ.ಚೆನ್ನಮಣೆ ಸೇರಿದಂತೆ ಇತರ ಗ್ರಾಮೀಣ ಕ್ರೀಡೆಗಳನ್ನು ನಮ್ಮ ಮುಂದಿನ ತಲೆಮಾರಿಗೆ ಕೊಂಡೊಯ್ಯುವ ಅಗತ್ಯ ಇದೆ ಎಂದು ಸಿ.ಆರ್.ಪಿ ಕುಶಾಲಪ್ಪ ಹೇಳಿದರು.ಸಿ. ಸಿ ಆರ್. ಟಿ. ಬಳಗ ಸುಳ್ಯ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸುಳ್ಯ, ಹಾಗೂ ಸರಕಾರಿ ಪ್ರೌಢ ಶಾಲೆ ಎಲಿ ಮಲೆ ಇವರ ಸಹಯೋಗದಲ್ಲಿ, ಪ್ರಾಥಮಿಕ‌ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಆ.16ರಂದು ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ಸುಳ್ಯ ತಾಲ್ಲೂಕು ಮಟ್ಟದ

ಗ್ರಾಮೀಣ ಆಟಗಳು ಮನಸ್ಸಿಗೆ ಹೆಚ್ಚು ಸಂತೋಷ ನೀಡುವ ಆಟಗಳಾಗಿವೆ Read More »

ಸೋಣಂಗೇರಿ ಶ್ರೀಕೃಷ್ಣ ಭಜನಾ ಮಂದಿರಕ್ಕೆ ಶಿಲಾನ್ಯಾಸ ಮತ್ತು ಭೂಮಿ ಪೂಜೆ ಕಾರ್ಯಕ್ರಮ

ಸುಳ್ಯ:ಸೋಣಂಗೇರಿ ಶ್ರೀಕೃಷ್ಣ ಭಜನಾ ಮಂದಿರದ ನೂತನ ಭಜನಾ ಮಂದಿರ ಕಟ್ಟಡಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮ ಆ.18ರಂದು ನಡೆಯಿತು. ಪೂ.10-20ರ ತುಲಾ ಲಗ್ನ ಮುಹೂರ್ತದಲ್ಲಿನೂತನ ಶ್ರೀಕೃಷ್ಣ ಭಜನಾ ಮಂದಿರ ನಿರ್ಮಾಣಕ್ಕೆಶಿಲಾನ್ಯಾಸ ಹಾಗೂ ಭೂಮಿ ಪೂಜನ ಕಾರ್ಯಕ್ರಮ ನೆರವೇರಿತು.ವೇದಮೂರ್ತಿ ಪುರೋಹಿತ ನಾಗರಾಜ ಭಟ್ ವೈದಿಕ ಕಾರ್ಯಕ್ರಮಗಳನ್ನು ನೆರವೇರಿಸಿದರು.ಉದ್ಯಮಿ ಹಾಗೂ ಕನಕಮಜಲು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಕಾಮತ್ ವಿನೋಬನಗರ ಶಿಲಾನ್ಯಾಸ ನೆರವೇರಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿಸೋಣಂಗೇರಿ ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ಷ ಗಿರಿಧರ ಗೌಡ ನಾಯಿರ್‌ಹಿತ್ಲು ಅಧ್ಯಕ್ಷತೆ

ಸೋಣಂಗೇರಿ ಶ್ರೀಕೃಷ್ಣ ಭಜನಾ ಮಂದಿರಕ್ಕೆ ಶಿಲಾನ್ಯಾಸ ಮತ್ತು ಭೂಮಿ ಪೂಜೆ ಕಾರ್ಯಕ್ರಮ Read More »

ಮಹಿಳಾ ಪೊಲೀಸ್ ಸಿಬ್ಬಂದಿಗೆ ಅಶ್ಲೀಲ ಸನ್ನೆ ಮಾಡಿದ ಯುವಕ ಮೇಲೆ ಪ್ರಕರಣ ದಾಖಲು

ಮೊಸರುಕುಡಿಕೆ ಉತ್ಸವದ ಶೋಭಾಯಾತ್ರೆ ನಡೆಯುತ್ತಿದ್ದಾಗ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಸಿಬ್ಬಂದಿಗೆ ಅಶ್ಲೀಲ ಸನ್ನೆ ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅಸೈಗೋಳಿ ನಿವಾಸಿ ದೀಪಕ್ ಮತ್ತು ತೊಕ್ಕೊಟ್ಟು ನಿವಾಸಿ ಕಿರಣ್ ಬಂಧಿತರು.ಉಳ್ಳಾಲದ ತೊಕ್ಕೊಟ್ಟುವಿನಲ್ಲಿ ನಿನ್ನೆ ಜೈ ವೀರಮಾರುತಿ ವ್ಯಾಯಾಮ ಶಾಲೆಯ ವತಿಯಿಂದ ನಡೆದ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆ 11.50 ರ ವೇಳೆಗೆ ತೊಕ್ಕೊಟ್ಟು ಒಳಪೇಟೆಯ ತಾಜ್ ಸೈಕಲ್ ಶಾಪ್ ಬಳಿ ತಲುಪಿದಾಗ ಯುವಕರ ಗುಂಪೊಂದು ಬ್ಯಾಂಡ್ ಬಾರಿಸುತ್ತಾ ಮೆರವಣಿಗೆ ಮುಂದೆ ಹೋಗಲು ಅವಕಾಶ ನೀಡದೆ ತೊಂದರೆ ನೀಡಿದ್ದಾರೆ.

ಮಹಿಳಾ ಪೊಲೀಸ್ ಸಿಬ್ಬಂದಿಗೆ ಅಶ್ಲೀಲ ಸನ್ನೆ ಮಾಡಿದ ಯುವಕ ಮೇಲೆ ಪ್ರಕರಣ ದಾಖಲು Read More »

error: Content is protected !!
Scroll to Top