Uncategorized

ಬಂಟ್ವಾಳದಲ್ಲಿ ಅರೆಭಾಷೆ ಸಾಂಸ್ಕೃತಿಕ ಸಂಭ್ರಮ – 2026 ಕಾರ್ಯಕ್ರಮ

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸಹಯೋಗದೊಂದಿಗೆ ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ (ರಿ) ಬಂಟ್ವಾಳ ಇದರ ಆಶ್ರಯದಲ್ಲಿ ಕರಾವಳಿ ಕಲೋತ್ಸವ ಕಾರ್ಯಕ್ರಮದಲ್ಲಿ ಅರೆಭಾಷೆ ಸಾಂಸ್ಕೃತಿಕ ಸಂಭ್ರಮ – 2026 ಮೇ.6ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಿತು. ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಕಾರ್ಯಕ್ರಮ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಅರೆಭಾಷೆ ಸಾಂಸ್ಕೃತಿಕ ಸಂಭ್ರಮ -2026 ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲ ಉಮೇಶ್ ಕುಮಾ‌ರ್ ವೈ ವಹಿಸಿದ್ದರು.ಕಾರ್ಯಕ್ರಮದಲ್ಲಿ ಬಿ.ಸಿ. ರೋಡಿನ ವಕೀಲರಾದ ಅಶ್ವನಿ ಕುಮಾ‌ರ್ ರೈ, ಪುತ್ತೂರು ಒಕ್ಕಲಿಗರ […]

ಬಂಟ್ವಾಳದಲ್ಲಿ ಅರೆಭಾಷೆ ಸಾಂಸ್ಕೃತಿಕ ಸಂಭ್ರಮ – 2026 ಕಾರ್ಯಕ್ರಮ Read More »

ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆ

ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾಗಿಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುವೇಂದು ಅಧಿಕಾರಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.ನಾಳೆ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ.ಬಿಜೆಪಿ ವೀಕ್ಷಕರಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಉಪಸ್ಥಿತಿಯಲ್ಲಿ ಸುವೇಂದುಅಧಿಕಾರಿ ಅವರನ್ನು ಮುಖ್ಯಮಂತ್ರಿಯಾಗಿ ಅಯ್ಕೆ ಮಾಡಲಾಗಿದ್ದು, ನಾಳೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲೂ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ.ಸುವೇಂದು ಅಧಿಕಾರಿ ಜೊತೆ ಸುಮಿತ್ ಭಟ್ಟಾಚಾರ್ಯ,

ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆ Read More »

ಎನ್ನೆಂಸಿಯಲ್ಲಿ ಯುವ ರೆಡ್ ಕ್ರಾಸ್ ದಿನಾಚರಣೆ

ಸುವರ್ಣ ಸಂಭ್ರಮದ ಹೊಸ್ತಿಲಲ್ಲಿರುವ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ರೆಡ್ ಕ್ರಾಸ್ ದಿನಾಚರಣೆಯನ್ನು ಮೇ 8ರಂದು ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಯಿತು. ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದೊಂದಿಗೆ ಹಮ್ಮಿಕೊಂಡ ರೆಡ್ ಕ್ರಾಸ್ ದಿನಾಚರಣೆ ಕಾರ್ಯಕ್ರಮವನ್ನು “ಸ್ವಚ್ಛತೆ – ಆರೋಗ್ಯ- ರಕ್ಷಣೆ- ಬದುಕು” ಎಂಬ ಶೀರ್ಷಿಕೆಯಡಿಯಲ್ಲಿ  ಮಾಹಿತಿ ಹಾಗೂ ಗೌರವಾರ್ಪಣೆ ಕಾರ್ಯಕ್ರಮದೊಂದಿಗೆ ನಡೆಸಲಾಯಿತು.ಕಾಲೇಜಿನ ರಕ್ಷಣಾ ಹಾಗೂ ಸ್ವಚ್ಛತಾ   ಸಿಬ್ಬಂದಿಗಳಾದ ಭಾಗ್ಯನಂದ ಎಂ.ಆರ್, ಸೀತಾರಾಮ ರಾವ್ ಕೆ,

ಎನ್ನೆಂಸಿಯಲ್ಲಿ ಯುವ ರೆಡ್ ಕ್ರಾಸ್ ದಿನಾಚರಣೆ Read More »

ನೀರಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರು ಸಾವು

ಕಡಬ ತಾಲೂಕಿನ ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ಮುಳುಗಿ ಮೃತಪಟ್ಟ ಘಟನೆ ಮೇ.8ರಂದು ವರದಿಯಾಗಿದೆ.ಗುಂಡ್ಯ ಹೊಳೆಯ ಕೊಲ್ಯದಕಟ್ಟ ಡ್ಯಾಂ ಬಳಿ ಘಟನೆ ನಡೆದಿದ್ದುಕುಟ್ರುಪ್ಪಾಡಿಯ ಅರ್ಪಿತಾ(15), ಸುನೀತಾ (21) ಮೃತರು ಎಂದು ಗರುತಿಸಲಾಗಿದೆ ಹೆಚ್ಚಿ ಮಾಹಿತಿ ತಿಳಿದು ಬರಬೇಕಾಗಿದೆ.

ನೀರಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರು ಸಾವು Read More »

ಇಂದಿನಿಂದ ಸುಳ್ಯದ ಚಿತ್ರಮಂದಿರದಲ್ಲಿ ಭಾವ ತೀರ ಯಾನ ಚಲನಚಿತ್ರ ಪ್ರದರ್ಶನ ಆರಂಭ

ಆರೋಹ ಫಿಲಂಸ್ ಬ್ಯಾನರ್‌ ಅಡಿಯಲ್ಲಿ ಶೈಲೇಶ್ ಅಂಬೆಕಲ್ಲು ಹಾಗೂ ಲಕ್ಷ್ಮಣ ಬಿ.ಕೆ ನಿರ್ಮಿಸಿರುವ, ಮಯೂರ್ ಅಂಜಿಕಲ್ಲು ಹಾಗೂ ತೇಜಸ್ ಕಿರಣ್ ಜಂಟಿಯಾಗಿ ನಿರ್ದೇಶಿಸಿರುವ ‘ಭಾವ ತೀರ ಯಾನ’ ಸಿನಿಮಾ ಚೊಚ್ಚಲ ಪ್ರಯತ್ನದಲ್ಲೇ ಅತ್ಯುತ್ತಮ ಚಲನಚಿತ್ರ ಹೊರತಂದಿರುವುದು ಒಂದು ಸಾಧನೆ ಎಂದು ಎಂ.ಬಿ.ಪೌಂಡೇಶನ್ ಅಧ್ಯಕ್ಷ ಎಂ.ಬಿ. ಸದಾಶಿವ ಹೇಳಿದರು.ಅವರು ಸುಳ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮೇ.8 ರಂದು ಸುಳ್ಯದಲ್ಲಿ ಮರುತೆರೆ ಕಾಣಲಿರುವ ಭಾವತೀರ ಯಾನ ಚಲನಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಚಿತ್ರ ಸಮಾಜಕ್ಕೆ ಉತ್ತಮ ಸಂದೇಶ ಸಾರುವ

ಇಂದಿನಿಂದ ಸುಳ್ಯದ ಚಿತ್ರಮಂದಿರದಲ್ಲಿ ಭಾವ ತೀರ ಯಾನ ಚಲನಚಿತ್ರ ಪ್ರದರ್ಶನ ಆರಂಭ Read More »

ಮಡಿಕೇರಿ ಮಂಗಳೂರು‌ ರಸ್ತೆಯಲ್ಲಿ ಬಸ್ಸು ಚಾಲಕನಿಗೆ ಹೃದಯಘಾತವಾಗಿ ಬರೆಗೆ ಗುದ್ದಿದ ಬಸ್ಸು ,ಚಾಲಕ ಸಾವು,ಪ್ರಯಾಣಿಕರು ಪಾರು

ಬೆಂಗಳೂರಿನಿಂದ ಸುಳ್ಯ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಒಂದರ ಚಾಲಕನಿಗೆ ಹೃದಯಾಘಾತವಾಗಿ ಬಸ್ ನಿಯಂತ್ರಣ ತಪ್ಪಿ ಬರೆಗೆ ಗುದ್ದಿ ನಿಂತ ಹಾಗೂ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿ ಚಾಲಕ ಹ್ರದಯಘಾತದಿಂದ ಸಾವನ್ನಪ್ಪಿದ ಮೇ.8ರಂದು ಮುಂಜಾನೆ ಮಡಿಕೇರಿ ಬಳಿಯ ಕಾಟಿಗೇರಿಯಿಂದ ವರದಿಯಾಗಿದೆ.ರಾತ್ರಿ ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗುವ ಪೂರ್ಣಿಮ ಬಸ್ ನಿನ್ನೆ ರಾತ್ರಿ ಬೆಂಗಳೂರಿನಿಂದ ಹೊರಟಿತು. ಇಂದು ಮುಂಜಾನೆ ಮಡಿಕೇರಿ ದಾಟಿ ಬರುತ್ತಿರುವಾಗ ಕಾಟಿಕೇರಿ ಬಳಿ ತಿರುವಿನಲ್ಲಿ ಬಸ್ ಚಾಲಕ ಶಿವಕುಮಾರ್ ಹೃದಯಾಘಾತಕ್ಕೊಳಗಾಗಿ ಬಸ್ ನಿಯಂತ್ರಣ ತಪ್ಪಿ

ಮಡಿಕೇರಿ ಮಂಗಳೂರು‌ ರಸ್ತೆಯಲ್ಲಿ ಬಸ್ಸು ಚಾಲಕನಿಗೆ ಹೃದಯಘಾತವಾಗಿ ಬರೆಗೆ ಗುದ್ದಿದ ಬಸ್ಸು ,ಚಾಲಕ ಸಾವು,ಪ್ರಯಾಣಿಕರು ಪಾರು Read More »

ಕಲ್ಲುಗುಂಡಿ : ಹಿರಿಯ ಯಕ್ಷಗಾನ ಕಲಾವಿದ ಪಕೀರಪ್ಪ ಪೂಜಾರಿ ನಿಧನ

ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಚೆಟ್ಟಕಲ್ಲು ನಿವಾಸಿ, ಹಿರಿಯ ಯಕ್ಷಗಾನ ಕಲಾವಿದ, ಪಕೀರಪ್ಪ ಪೂಜಾರಿಯವರು ಅಲ್ಪಕಾಲದ ಅಸೌಖ್ಯದಿಂದ ಮೇ. 7 ರಂದು ನಿಧನರಾದರು.ಮೃತರು ಪುತ್ರರಾದ ರಾಮಕೃಷ್ಣ, ತೇಜಪ್ರಕಾಶ್, ಚಂದ್ರಶೇಖ‌ರ್, ಪುತ್ರಿಯನ್ನು ಸೊಸೆಯಂದಿರು, ಅಳಿಯ, ಮೊಮ್ಮಕ್ಕಳನ್ನು ಅಗಲಿದ್ದಾರೆ.

ಕಲ್ಲುಗುಂಡಿ : ಹಿರಿಯ ಯಕ್ಷಗಾನ ಕಲಾವಿದ ಪಕೀರಪ್ಪ ಪೂಜಾರಿ ನಿಧನ Read More »

ಆಪರೇಷನ್‌ ಸಿಂಧೂರ್‌ಗೆ ವರ್ಷದ ಸಂಭ್ರಮ : ವೀಡಿಯೊ ಹಂಚಿಕೊಂಡ ಭಾರತೀಯ ಸೇನೆ

ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ್’ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ಸಂಭ್ರಮದಲ್ಲಿದ್ದು ಈ ಹಿನ್ನೆಲೆಯಲ್ಲಿ, ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ಅಡಗಿದ್ದ ಉಗ್ರರ ವಿರುದ್ಧ ನಡೆದಿದ್ದ ಕಾರ್ಯಾಚರಣೆಯ ವಿಶೇಷ ವೀಡಿಯೊವನ್ನು ಬಿಡುಗಡೆ ಮಾಡಿದೆ. ಒಂದು ವರ್ಷದ ಹಿಂದೆ, ಭಾರತದ ಭದ್ರತೆಗೆ ಸವಾಲಾಗಿದ್ದ ಭಯೋತ್ಪಾದಕ ತಾಣಗಳನ್ನು ಗುರಿಯಾಗಿಸಿಕೊಂಡು ರಹಸ್ಯ ಕಾರ್ಯಾಚರಣೆ ನಡೆಸಿ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಲಾಗಿತ್ತು. ಭಾರತದ ಮೇಲೆ ಕಣ್ಣು ಹಾಕುವ ಅಥವಾ ಭಯೋತ್ಪಾದನೆಗೆ ಬೆಂಬಲ ನೀಡುವ ಶಕ್ತಿಗಳನ್ನು ಭಾರತೀಯ ಸೇನೆ ಹುಡುಕಿ ಶಿಕ್ಷಿಸುತ್ತದೆ ಎಂಬಸಂದೇಶವನ್ನು ಈ ವೀಡಿಯೊ ನೀಡಿದೆ.

ಆಪರೇಷನ್‌ ಸಿಂಧೂರ್‌ಗೆ ವರ್ಷದ ಸಂಭ್ರಮ : ವೀಡಿಯೊ ಹಂಚಿಕೊಂಡ ಭಾರತೀಯ ಸೇನೆ Read More »

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು : ಸುಳ್ಯದಲ್ಲಿ ಬಿಜೆಪಿಯಿಂದ ಸಿಹಿತಿಂಡಿ ಹಂಚಿ ಸಂಭ್ರಮಾಚರಣೆ

ಪಂಚರಾಜ್ಯ ರಾಜ್ಯ ಚುನಾವಣೆಯ ಮೂರು ರಾಜ್ಯಗಳ್ಲಿ ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ಸುಳ್ಯ ಬಿಜೆಪಿ ವತಿಯಿಂದ ಖಾಸಗಿ ಬಸ್ ನಿಲ್ದಾಣದ ಬಳಿಯಲ್ಲಿ ವಿಜಯೋತ್ಸವ ಆಚರಿಸಲಾಯಿತು.ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಜಿಲ್ಲಾ ಬಿಜೆಪಿ ಮುಖಂಡ ರಾಕೇಶ್ ರೈ ಕೆಡೆಂಜಿ, ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಪುಷ್ಪಾ ಮೇದಪ್ಪ,ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ ಬಿ.ಕೆ. ಸುಳ್ಯ ಸಿ‌.ಎ ವಿಕ್ರಂ ಅಡ್ಪಂಗಾಯ,

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು : ಸುಳ್ಯದಲ್ಲಿ ಬಿಜೆಪಿಯಿಂದ ಸಿಹಿತಿಂಡಿ ಹಂಚಿ ಸಂಭ್ರಮಾಚರಣೆ Read More »

ಪ್ರತಿ ಮನೆಯಲ್ಲಿ ಭಜನೆಯ ನಾದ ಮೊಳಗಬೇಕು : ಮಾಧವ ಗೌಡ

ಭಜನೆಯ ಮೂಲಕ ಭಗವಂತನ ನಾಮಸ್ಮರಣೆ ಮಾಡುವುದಿಂದ ಮನಸ್ಸಿಗೆ ಶ್ರೇಷ್ಠ ಸುಖ ಸಿಗುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆಯ ಸುಳ್ಯ ಯೋಜನಾ ಕಚೇರಿಯ ಯೋಜನಾಧಿಕಾರಿ ಮಾಧವ ಗೌಡ ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸುಳ್ಯ ,ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್,ಸುಳ್ಯ ವಲಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಇದರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರದ ಉದ್ಘಾಟನಾ

ಪ್ರತಿ ಮನೆಯಲ್ಲಿ ಭಜನೆಯ ನಾದ ಮೊಳಗಬೇಕು : ಮಾಧವ ಗೌಡ Read More »

error: Content is protected !!
Scroll to Top