Uncategorized

ಹಲಸಿನ ಉತ್ಪನ್ನಗಳಿಗೆ ಸಾಕಾಷ್ಟು ಬೇಡಿಕೆ ಇದೆ : ಶ್ರೀ ಪಡ್ರೆ

ಹಲಸಿನ vಉತ್ಪನ್ನಗಳಿಗೆವ ಸಾಕಾಷ್ಟು ಬೇಡಿಕೆಗಳಿದ್ದು ಅವಕಾಶಗಳು ನಮ್ಮ ಮುಂದೆ ಇದೆ. ಲಕ್ಷಾಂತರ ರೂ ಬಂಡವಾಳ ಹೂಡಿಕೆ ಮಾಡಿಯೇ ಹಲಸಿನ ಮೌಲ್ಯವರ್ಧನೆ ಮಾಡಬೇಕೆಂದಿಲ್ಲ. ಸರಳ ವಿಧಾನದಿಂದಲೂ ಹಲಸಿನಿಂದ ಉತ್ತಮ ಆಧಾಯ ಪಡೆಯಬಹುದು ಎಂದು ಅಡಿಕೆ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಶ್ರೀಪಡ್ರೆ ಹೇಳಿದರು. ಅವರು ಟೀಮ್ ಉಬಾ‌ರ್, ಸುಳ್ಯ ರೈತ ಉತ್ಪಾದಕ ಕಂಪೆನಿ ಸುಳ್ಯ, ಪ್ರಣವ ಸೌಹಾರ್ದ ಸಹಕಾರಿ ಸಂಘ ಮತ್ತು ಸುದ್ದಿ ಕೃಷಿ ಅರಿವು ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಸ್ಥಳೀಯ ತಾಲೂಕು ಆಡಳಿತ,ತಾಲೂಕು ಪಂಚಾಯತ್, ಕೃಷಿ ಸಂಬಂಧಿತ […]

ಹಲಸಿನ ಉತ್ಪನ್ನಗಳಿಗೆ ಸಾಕಾಷ್ಟು ಬೇಡಿಕೆ ಇದೆ : ಶ್ರೀ ಪಡ್ರೆ Read More »

ಸುಳ್ಯದಲ್ಲಿ ನಾಳೆಯಿಂದ ಮೂರು ದಿವಸ ಹಲಸು ಮತ್ತು ಮಾವು ಮೇಳ

ಸುಳ್ಯದಲ್ಲಿ ಮೊದಲ ಬಾರಿಗೆ ಟೀಮ್ ಉಬಾ‌ರ್, ಸುಳ್ಯ ರೈತ ಉತ್ಪಾದಕ ಕಂಪೆನಿ ನಿ. ಸುಳ್ಯ, ಪ್ರಣವ ಸೌಹಾರ್ದ ಸಹಕಾರಿ ಸಂಘ ನಿ. ಮತ್ತು ಸುದ್ದಿ ಕೃಷಿ ಅರಿವು ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಸ್ಥಳೀಯ ತಾಲೂಕು ಆಡಳಿತ ತಾಲೂಕು ಪಂಚಾಯತ್ ಕೃಷಿ ಸಂಬಂಧಿತ ಸರಕಾರಿ ಇಲಾಖೆಗಳು ಹಾಗೂ ಸಹಕಾರಿ ಸಂಘಗಳು, ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ ಹಲಸು ಮತ್ತು ಮಾವು ಮೇಳ ಜೂನ್ 12 ರಿಂದ 14 ರವರೆಗೆ ಸುಳ್ಯದ ಶ್ರೀ ದುರ್ಗಾಪರಮೇಶ್ವರಿ

ಸುಳ್ಯದಲ್ಲಿ ನಾಳೆಯಿಂದ ಮೂರು ದಿವಸ ಹಲಸು ಮತ್ತು ಮಾವು ಮೇಳ Read More »

ಉದ್ಯಮಿ ಆನಂದ ಕಲ್ಲುಗದ್ದೆ ರವರಿಂದ ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಧ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ಕೊಡುಗೆ

ಬೆಂಗಳೂರಿನಲ್ಲಿ ನೆಲೆಸಿರುವ ಸಾಫ್ಟ್ ವೇರ್ ಉಧ್ಯಮಿ ಅರಂತೋಡಿನ ಆನಂದ ಕಲ್ಲುಗದ್ದೆಯವರು ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಧಾರ್ಥಿಗಳಿಗೆ ಪ್ರತೀ ವರ್ಷ ಉಚಿತವಾಗಿ ನೀಡುವ ನೋಟ್ ಪುಸ್ತಕಗಳನ್ನು, ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ 190 ವಿದ್ಯಾರ್ಥಿಗಳಿಗೆ ಜೂ.9 ರಂದು ಹಸ್ತಾಂತರಿಸಿದರು. ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಶ್ ಉಳುವಾರು ರವರು ವಹಿಸಿದರು.ನೋಟ್ ಪುಸ್ತಕಗಳನ್ನು ಅರಂತೋಡು ಸಮೂಹ ಸಂಪನ್ಮೂಲ ಕೇಂದ್ರದ ಸಂಯೋಜಕಿ ಮಮತಾ ವಿಧಾರ್ಥಿಗಳಿಗೆ ವಿತರಿಸಿದರು. ಮುಖ್ಯೋಪಾಧ್ಯಾಯ ಗೋಪಾಲಕೃಷ್ಣ ಬನ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹಿರಿಯ ವಿದ್ಯಾರ್ಥಿ ಸಂಘದ

ಉದ್ಯಮಿ ಆನಂದ ಕಲ್ಲುಗದ್ದೆ ರವರಿಂದ ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಧ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ಕೊಡುಗೆ Read More »

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ವತಿಯಿಂದ ಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲೆಯಲ್ಲಿ ವನಮಹೋತ್ಸವ

ಸ್ವರ್ಣಂ ಜ್ಯುವೆಲ್ಸ್ ಸುಳ್ಯ ವತಿಯಿಂದ ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು ಮತ್ತು ಕರ್ನಾಟಕ ಜರ್ನರ್ಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಹಣ್ಣಿನ ಗಿಡ ವಿತರಣೆ, ಸ್ಥಳದಲ್ಲೇ ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮ ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಜೂ.8 ರಂದು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ವರ್ಣಂ ಜ್ಯುವೆಲ್ಸ್ ಪಾಲುದಾರ ಪ್ರವೀಣ್ ಬಿ. ಗೌಡ ವಹಿಸಿ ಮಾತನಾಡಿದರು.ಮುಖ್ಯ ಅತಿಥಿಗಳಾಗಿ ಶಾಲಾ ಸಂಚಾಲಕ ಸದಾನಂದ ಮಾವಜಿ,ಉಪ ವಲಯ ಅರಣ್ಯಾಧಿಕಾರಿ ರಂಜಿತಾ ಪಿ., ಜಾಲ್ಸೂರು ವಿಜಯ ಗ್ರಾಮಾಭಿವೃದ್ಧಿ ಸಮಿತಿ

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ವತಿಯಿಂದ ಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲೆಯಲ್ಲಿ ವನಮಹೋತ್ಸವ Read More »

ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ನೂತನ ಅರ್ಚಕರಾಗಿ ಮನೋಜ್ ಭಟ್ ಕನ್ಯಾನ ನೇಮಕ

ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ನೂತನ ಅರ್ಚಕರಾಗಿ ಮನೋಜ್ ಭಟ್ ಕನ್ಯಾನ ನೇಮಕಗೊಂಡಿದ್ದು ದೇವಳದ ವ್ಯವಸ್ಥಾಪನಾ ಸಮಿತಿಯವರು ಸ್ವಾಗತಿಸಿದರು.ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿ ಪ್ರಸಾದ ಕಾನತ್ತೂರ್,ವ್ಯವಸ್ಥಾಪನ ಸಮಿತಿ ಸದಸ್ಯರಾದ ಸತ್ಯ ನಾರಾಯಣ ಭಟ್, ಸಂತೋಷ ಕುಮಾರ್ ರೈ ಪಲತಡ್ಕ, ಮೈಲಪ್ಪ ಗೌಡ ಎಣ್ಮೂರು,ಧರ್ಮಪಾಲ ಗೌಡ ಮರಕಡ, ಧರ್ಮಣ್ಣ ನಾಯ್ಕ ಗರಡಿ, ಮಾಲಿನಿ ಕುದ್ವ,ಪವಿತ್ರ ಮೆಲ್ಲೆಟ್ಟಿ ಹಾಗೂ ಗೌರವ ಸಲಹೆಗಾರರಾದ ಪರಮೇಶ್ವರ ಗೌಡ ಬಿಳಿಮಲೆ ಉಪಸ್ಥಿತರಿದ್ದರು.

ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ನೂತನ ಅರ್ಚಕರಾಗಿ ಮನೋಜ್ ಭಟ್ ಕನ್ಯಾನ ನೇಮಕ Read More »

ಜೂನ್ 9 ರಂದು ಜಿಫ್ರಿ ತಂಘಳ್ ರವರಿಂದ ಅರಂತೋಡು ಮಸೀದಿಯ ಮೇಲಂತಸ್ತು ಮತ್ತು ನೂತನ ಮದರಸ ಕಟ್ಟಡಕ್ಕೆ ಶಿಲಾನ್ಯಾಸ

ಅರಂತೋಡು : ಬದ್ರಿಯಾ ಜುಮಾ ಮಸೀದಿ ಅರಂತೋಡು ಇದರ ಮೇಲಂತಸ್ತು ನಿರ್ಮಾಣ ಕಾಮಗಾರಿಗೆ ಹಾಗೂ ನುಸ್ರತುಲ್ ಇಸ್ಲಾಂ ಮದರಸದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಜೂನ್ 9 ರಂದು ಬೆಳಗ್ಗೆ ಗಂಟೆ 9.30ಕ್ಕೆ ಅರಂತೋಡು ಮಸೀದಿ ವಠಾರದಲ್ಲಿ ನಡೆಯಲಿದೆ. ನೂತನ ಮದರಸ ಕಟ್ಟಡಕ್ಕೆ ಶಿಲಾನ್ಯಾಸವನ್ನು ಸಮಸ್ತ ಕೇರಳ ಜಂಇತ್ತುಲ್ ಉಲಮಾ ಅಧ್ಯಕ್ಷರಾದ ಸಯ್ಯಿದ್ ಉಲಮಾ, ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಘಳ್ ನೆರವೇರಿಸಲಿದ್ದು, ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್

ಜೂನ್ 9 ರಂದು ಜಿಫ್ರಿ ತಂಘಳ್ ರವರಿಂದ ಅರಂತೋಡು ಮಸೀದಿಯ ಮೇಲಂತಸ್ತು ಮತ್ತು ನೂತನ ಮದರಸ ಕಟ್ಟಡಕ್ಕೆ ಶಿಲಾನ್ಯಾಸ Read More »

ಮಾಣಿ : ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ ಸಮೀಪದಲ್ಲಿ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಪ್ರತಿಭಾವಂತೆಯಾಗಿರುವ ಬಾಲಕಿ ನೈರುತಿ ಎಂ ಸುವರ್ಣ(10) ಮೃತಪಟ್ಟ ಘಟನೆ ವರದಿಯಾಗಿದೆ.ಬಾಳ್ತಿಲ ಗ್ರಾಮದ ನಿವಾಸಿ ಹೇಮಂತ್ ಎಂಬವರ ಪುತ್ರಿಯಾಗಿರುವ ನೈರುತಿ ಪ್ರತಿಭಾವಂತೆಯಾಗಿದ್ದಳು,ತಂದೆ ಮತ್ತು ತಾಯಿಯೊಂದಿಗೆ ಬುಧವಾರ ಸಂಜೆ ವೇಳೆ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಬರುವಾಗ ಸೂರಿಕುಮೇರು ಸಮೀಪಿಸುತ್ತಿರುವಾಗಲೇ ಇನ್ನೊಂದು ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದ್ದು ಕಾಂಕ್ರೀಟ್ ರಸ್ತೆಗೆಸೆಯಲ್ಪಟ್ಟ ನೈರುತಿಯ ತಲೆ ಭಾಗಕ್ಕೆ ಗಂಭೀರ ಪೆಟ್ಟು ತಗುಲಿರುವುದರಿಂದ ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ ವೇಳೆ ಸಾವನ್ನಪ್ಪಿದಳು.

ಮಾಣಿ : ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು Read More »

ಡಿ.ಕೆ.ಶಿ ಸರ್ಕಾರದ ಮೊದಲ ವಿಕೆಟ್ ಪತನ!

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸಚಿವ ರಾಮಲಿಂಗಾರೆಡ್ಡಿ ತಮಗೆ ನಿರೀಕ್ಷಿತ “ಬೆಂಗಳೂರು ನಗರಾಭಿವೃದ್ಧಿ” ಖಾತೆ ಸಿಗದ ಕಾರಣ ಅಚ್ಚರಿಯ ರಾಜೀನಾಮೆ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಬೆಂಗಳೂರು ನಗರಾಭಿವೃದ್ಧಿ ಖಾತೆಯ ಜವಾಬ್ದಾರಿಯನ್ನು ನಿರೀಕ್ಷಿಸಲಾಗಿತ್ತು. ಆದರೆ, ಖಾತೆ ಸಿಗದ ಕಾರಣ ಸಚಿವ ಸ್ಥಾನದಲ್ಲಿ ಮುಂದುವರಿಯಲು ಇಷ್ಟವಿಲ್ಲದೆ ಈ ನಿರ್ಧಾರ ಕೈಗೊಂಡಿದ್ದೇನೆ,” ಎಂದು ತಮ್ಮ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಡಿ.ಕೆ.ಶಿ ಸರ್ಕಾರದ ಮೊದಲ ವಿಕೆಟ್ ಪತನ! Read More »

ಆರು ಜನರ ಮರ್ಡರ್ ಪ್ರಕರಣ, ಪ್ರಮುಖ ಆರೋಪಿ ಸೇರಿ ಹಲವರ ಬಂಧನ!

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದ ಆಸ್ತಿ ವಿವಾದ ಸಂಬಂಧಿತ ಆರು ಜನರ ಭೀಕರ ಕೊಲೆ ಪ್ರಕರಣದಲ್ಲಿ, ಪೊಲೀಸರು ಪ್ರಮುಖ ಸೂತ್ರಧಾರಿ ಹಾಗೂ ಮುಖ್ಯ ಆರೋಪಿ ಸೇರಿದಂತೆ ಮತ್ತಿಬ್ಬರನ್ನು ಗುರುವಾರ ಬಂಧಿಸಿದ್ದಾರೆ. ಈ ಬಂಧನಗಳೊಂದಿಗೆ ಒಟ್ಟು ಹದಿನೇಳು ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು. ಮೇ 29ರಂದು ನಡೆದಿದ್ದ ಈ ಪ್ರಕರಣದ ತನಿಖೆ

ಆರು ಜನರ ಮರ್ಡರ್ ಪ್ರಕರಣ, ಪ್ರಮುಖ ಆರೋಪಿ ಸೇರಿ ಹಲವರ ಬಂಧನ! Read More »

ಅರಂತೋಡು ತೊಡಿಕಾನ ರಸ್ತೆ ಪರ್ನೋಜಿ‌ ಸಮೀಪ ಕುಸಿತ!

ಅರಂತೋಡು ತೊಡಿಕಾನ ದ ಪರ್ನೋಜಿ ಸಮೀಪ ಮುಖ್ಯ ರಸ್ತೆಯ ತಲಭಾಗದಲ್ಲಿ ಭೂಕುಸಿತವಾಗಿದ್ದು ಅಪಾಯ ಎದುರಾಗಿದೆ.ವಾಹನ ಸವಾರರು ಗಮನ ಹರಿಸಬೇಕಾಗಿದೆ.

ಅರಂತೋಡು ತೊಡಿಕಾನ ರಸ್ತೆ ಪರ್ನೋಜಿ‌ ಸಮೀಪ ಕುಸಿತ! Read More »

error: Content is protected !!
Scroll to Top