Uncategorized

ಕಾಡು ಪ್ರಾಣಿ ಭೇಟೆಯಾಡಿ ಸಾಗಾಟಕ್ಕೆ ಯತ್ನ,ಅರಣ್ಯ ಇಲಾಖೆ ದಾಳಿ

ಅಕ್ರಮವಾಗಿ ಕಾಡು ಪ್ರಾಣಿ ಬೇಟೆಯಾಡಿ ಬಂದು ಮಾಂಸ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ನಿವಾಸಿ ಜೋಸ್ಸಿ ಅಲ್ವಿನ್ ಲೋಬೋ ಎಂಬವರ ಮನೆಯ ಶೆಡ್ ನಲ್ಲಿ ಅಕ್ರಮವಾಗಿ ಕೋವಿಯಿಂದ ಕಾಡು ಪ್ರಾಣಿ ಬೇಟೆಯಾಡಿ ತಂದು ಮಾಂಸ ಮಾಡಿ ಪ್ಲಾಸ್ಟಿಕ್ ಚೀಲದಲ್ಲಿ ಪ್ಯಾಕ್ ಮಾಡಿಕೊಂಡು ಕಾರಿನಲ್ಲಿಟ್ಟು ಸಾಗಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಖಚಿತ ಮಾಹಿತಿ […]

ಕಾಡು ಪ್ರಾಣಿ ಭೇಟೆಯಾಡಿ ಸಾಗಾಟಕ್ಕೆ ಯತ್ನ,ಅರಣ್ಯ ಇಲಾಖೆ ದಾಳಿ Read More »

ಸಾರ್ವಜನಿಕ ಸ್ಥಳದಲ್ಲಿ ತಲವಾರು ಹಿಡಿದುಕೊಂಡು ಹೋಗುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪುತ್ತೂರು ಬೊಳುವಾರು ಎಂಬಲ್ಲಿ ಸೋಮವಾರ ರಾತ್ರಿ ಸಾರ್ವಜನಿಕ ಸ್ಥಳದಲ್ಲಿ ತಲವಾರು ಹಿಡಿದುಕೊಂಡು ಸಂಚರಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ವರದಿಯಾಗಿದೆ. ಸಕಲೇಶಪುರ ಮೂಲದ ರಾಜೇಶ್ ಅಲಿಯಾಸ್‌ ರಾಜು (45) ತಲ್ವಾರು ಹಿಡಿದುಕೊಂಡಿದ್ದ ವ್ಯಕ್ತಿ ಎಂದು ತಿಳಿದು ಬಂದಿದೆ.ರಾಜೇಶ್ ಶೆಟ್ಟಿ ತನ್ನಲ್ಲಿದ್ದ ತಲವಾರನ್ನು ಬೆನ್ನ ಹಿಂದೆ ಇಟ್ಟುಕೊಂಡು ಹೋಗುತ್ತಿದ್ದಾಗ ಕೈಯಲ್ಲಿದ್ದ ಬೀಡಿ ಬಿದ್ದ ಕಾರಣ ಎತ್ತಲು ಬಗ್ಗಿದಾಗ ತಲವಾರು ಸಾರ್ವಜನಿಕರ ಕಣ್ಣಿಗೆ ಬಿದ್ದಿದೆ ಎಂದು ಹೇಳಲಾಗುತ್ತಿದೆ.ತಲವಾರು ಕಂಡ ಸಾರ್ವಜನಿಕರು ಭಯಭೀತರಾಗಿ, ತಕ್ಷಣ ಆತನನ್ನು ಸುತ್ತುವರಿದು ಹಿಡಿದುಕೊಂಡಿದ್ದಾರೆ ಎಂದು

ಸಾರ್ವಜನಿಕ ಸ್ಥಳದಲ್ಲಿ ತಲವಾರು ಹಿಡಿದುಕೊಂಡು ಹೋಗುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು Read More »

ಬೆಳ್ಳಾರೆಯ ಐತಿಹಾಸಿಕ ಸ್ಥಳ “ಬಂಗ್ಲೆ ಗುಡ್ಡೆ ” ಅರೆಭಾಷೆ ಅಕಾಡೆಮಿ ಅಧ್ಯಕ್ಷರಿಂದ ವೀಕ್ಷಣೆ .

ಬೆಳ್ಳಾರೆಯ ಐತಿಹಾಸಿಕ ಸ್ಥಳವಾದ ಬಂಗ್ಲೆ ಗುಡ್ಡೆಗೆ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಚಾರಿತ್ರಿಕ ಹಿನ್ನಲೆಯುಳ್ಳ ಈ ಸ್ಥಳವು ಸರ್ವೆ ನಂಬರ್ 197/2A ಯಲ್ಲಿ 0.93 ಎಕ್ರೆ ಸ್ಥಳವಿದ್ದು ಎರಡು ಬಂಗ್ಲೆ ಕಟ್ಟಡಗಳನ್ನು ಹೊಂದಿರುತ್ತದೆ.ಈ ಸ್ಥಳಕ್ಕೆ ಆವರಣವಿಲ್ಲದೆ ಪೂರ್ತಿ ಪೊದೆಗಳಿಂದ ಕೂಡಿರುತ್ತದೆ.ಇದರಲ್ಲಿರುವ ಒಂದು ಕಟ್ಟಡವನ್ನು ದುರಸ್ತಿಗೊಳಿಸಲು ಸರ್ಕಾರದಿಂದ ರೂ.10 ಲಕ್ಷ ಅನುದಾನವು ಬಿಡುಗಡೆಗೊಂಡಿರುತ್ತದೆ. ಈ ಹಣದಿಂದ ಪ್ರಾರಂಭಗೊಂಡ ದುರಸ್ತಿ ಕಾರ್ಯಗಳು ಇದೀಗ ಸ್ಥಗಿತಗೊಂಡಿದೆ. ಈ ಬಗ್ಗೆ ಸಂಬಂಧಪಟ್ಟ

ಬೆಳ್ಳಾರೆಯ ಐತಿಹಾಸಿಕ ಸ್ಥಳ “ಬಂಗ್ಲೆ ಗುಡ್ಡೆ ” ಅರೆಭಾಷೆ ಅಕಾಡೆಮಿ ಅಧ್ಯಕ್ಷರಿಂದ ವೀಕ್ಷಣೆ . Read More »

ಜು.16ಕ್ಕೆ ಅರಂತೋಡು ಕೊಡಂಕೇರಿ ಕೊರಗಜ್ಜ ದೈವಸ್ಥಾನದಲ್ಲಿ ಅಗೇಲು ಸೇವೆ

ಸ್ವಾಮಿ ಕೊರಗಜ್ಜ ದೈವಸ್ಥಾನ ಅರಂತೋಡು ಕೊಡಂಕೇರಿ ಯಲ್ಲಿ ದಿನಾಂಕ 16-07-2025 ರ ಕರ್ಕಟಕ ಸಂಕ್ರಮಣದಂದು ಕೊರಗಜ್ಜ ದೈವದ ಅಗೇಲು ಸೇವೆ ರಾತ್ರಿ ಗಂಟೆ 7:00 ಕ್ಕೆ ನಡೆಯಲಿದೆ. ನಂತರ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ದೈವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು 7022077809

ಜು.16ಕ್ಕೆ ಅರಂತೋಡು ಕೊಡಂಕೇರಿ ಕೊರಗಜ್ಜ ದೈವಸ್ಥಾನದಲ್ಲಿ ಅಗೇಲು ಸೇವೆ Read More »

ಹೊಸ ಬೆಳೆಗಳನ್ನು ಪರಿಚಯಿಸುವ ಮೂಲಕ ರೈತರು ಸರಕಾರದಿಂದ ಮಾಹಿತಿ ಪಡೆದುಕೊಳ್ಳಬೇಕು : ಮುರುವ ಮಹಾಬಲ ಭಟ್

ಹೊಸ ಬೆಳೆಗಳನ್ನು ಪರಿಚಯಿಸುವ ಮೂಲಕ ರೈತರು ಬದುಕು ಕಟ್ಟಿಕೊಳ್ಳುವುದಕ್ಕೆ ಸರ್ಕಾರ ಅನುವು ಮಾಡಿಕೊಟ್ಟಿದೆ. ಸರ್ಕಾರದ ಮಾಹಿತಿ ಪಡೆದುಕೊಳ್ಳುವ ಕಾರ್ಯ ಕೃಷಿಕರಿಂದ ನಡೆಯಬೇಕು ಎಂದು ಕೃಷಿಕ ಮುರುವ ಮಹಾಬಲಭಟ್ ಹೇಳಿದರು.ಅವರು ಅಳಿಕೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ 3F ಆಯಿಲ್ ಪಾಮ್ ಪ್ರೈವೇಟ್ ಲಿಮಿಟೆಡ್ ಕಂಪನಿ ಮತ್ತು ಶ್ರೀ ಭಾರತಿ ಎಣ್ಣೆ ತಾಳೆ ಬೆಳಗಾರರ ಸಹಕಾರಿ ಸಂಘ ಸಹಯೋಗದೊಂದಿಗೆ ತೋಟಗಾರಿಕೆ ಇಲಾಖೆ ಬಂಟ್ವಾಳ ತಾಲೂಕು ಆಶ್ರಯದಲ್ಲಿ ಅಳಿಕೆ ಗ್ರಾಮ ಪಂಚಾಯಿತಿ, ಕಂಪುಕೃಷಿ ಮತ್ತು ತೋಟಗಾರಿಕೆ ರೈತ ಉತ್ಪಾದಕರಕಂಪನಿ ಕುದ್ದುಪದವು, ಅಳಿಕೆ

ಹೊಸ ಬೆಳೆಗಳನ್ನು ಪರಿಚಯಿಸುವ ಮೂಲಕ ರೈತರು ಸರಕಾರದಿಂದ ಮಾಹಿತಿ ಪಡೆದುಕೊಳ್ಳಬೇಕು : ಮುರುವ ಮಹಾಬಲ ಭಟ್ Read More »

ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಬಿ. ಸರೋಜಾ ದೇವಿ ಇನ್ನಿಲ್ಲ

ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಬಿ. ಸರೋಜಾ ದೇವಿ ನಿಧನಸ್ಯಾಂಡಲ್‌ವುಡ್‌ನ ಹಿರಿಯ ನಟಿ ಬಿ. ಸರೋಜಾ ದೇವಿ ನಿಧನರಾಗಿದ್ದಾರೆ. ಅವರು ಯಶವಂತಪುರದ ಮಣಿಪಾಲ್‌ ಆಸ್ಪತ್ರೆಯಲ್ಲಿ ಸೋಮವಾರ ಮುಂಜಾನೆ ವಿಧಿವಶರಾಗಿದ್ದಾರೆಂದು ತಿಳಿದುಬಂದಿದೆ. ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿದ್ದ ಹಿರಿಯ ಕಲಾವಿದೆ ಏಳು ದಶಕಗಳಲ್ಲಿ ಸುಮಾರು ೨೦೦ ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ. ಕನ್ನಡದಲ್ಲಿ ಅಭಿನಯ ಸರಸ್ವತಿ ತಮಿಳಿನಲ್ಲಿ “ಕನ್ನಡತು ಪೈಂಗಿಲಿ” ಎಂದು ಅವರನ್ನು ಕರೆಯಲಾಗುತ್ತಿತ್ತು.

ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಬಿ. ಸರೋಜಾ ದೇವಿ ಇನ್ನಿಲ್ಲ Read More »

ಪುತ್ತೂರು ಮಂಗಳೂರು ನಡುವೆ ಎಕ್ಸ್ ಪ್ರೆಸ್ ಕೆ.ಆರ್.ಟಿ.ಸಿ ಬಸ್ ಸಂಚಾರ ಆರಂಭ,ಸಮಯದ ವಿವರ ಇಲ್ಲಿದೆ ಓದಿ

ಪುತ್ತೂರು ಮಂಗಳೂರು ನಡುವೆ ಎಕ್ಸ್ ಪ್ರೆಸ್ ಕೆ.ಆರ್.ಟಿ.ಸಿ ಬಸ್ ಸಂಚಾರ ಆರಂಭ,ಸಮಯದ ವಿವರ ಇಲ್ಲಿದೆ ಓದಿ Read More »

ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರ ಮನೆಯಲ್ಲಿ ಬೆಂಕಿ ಅವಘಡ

ಧರ್ಮಸ್ಥಳ ಗ್ರಾಮದ ಗ್ರಾ.ಪಂ ಮಾಜಿ ಅಧ್ಯಕ್ಷೆ ಗೀತಾ ದಾಮೋದರ ಆಚಾರ್ಯ ಅವರ ಮನೆಯಲ್ಲಿ ಜು.13 ರಂದು ಬೆಳಗಿನ ಜಾವ ಗ್ಯಾಸ್ ಸೋರಿಕೆಯಾಗಿ ಅಡುಗೆ ಮನೆ ಸಂಪೂರ್ಣ ಸುಟ್ಟು ಹೋದ ಘಟನೆ ಸಂಭವಿಸಿದೆ.ಜುಲೈ 13 ರಂದು ಭಾನುವಾರ ಬೆಳಗ್ಗೆ ಉಪಹಾರ ತಯಾರಿಸಲು ಗ್ಯಾಸ್ ಉರಿಸಿದಾಗ ಸಿಲಿಂಡರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿ ಪೂಜಾ ಕಾರ್ಯಕ್ರಮ ಇದ್ದ ಕಾರಣ ತುಂಬಾ ಜನರಿದ್ದರು. ಮನೆಯವರು ಬೆಂಕಿ ನಂದಿಸುವ ಪ್ರಯತ್ನ ನಡೆಸಿದರೂ ಅದು ಸಾಧ್ಯವಾಗಿಲ್ಲ. ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸಲು ಸಹಕರಿಸಿದರು.

ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರ ಮನೆಯಲ್ಲಿ ಬೆಂಕಿ ಅವಘಡ Read More »

ತಾಳೆ ಕೃಷಿಕ ಆಶೋಕ್ ಕುಮಾರ್ ಅವರ ತಾಳೆ ತೋಟಕ್ಕೆ ಕೃಷಿ ಸಖಿಯರು ಮತ್ತು ತಾಳೆ ಕೃಷಿಗೆ ಆಸಕ್ತಿ ಹೊಂದಿದ ರೈತರು ಭೇಟಿ

ತಾಳೆ ಬೆಳೆ ಕೃಷಿಗೆ ಸಂಬಂಧಿಸಿದಂತೆ ಕಲಿಕಾ ಪ್ರವಾಸವನ್ನು ಬೆಳ್ತಂಗಡಿ ತಾಲೂಕಿನ ಕೃಷಿ ಸಖಿಗಳು ಮತ್ತು ತಾಳೆ ಕೃಷಿಗೆ ಆಸಕ್ತಿ ಹೊಂದಿದ ಹೊಸ ರೈತರು ಸುಳ್ಯ ತಾಲೂಕಿನ ತಾಳೆ ಬೆಳೆಯನ್ನು ಅತ್ಯುತ್ತಮವಾಗಿ ಬೆಳೆದ ರೈತ ಪಂಬೆತಾಡಿ ಕೆ. ಎಸ್ ಅಶೋಕ್ ಕುಮಾರ್ ತೋಟಕ್ಕೆ ಭೇಟಿ ನೀಡಿ ಅವರಿಂದ ತಾಳೆ ಕೃಷಿಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.ತಾಳೆ ಬೆಳೆ ಕೃಷಿಗೆ ಸಂಬಂಧಿಸಿದಂತೆ ಕಲಿಕಾ ಪ್ರವಾಸದಲ್ಲಿ ಒಟ್ಟು 65 ಜನರು ಭಾಗವಹಿಸಿದರ.ಅದರಲ್ಲಿ 50 ಕೃಷಿ ಸಖಿಗಳು,15 ತಾಳೆ ಕೃಷಿಯ ಹೊಸ ರೈತರು ಹಾಗೂ

ತಾಳೆ ಕೃಷಿಕ ಆಶೋಕ್ ಕುಮಾರ್ ಅವರ ತಾಳೆ ತೋಟಕ್ಕೆ ಕೃಷಿ ಸಖಿಯರು ಮತ್ತು ತಾಳೆ ಕೃಷಿಗೆ ಆಸಕ್ತಿ ಹೊಂದಿದ ರೈತರು ಭೇಟಿ Read More »

ಕಾಡಾನೆಗಳ ಸಮಸ್ಯೆಯ ಬಗ್ಗೆ ಶಾಶ್ವತ ತಡೆ ಮಾಡಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ : ಶಾಸಕಿ ಭಾಗೀರಥಿ

ಅರಂತೋಡು: ಆನೆಗಳು ಸೇರಿದಂದೆ ಇತರ ಕಾಡು ಪ್ರಾಣಿಗಳ ಹಾವಳಿಯಿಂದ ಹಾನಿಗೊಳಗಾಗಿರುವ ಆರಂತೋಡು-ತೋಡಿಕಾನ ಗ್ರಾಮದ ಕೃಷಿಕರು ಹಾಗೂ ಶಾಸಕರು ಮತ್ತು ಅರಣ್ಯಾಧಿಕಾರಿಗಳೊಂದಿಗೆ ಸಂವಾದ ಕಾರ್ಯಕ್ರಮ ಅರಂತೋಡು ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು. ಕಾಡು ಪ್ರಾಣಿಗಳ ಹಾವಳಿಯಿಂದ ಆಗಿರುವ ಹಾನಿಯ ಕುರಿತು ಕೃಷಿಕರು ಶಾಸಕರಿಗೆವಿವರಿಸಿದರು. ರೈತರ ಸಮಸ್ಯೆಯನ್ನು ಆಲಿಸಿದ ಶಾಸಕಿ ಭಾಗೀರಥಿ ಮುರುಳ್ಯ ಕಾಡು ಪ್ರಾಣಿಗಳ ಪ್ರಾಣಿಗಳ ಹಾವಳಿ ತೀವ್ರಗೊಂಡಿದ್ದು ಸುಳ್ಯ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಭಾಗಗಳಲ್ಲಿ ವ್ಯಾಪಕ ಹಾನಿ ಮಾಡಿವೆ.ಇದಕ್ಕೆ ಶಾಶ್ವತ ತಡೆ ಮಾಡಲು ಸರಕಾರ

ಕಾಡಾನೆಗಳ ಸಮಸ್ಯೆಯ ಬಗ್ಗೆ ಶಾಶ್ವತ ತಡೆ ಮಾಡಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ : ಶಾಸಕಿ ಭಾಗೀರಥಿ Read More »

error: Content is protected !!
Scroll to Top