ಪುತ್ತೂರು ಮಂಗಳೂರು ನಡುವೆ ಎಕ್ಸ್ ಪ್ರೆಸ್ ಕೆ.ಆರ್.ಟಿ.ಸಿ ಬಸ್ ಸಂಚಾರ ಆರಂಭ,ಸಮಯದ ವಿವರ ಇಲ್ಲಿದೆ ಓದಿ
ಪುತ್ತೂರು ಮಂಗಳೂರು ನಡುವೆ ಎಕ್ಸ್ ಪ್ರೆಸ್ ಕೆ.ಆರ್.ಟಿ.ಸಿ ಬಸ್ ಸಂಚಾರ ಆರಂಭ,ಸಮಯದ ವಿವರ ಇಲ್ಲಿದೆ ಓದಿ Read More »
ಧರ್ಮಸ್ಥಳ ಗ್ರಾಮದ ಗ್ರಾ.ಪಂ ಮಾಜಿ ಅಧ್ಯಕ್ಷೆ ಗೀತಾ ದಾಮೋದರ ಆಚಾರ್ಯ ಅವರ ಮನೆಯಲ್ಲಿ ಜು.13 ರಂದು ಬೆಳಗಿನ ಜಾವ ಗ್ಯಾಸ್ ಸೋರಿಕೆಯಾಗಿ ಅಡುಗೆ ಮನೆ ಸಂಪೂರ್ಣ ಸುಟ್ಟು ಹೋದ ಘಟನೆ ಸಂಭವಿಸಿದೆ.ಜುಲೈ 13 ರಂದು ಭಾನುವಾರ ಬೆಳಗ್ಗೆ ಉಪಹಾರ ತಯಾರಿಸಲು ಗ್ಯಾಸ್ ಉರಿಸಿದಾಗ ಸಿಲಿಂಡರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿ ಪೂಜಾ ಕಾರ್ಯಕ್ರಮ ಇದ್ದ ಕಾರಣ ತುಂಬಾ ಜನರಿದ್ದರು. ಮನೆಯವರು ಬೆಂಕಿ ನಂದಿಸುವ ಪ್ರಯತ್ನ ನಡೆಸಿದರೂ ಅದು ಸಾಧ್ಯವಾಗಿಲ್ಲ. ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸಲು ಸಹಕರಿಸಿದರು.
ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರ ಮನೆಯಲ್ಲಿ ಬೆಂಕಿ ಅವಘಡ Read More »
ತಾಳೆ ಬೆಳೆ ಕೃಷಿಗೆ ಸಂಬಂಧಿಸಿದಂತೆ ಕಲಿಕಾ ಪ್ರವಾಸವನ್ನು ಬೆಳ್ತಂಗಡಿ ತಾಲೂಕಿನ ಕೃಷಿ ಸಖಿಗಳು ಮತ್ತು ತಾಳೆ ಕೃಷಿಗೆ ಆಸಕ್ತಿ ಹೊಂದಿದ ಹೊಸ ರೈತರು ಸುಳ್ಯ ತಾಲೂಕಿನ ತಾಳೆ ಬೆಳೆಯನ್ನು ಅತ್ಯುತ್ತಮವಾಗಿ ಬೆಳೆದ ರೈತ ಪಂಬೆತಾಡಿ ಕೆ. ಎಸ್ ಅಶೋಕ್ ಕುಮಾರ್ ತೋಟಕ್ಕೆ ಭೇಟಿ ನೀಡಿ ಅವರಿಂದ ತಾಳೆ ಕೃಷಿಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.ತಾಳೆ ಬೆಳೆ ಕೃಷಿಗೆ ಸಂಬಂಧಿಸಿದಂತೆ ಕಲಿಕಾ ಪ್ರವಾಸದಲ್ಲಿ ಒಟ್ಟು 65 ಜನರು ಭಾಗವಹಿಸಿದರ.ಅದರಲ್ಲಿ 50 ಕೃಷಿ ಸಖಿಗಳು,15 ತಾಳೆ ಕೃಷಿಯ ಹೊಸ ರೈತರು ಹಾಗೂ
ಅರಂತೋಡು: ಆನೆಗಳು ಸೇರಿದಂದೆ ಇತರ ಕಾಡು ಪ್ರಾಣಿಗಳ ಹಾವಳಿಯಿಂದ ಹಾನಿಗೊಳಗಾಗಿರುವ ಆರಂತೋಡು-ತೋಡಿಕಾನ ಗ್ರಾಮದ ಕೃಷಿಕರು ಹಾಗೂ ಶಾಸಕರು ಮತ್ತು ಅರಣ್ಯಾಧಿಕಾರಿಗಳೊಂದಿಗೆ ಸಂವಾದ ಕಾರ್ಯಕ್ರಮ ಅರಂತೋಡು ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು. ಕಾಡು ಪ್ರಾಣಿಗಳ ಹಾವಳಿಯಿಂದ ಆಗಿರುವ ಹಾನಿಯ ಕುರಿತು ಕೃಷಿಕರು ಶಾಸಕರಿಗೆವಿವರಿಸಿದರು. ರೈತರ ಸಮಸ್ಯೆಯನ್ನು ಆಲಿಸಿದ ಶಾಸಕಿ ಭಾಗೀರಥಿ ಮುರುಳ್ಯ ಕಾಡು ಪ್ರಾಣಿಗಳ ಪ್ರಾಣಿಗಳ ಹಾವಳಿ ತೀವ್ರಗೊಂಡಿದ್ದು ಸುಳ್ಯ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಭಾಗಗಳಲ್ಲಿ ವ್ಯಾಪಕ ಹಾನಿ ಮಾಡಿವೆ.ಇದಕ್ಕೆ ಶಾಶ್ವತ ತಡೆ ಮಾಡಲು ಸರಕಾರ
ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ದೂರುದಾರ ನೀಡಿರುವ ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವೀಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಬಗ್ಗೆ ಖ್ಯಾತ ಯುಟ್ಯೂಬರ್ ಸಮೀರ್ ಎಂ.ಡಿ ಎಂಬವರ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದೂರುದಾರರು ತನ್ನ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆ ಬಹಿರಂಗಪಡಿಸಿರುವ ಮಾಹಿತಿಗಳನ್ನು ಹೊರತುಪಡಿಸಿ ಸಾಕ್ಷಿ ದೂರುದಾರರ ಬಗ್ಗೆ ಹಾಗೂ ಪ್ರಕರಣದ ಬಗ್ಗೆ ಇತರ ಹೆಚ್ಚಿನ ಮಾಹಿತಿಯಿರುವ ಕಾಲ್ಪನಿಕವಾಗಿ ಎ.ಐ
ಖ್ಯಾತ ಯುಟ್ಯೂಬರ್ ಸಮೀರ್ ವಿರುದ್ಧ ಪ್ರಕರಣ ದಾಖಲು Read More »
ಪುತ್ತೂರು ತಾಲೂಕಿನ ಪುರುಷರಕಟ್ಟೆ ಮಾಯಂಗಲ ರಸ್ತೆಯ ಅಂಗನವಾಡಿ ಎದುರುಗಡೆ ನಿಲ್ಲಿಸಿದ್ದ ಆಕ್ಟಿವಾ ಹೋಂಡಾ (ಕೆ.ಎ:21-ಇಡಿ 9849)ಕಳವಾದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಕೊಳ್ತಿಗೆ ಗ್ರಾಮದ ಕಮ್ಮಾರ ಉಮೇಶ್ ಎಂಬವರು ಪುರುಷರಕಟ್ಟೆಯಿಂದ ಮಾಯಂಗಲ ರಸ್ತೆಯಲ್ಲಿ ಬರುವ ಅಂಗನವಾಡಿಯ ಎದುರುಗಡೆ ಕಟ್ಟಡದ ಕೆಲಸ ಮಾಡುತ್ತಿದ್ದು ಕೆಲಸ ಮುಗಿಸಿ ಮನೆಗೆ ತೆರಳುವ ಸಮಯ ಅವರ ಸ್ಕೂಟರ್ ಸ್ಟಾರ್ಟ್ ಆಗದ ಹಿನ್ನೆಲೆಯಲ್ಲಿ ಅಲ್ಲೇ ಬಿಟ್ಟು ಹೋಗಿದ್ದರು. ಜು.10ಕ್ಕೆ ಬೆಳಗ್ಗೆ ಬಂದು ನೋಡಿದಾಗ ಸ್ಕೂಟರ್ ನಾಪತ್ತೆಯಾಗಿತ್ತು. ಸ್ಕೂಟರ್ ಅನ್ನು ಯಾರೋ ಕಳ್ಳರು
ನಿಲ್ಲಿಸಿದ ಸ್ಕೂಟರ್ ಕಳವು Read More »
ಬೆಂಕಿ ಅವಘಡ ಸಂಭವಿಸಿ ಅರಂತೋಡು ಘನ ತಾಜ್ಯ ಘಟಕ ಸುಟ್ಟು ಹೋಗಿದ್ದು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರು ಕು. ಭಾಗೀರಥಿ ಮುರುಳ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವಿನಾಯಕ್ ಕಾರ್ಭಾರಿಯವರು ಜುಲೈ 11 ರಂದು ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿ ಪಡಕೊಂಡರು.ಬಳಿಕ ಅವರುಗಳು ಘಟನೆಯ ಬಗ್ಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.ನೂತನ ಘನ ತಾಜ್ಯ ನಿರ್ಮಾಣ, ಹಾಗೂ ಶೀಘ್ರವೇ ಸರಕಾರದ ಗಮನಕ್ಕೆ ತಂದು ಅನುದಾನವನ್ನು ಕೊಡಿಸುವ ಪ್ರಯತ್ನ ಮಾಡಲಾಗುವುದು ಎಂದು ಅಧಿಕಾರಿಗಳು
ಅರಂತೋಡು : ಬೆಂಕಿ ಅವಘಡ ಸಂಭವಿಸಿದ ಘನ ತ್ಯಾಜ್ಯ ವಿಲೇವಾರಿ ಘಟಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ Read More »
ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ದೂರು ನೀಡಿದ ನೀಡಿದ ವ್ಯಕ್ತಿ ಜಡ್ಜ್ ಮುಂದೆ ಜುಲೈ11 ರಂದು ಸಂಜೆ 4:40 ರಿಂದ 6 ಗಂಟೆವರೆಗೆ ಒಟ್ಟು 1 ಗಂಟೆ 20 ನಿಮಿಷ ಹೇಳಿಕೆ ನೀಡಿ ಬಳಿಕ ಹೇಳಿಕೆಯ ಪತ್ರಿಗೆ ಸಹಿ ಹಾಕಿ ವಕೀಲರ ಜೊತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ತನಿಖೆಗಾಗಿ ಕಾರಿನಲ್ಲಿ ತೆರಳಿದ್ದಾರೆ.ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂದೇಶ್.ಕೆ ಮುಂದೆ ದೂರುದಾರ ವ್ಯಕ್ತಿ ಒಬ್ಬನೇ ಹಾಜರಾಗಿ BNS 183
ಭಾರೀ ಕುತೂಹಲಕ್ಕೆ ಕಾರಣವಾದ ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದನ್ನು ತೋರಿಸುವೆ ಎಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ 4 ರಂದು ದೂರು ನೀಡಿದ ವ್ಯಕ್ತಿ ಜುಲೈ 11 ರಂದು (ಇಂದು) ಸಂಜೆ 4:40 ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ತನ್ನ ಇಬ್ಬರು ವಕೀಲರ ಜೊತೆ ಹಾಜರಾಗಿದ್ದಾನೆ.ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂದೇಶ್.ಕೆ ಮುಂದೆ ಹಾಜರಾಗಿ BNS 183 ಹೇಳಿಕೆ ನೀಡಿದ್ದಾನೆ.
ಅಧುನಿಕ ಕಾಲಘಟ್ಟದಲ್ಲಿ ಗುರುಪರಂಪರೆ ನಶಿಸಿ ಹೋಗುತ್ತಿದ್ದು ಇದನ್ನು ಉಳಿಸಿ ಬೆಳೆಸುವ ಅಗತ್ಯ ಇದೆ ಎಂದು ಅಜ್ಜಾವರ ಚೈತನ್ಯ ಸೇವಾಶ್ರಮದ ಶ್ರೀ ಸ್ವಾಮಿ ಯೋಗೇಶ್ವರಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.ಅವರು ತಮ್ಮ ಆಶ್ರಮದಲ್ಲಿ ಗುರುಪೂಜೆ ಆಚರಣೆ ಮತ್ತು ತಾವು ಬರೆದ ಕೃತಿ ”ಕರ್ಮ ಶುದ್ಧಿಯಿಂದ ಜನ್ಮ ಶುದ್ಧಿಯಾಗುವುದು’ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಸ್ವಾಮೀಜಿಯವರ ಕೃತಿಯನ್ನು ಬಿಡುಡೆಗೊಳಿಸಿ ಮಾತನಾಡಿದ ಸುಳ್ಯ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರೋಪೆಸರ್ ಡಾ.ಹರ್ಷವರ್ಧನ ಮಾತನಾಡಿ ಹಿಂದಿನ ಕಾಲದಲ್ಲಿ ಗುರುಕುಲದಲ್ಲಿ ಶಿಕ್ಷಣ ಪಡೆಯಲಾಗುತ್ತಿತ್ತು.ಅಲ್ಲಿಯೇ ಧಾರ್ಮಿಕ ಶಿಕ್ಷಣ ಶೈಕ್ಷಣಿಕ ಶಿಕ್ಷಣ
ಗುರುಪರಂಪರೆಯನ್ನು ಉಳಿಸಿ ಬೆಳೆಸುವ : ಶ್ರೀ ಸ್ವಾಮಿ ಯೋಗೇಶ್ವರಾನಂದ ಸರಸ್ವತಿ Read More »