Uncategorized

ಜೇಸಿಐ ಸುಳ್ಯ ಪಯಸ್ವಿನಿ ಘಟಕ ವತಿಯಿಂದ ವಿಶ್ವ ಕಾರ್ಮಿಕ ದಿನ ಆಚರಣೆ 

ಜೇಸಿಐ ಸುಳ್ಯ ಪಯಸ್ವಿನಿವತಿಯಿಂದ  ವಿಶ್ವ ಕಾರ್ಮಿಕ ದಿನಾಚರಣೆ    ಕಾರ್ಯಕ್ರಮವನ್ನು  ಮೇ 2ರಂದು   ಸಂಚಯ ನಿವಾಸ ಚೂಂತಾರು ಇಲ್ಲಿ ಆಚರಿಸಲಾಯಿತು. ಜೇಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷೆ ಜೇಸಿ ಲತಾಶ್ರೀ ಸುಪ್ರೀತ್ ಮೋಂಟಡ್ಕ  ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಕಾರ್ಮಿಕ ದಿನದ ಪ್ರಯುಕ್ತ ಶ್ರಮಿಕ ವರ್ಗದ ಜನರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಎಲೇಕ್ಟ್ರಿಷನ್ ಆಗಿ ಗುರುತಿಸಿ ಕೊಂಡಿರುವ ಶ್ರೀ. ಹರಿಶ್ಚಂದ್ರ ತಂಟೆಪ್ಪಾಡಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಶ್ರೀ. ವಸಂತ ಶೆಟ್ಟಿ ಬೆಳ್ಳಾರೆ, ಅಧ್ಯಕ್ಷರು ದೆಹಲಿ ತುಳು ಸಿರಿ, […]

ಜೇಸಿಐ ಸುಳ್ಯ ಪಯಸ್ವಿನಿ ಘಟಕ ವತಿಯಿಂದ ವಿಶ್ವ ಕಾರ್ಮಿಕ ದಿನ ಆಚರಣೆ  Read More »

ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ವಿವಿಧ ವೈಧಿಕ ಕಾರ್ಯಕ್ರಮ

ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿಮೇ. 2ರಂದು ಪೂರ್ವಹ್ನ 8 ರಿಂದ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ 12 ಕಾಯಿ ಗಣಪತಿ ಹವನ,ಆಶ್ಲೇಷಾಬಲಿ, ಶತರುದ್ರಾಭಿಷೇಕ, ಕಲಶಅಭಿಷೇಕ ಹಾಗೂ ಪರಿವಾರ ದೈವಗಳಿಗೆ ಹಾಗೂ ನಾಗದೇವರಿಗೆ ಕಲಶ ಅಭಿಷೇಕ,ತಂಬಿಲ ಸೇವೆಗಳು ನಡೆಯಿತು.ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿ ಪ್ರಸಾದ್ ಕಾನತ್ತೂರು.ಸದಸ್ಯರಾದ ಸಂತೋಷ ಕುಮಾರ್ ರೈ, ಧರ್ಮಣ್ಣ ನಾಯ್ಕ ಗರಡಿ,ಮಾಯಿಲಪ್ಪ, ಎಣ್ಮೂರು,ಧರ್ಮಪಾಲ ಮರಕಡ,ಪವಿತ್ರ ,ಮಾಲೆಟ್ಟಿ, ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು.

ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ವಿವಿಧ ವೈಧಿಕ ಕಾರ್ಯಕ್ರಮ Read More »

ಶ್ರದ್ಧಾ ಭಕ್ತಿಯಿಂದ ನಡೆದ ಅಡ್ತಲೆ ಕುಟುಂಬಸ್ಥರ ಧರ್ಮ ನಡಾವಳಿ

ಅರಂತೋಡು ಗ್ರಾಮದ ಅಡ್ತಲೆ ಕುಟುಂಬಸ್ಥರ ಆದಿಮನೆಯಲ್ಲಿ ಧರ್ಮ ನಡಾವಳಿ ಏ.30 ಮತ್ತು ಮೇ.1ರಂದು ಶ್ರದ್ಧಾ ಭಕ್ತಿಯಿಂದ ನಡೆಯಿತು.ಏ.3೦ನೇ ಗುರುವಾರ ಪೂರ್ವಾಹ್ನ ಗಂಟೆ 10-೦೦ರಿಂದಶ್ರೀ ವೆಂಕಟ್ರಮಣ ದೇವರ ಹರಿಸೇವೆ ನಡೆಯಿತು.ಸಂಜೆ ಗಂಟೆ 6-00ಕ್ಕೆಶ್ರೀ ದೈವಗಳ ಭಂಡಾರ ತೆಗೆಯಲಾಯಿತು‌. ರಾತ್ರಿ ಗಂಟೆ 8-00ರ ನಂತರ ಉಪದೈವಗಳ ನೇಮ ನಡೆಯಿತು. ಮೇ 1ನೇ ಶುಕ್ರವಾರ ಶ್ರೀ ಧರ್ಮದೈವದ ನಡಾವಳಿ ಮತ್ತು ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆರಾತ್ರಿ ಗಂಟೆ 6-00ರಿಂದ ಉಪದೈವಗಳ ನೇಮೋತ್ಸವ ನಡೆಯಿತು.ಈ ಸಂದರ್ಭದಲ್ಲಿ ಅಧ್ಯಕ್ಷರಾದ ಗಿರೀಶ್ ಹೆಚ್,ಕುಟುಂಬದ ಹಿರಿಯರಾದ ಹೊನ್ನಪ್ಪ

ಶ್ರದ್ಧಾ ಭಕ್ತಿಯಿಂದ ನಡೆದ ಅಡ್ತಲೆ ಕುಟುಂಬಸ್ಥರ ಧರ್ಮ ನಡಾವಳಿ Read More »

ನಾಳೆ ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಪ್ರಯುಕ್ತ ವಿವಿಧ ವೈಧಿಕ ಕಾರ್ಯಕ್ರಮ

ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿಮೇ. 2ರಂದು ಪೂರ್ವಹ್ನ 8 ರಿಂದ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ 12 ಕಾಯಿ ಗಣಪತಿ ಹವನ,ಆಶ್ಲೇಷಾಬಲಿ, ಶತರುದ್ರಾಭಿಷೇಕ, ಕಲಶಅಭಿಷೇಕ ಹಾಗೂ ಪರಿವಾರ ದೈವಗಳಿಗೆ ಹಾಗೂ ನಾಗದೇವರಿಗೆ ಕಲಶ ಅಭಿಷೇಕ,ತಂಬಿಲ ಸೇವೆಗಳು ನಡೆಯಲಿದೆ .ಎಲ್ಲಾ ಭಕ್ತಭಿಮಾನಿಗಳು ಆಗಮಿಸಿ ಪ್ರಸಾದ ಸ್ವೀಕರಿಸ ಬೇಕಾಗಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿ ಪ್ರಸಾದ್ ಕಾನತ್ತೂರು ವಿನಂತಿಸಿಕೊಂಡಿದ್ದಾರೆ.

ನಾಳೆ ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಪ್ರಯುಕ್ತ ವಿವಿಧ ವೈಧಿಕ ಕಾರ್ಯಕ್ರಮ Read More »

ದಕ್ಷಿಣ ಕನ್ನಡ,ಉಡುಪಿ,ಕಾಸರಗೋಡು ಭಾಗದಲ್ಲಿ ರಾತ್ರಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆ

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಹಗಲು ತೀವ್ರ ಬಿಸಿಲು ಮತ್ತು ಸೆಖೆ ಇರಲಿದ್ದರೂ, ಸಂಜೆ ಹಾಗೂ ರಾತ್ರಿ ವೇಳೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಬೆಳಗಾವಿ ಮತ್ತು ಧಾರವಾಡದ ಗಡಿ ಭಾಗಗಳಲ್ಲೂ ಮಳೆ ನಿರೀಕ್ಷಿಸಲಾಗಿದೆ.ಮುಂದಿನ ಮೂರು ದಿನಗಳ ಕಾಲ ಈ ಭಾಗಗಳಲ್ಲಿ ಉತ್ತಮ ಮಳೆ ಮುಂದುವರಿಯಲಿದ್ದು, ಕಂಗಾಲಾಗಿದ್ದ ಜನರಿಗೆ ಬಿಸಿಲಿನಿಂದ ದೊಡ್ಡ ಮಟ್ಟದ ಸಮಾಧಾನ ಸಿಗಲಿದೆ.

ದಕ್ಷಿಣ ಕನ್ನಡ,ಉಡುಪಿ,ಕಾಸರಗೋಡು ಭಾಗದಲ್ಲಿ ರಾತ್ರಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆ Read More »

ಕರ್ನಾಟಕದಲ್ಲಿ ಭಾರೀ ಗಾಳಿ ಮಳೆ ಮುನ್ಸೂಚನೆ,17 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಲರ್ಟ್ ಘೋಷಣೆ

ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು, ಸಿಡಿಲು ಹಾಗೂ 50 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಬಾಗಲಕೋಟೆ, ಬೆಳಗಾವಿ ಮತ್ತು ಗದಗ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಆರೆಂಜ್ ಅಲರ್ಟ್‌’ ಘೋಷಿಸಲಾಗಿದ್ದು, ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ ನೀಡಲಾಗಿದೆ. ಮೇ 2 ರವರೆಗೆ ಪೂರ್ವ ಮುಂಗಾರು ಮಳೆ ಮುಂದುವರಿಯಲಿದ್ದು, ಸಾರ್ವಜನಿಕರು ಹಾಗೂ ರೈತರು ಸಿಡಿಲಿನ ಸಂದರ್ಭದಲ್ಲಿ

ಕರ್ನಾಟಕದಲ್ಲಿ ಭಾರೀ ಗಾಳಿ ಮಳೆ ಮುನ್ಸೂಚನೆ,17 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಲರ್ಟ್ ಘೋಷಣೆ Read More »

ಭಾಗಮಂಡಲದ ಶ್ರೀ ಕಾವೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದಿವಾಕರ ಕುಂದಲ್ಪಾಡಿಯವರು ಸೇವೆಯಿಂದ ನಿವೃತ್ತಿ

ಭಾಗಮಂಡಲದ ಶ್ರೀ ಕಾವೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದಿವಾಕರ ಕುಂದಲ್ಪಾಡಿಯವರು ಸುಮಾರು 36 ವರ್ಷಗಳ ಕಾಲ ಸೇವೆ ಸಲ್ಲಿಸಿ (ಇಂದು)ಎ.30 ರಂದು ಸೇವೆಯಿಂದ ನಿವೃತ್ತರಾಗಿದ್ದಾರೆ.ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಪೆರಾಜೆ ಗ್ರಾಮದ  ಕುಂದಲ್ಪಾಡಿ ಜತ್ತಪ್ಪ ಹಾಗೂ   ಬೊಮ್ಮಕ್ಕರ ಸುಪುತ್ರರಾಗಿ ದಿನಾಂಕ 18-04-1966ರಂದು   ಜನಿಸಿದ್ದಾರೆ. ಕಿರಿಯ ಪ್ರಾಥಮಿಕ ಶಿಕ್ಷಣವನ್ನು ಪುತ್ಯ ಇಲ್ಲಿ ಮುಗಿಸಿ ಹಿರಿಯ ಪ್ರಾಥಮಿಕ ಶಿಕ್ಷಣವನ್ನು ಪಕ್ಕದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಬಳಚೇರಿ ಯಲ್ಲಿ ವ್ಯಾಸಂಗ ಮಾಡಿ ಪ್ರೌಢಶಾಲಾ ಶಿಕ್ಷಣವನ್ನು ಸಂಯುಕ್ತ ಪದವಿ

ಭಾಗಮಂಡಲದ ಶ್ರೀ ಕಾವೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದಿವಾಕರ ಕುಂದಲ್ಪಾಡಿಯವರು ಸೇವೆಯಿಂದ ನಿವೃತ್ತಿ Read More »

ಅರಂತೋಡು ಎಸ್.ಕೆ.ಎಸ್.ಬಿ.ವಿ ಯ ನೂತನ ಸಮಿತಿ ರಚನೆಅಧ್ಯಕ್ಷರಾಗಿ ಫರಾಝ್ ಮೊಟ್ಟೆಂಗಾರ್, ಪ್ರ. ಕಾರ್ಯದರ್ಶಿಯಾಗಿ ಹಫೀಝ್ ಆಯ್ಕೆ

ಸಮಸ್ತ ಕೇರಳ ಸುನ್ನಿ ಬಾಲವೇದಿ ಅರಂತೋಡು ಶಾಖಾ ಮಟ್ಟದ ವಾರ್ಷಿಕ ಮಹಾ ಸಭೆಯು ಎ.28 ರಂದು ಅರಂತೋಡು ನುಸ್ರತುಲ್ ಇಸ್ಲಾಂ ಮದರಸದಲ್ಲಿ ನಡೆಯಿತು. ಖತೀಬರಾದ ಬಹು| ಆಸಿಫ್ ಅಝ್ಹರಿ ದುವಾ ನೆರವೇರಿಸಿದರು.ಸದರ್ ರಪೂಫ್ ಅಝ್ಹರಿ ಕಾರ್ಯಕ್ರಮ ಉದ್ಘಾಟಿಸಿದರು. ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ಶುಭ ಹಾರೈಸಿದರು. ಕಾರ್ಯದರ್ಶಿ ಹಫೀಝ್ ಸ್ವಾಗತಿಸಿ ನವಾಝ್ ಲೆಕ್ಕ ಪತ್ರಗಳನ್ನು ಮಂಡಿಸಿದರು.ಸಭೆಯಲ್ಲಿ 2026-27 ನೇ ಸಾಲಿನ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಫರಾಝ್ ಮೊಟ್ಟೆಂಗಾರ್, ಪ್ರ.ಕಾರ್ಯದರ್ಶಿಯಾಗಿ ಹಫೀಝ್ ಕೊಡಂಕೇರಿ, ಕೋಶಾಧಿಕಾರಿಯಾಗಿ ರುಫೈಝ್, ಉಪಾಧ್ಯಕ್ಷರುಗಳಾಗಿ

ಅರಂತೋಡು ಎಸ್.ಕೆ.ಎಸ್.ಬಿ.ವಿ ಯ ನೂತನ ಸಮಿತಿ ರಚನೆಅಧ್ಯಕ್ಷರಾಗಿ ಫರಾಝ್ ಮೊಟ್ಟೆಂಗಾರ್, ಪ್ರ. ಕಾರ್ಯದರ್ಶಿಯಾಗಿ ಹಫೀಝ್ ಆಯ್ಕೆ Read More »

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆಂಬ್ಯುಲೆನ್ಸ್ ಚಾಲಕ ಹೃದಯ ಘಾತದಿಂದ ನಿಧನ

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯೂಲೆನ್ಸ್ ಚಾಲಕ ಮೃತಪಟ್ಟಿರುವುದಾಗಿ ವರದಿಯಾಗಿದೆ.ಅಂಬ್ಯುಲೆನ್ಸ್ ಚಾಲಕ ಮಾದವ (50 ವರ್ಷ ) ಎಂಬವರು ಮ್ರತಪಟ್ಟ ವ್ಯಕ್ತಿಯಾಗಿದ್ದಾರೆ.ಹೃದಯಾಘಾತದಿಂದ ಮೃತಪಟಿರುವುದಾಗಿ ಹೇಳಗಾಗುತ್ತಿದೆ. ಮೃತ ದೇಹವನ್ನು ಸುಳ್ಯ ತಾಲೂಕು ಆಸ್ಪತ್ರೆಯ ಮೋರ್ಚರಿಯಲ್ಲಿ ಇಡಲಾಗಿರುವುದಾಗಿ ತಿಳಿದು ಬಂದಿದೆ. ಮೃತರು ಕಾಣಿಯೂರಿನವರ ರಾಗಿದ್ದು ಕಳೆದ ಒಂದು ವರ್ಷಗಳ ಹಿಂದೆ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಗೊಂಡು ಬಂದಿದ್ದರು. ಮೃತರು ಪತ್ನಿ, ಮಕ್ಕಳು, ಕುಟುಂಬಸ್ಥರು, ಬಂಧುಗಳನ್ನು ಅಗಲಿದ್ದಾರೆ.

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆಂಬ್ಯುಲೆನ್ಸ್ ಚಾಲಕ ಹೃದಯ ಘಾತದಿಂದ ನಿಧನ Read More »

ರಾಜ್ಯದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ’ ಸಾಧ್ಯತೆಹವಾಮಾನ ಇಲಾಖೆ ಎಚ್ಚರಿಕೆ

ಭಾರತೀಯ ಹವಾಮಾನ ಇಲಾಖೆಯ (IMD) ವರದಿಯ ಪ್ರಕಾರ, ಏಪ್ರಿಲ್ 30 ಮತ್ತು ಮೇ 1 ರಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ, ವಿಶೇಷವಾಗಿ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು ಮತ್ತು ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಏಪ್ರಿಲ್ 29 ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ’ ಸಾಧ್ಯತೆಹವಾಮಾನ ಇಲಾಖೆ ಎಚ್ಚರಿಕೆ Read More »

error: Content is protected !!
Scroll to Top