Uncategorized

ವಿಷ ಸೇವಿಸಿದ ಜೋಡಿಯನ್ನು ಆಸ್ಪತ್ರೆಗೆ ದಾಖಲಿಸಿದ ಜನರು

ಯುವಕ ಮತ್ತು ಯುವತಿ ವಿಷ ಸೇವಿಸಿ ಒದ್ದಾಡುತ್ತಿದ್ದ ವೇಳೆ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ.ಯುವಕ ಮತ್ತು ಯುವತಿ ಮೂಲತಃ ಯಲಹಂಕದವರಾಗಿದ್ದು ಶ್ರೀಶಾ ಮತ್ತು ಪ್ರಜ್ವಲ ಎಂದು ಗುರುತಿಸಲಾಗಿದೆ.ನೆಲ್ಯಾಡಿ ಬಳಿ ವಿಷ ಸೇವಿಸಿ ಒದ್ದಾಡುತ್ತಿದ್ದ ಅವರನ್ನು ಗಮನಿಸಿದ ಸ್ಥಳೀಯರು ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ಕರೆತಂದಿದ್ದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ವಿಷ ಸೇವಿಸಿದ ಜೋಡಿಯನ್ನು ಆಸ್ಪತ್ರೆಗೆ ದಾಖಲಿಸಿದ ಜನರು Read More »

ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ

ದಕ್ಷಿಣ ಕನ್ನಡ,ಉಡುಪಿ, ಉತ್ತರ ಕನ್ನಡದಲ್ಲಿ ಸೋಮವಾರದಿಂದ ಜೂನ್ 29ರ ವರಗೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಉಳಿದಂತೆ ಇತರ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ.ಸೋಮವಾರ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಪ್ರತಿ ಗಂಟೆಗೆ 50 ಕಿ.ಮೀ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಗಳಿವೆ. ಇನ್ನು ಬಾಗಲಕೋಟೆ, ಕೊಪ್ಪಳ, ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಒಂದು ಅಥವಾ 2 ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆಗಳಿವೆ.ಬೆಂಗಳೂರಿನಲ್ಲಿ ಮೋಡ ಕವಿದ

ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ Read More »

ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ವಿಶ್ವ ಯೋಗದಿನಾಚರಣೆಯನ್ನು ಆಚರಣೆ

ಯೋಗ ಸಾಧಕರು ಮತ್ತು ಅಮರಮುಡ್ನೂರು ಗ್ರಾಮ ಪಂಚಾಯತ್ ಗ್ರಂಥಾಲಯ* *ಮೇಲ್ವಿಚಾರಕರು ಸಂತೋಷ್ ಮುಂಡಕಜೆ, ಯೋಗ ಸಾಧಕಿ ಪ್ರಶ್ವೀಜಾ ಸಂತೋಷ್* *ಮುಂಡಕಜೆಯವರು ದೀಪ ಪ್ರಜ್ವಲನೆಯೊಂದಿಗೆ ಉದ್ಘಾಟನೆ ಮಾಡಿದರು ಇವರ  ಸಾಧನೆಯ ಖುಷಿಗಾಗಿ ನಮ್ಮ  ಗ್ರಂಥಾಲಯದ ಎಲ್ಲಾ ಮಕ್ಕಳಿಂದ ಅವರನ್ನು ಗೌರವಿಸಲಾಯಿತು**ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನೂ ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿಕಣೆಮರಡ್ಕರವರು ಸ್ವಾಗತಿಸಿ, ಕೃತಜ್ಞತೆಸಲ್ಲಿಸಿದರು

ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ವಿಶ್ವ ಯೋಗದಿನಾಚರಣೆಯನ್ನು ಆಚರಣೆ Read More »

ಸಮಾಜ‌ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಯುವಕ ಸಾವು

ಪುತ್ತೂರು ಬನ್ನೂರು ಮೇಲ್ಮಜಲು ಚರ್ಚ್ ಬಳಿ ನಿವಾಸಿ ಅಣ್ಣಪ್ಪ (26 ವ.) ಜೂ.21 ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.ವಿಶೇಷ ವೇಷ ಧರಿಸಿ ಪುತ್ತೂರಿನ ಸೇವಾ ಸಂಸ್ಥೆ ಸಹಾಯಹಸ್ತ ಲೋಕಸೇವಾ ಟ್ರಸ್ಟಿನ ಮೂಲಕ ಹಲವಾರು ಬಡ ಕುಟುಂಬದ ಮಕ್ಕಳಿಗೆ ಮತ್ತು ಆರೋಗ್ಯದ ಸಮಸ್ಯೆ ಇರುವಂತಹ ವ್ಯಕ್ತಿಗಳಿಗೆ ಸಹಾಯ ಮಾಡುತ್ತಿದ್ದರು. ಕಲಾಸಿರಿ ಗೊಂಬೆ ಬಳಗ (ರಿ) ಪುತ್ತೂರು ಸಂಸ್ಥೆಯನ್ನು ಪ್ರಾರಂಭಿಸಿ, ಜಾತ್ರೆ ಮತ್ತೀತರ ಕಾರ್ಯಕ್ರಗಳಲ್ಲಿ ವಿವಿಧ ರೀತಿಯ ವೇಷ ಹಾಕಿ ಅದರಲ್ಲಿ ಬಂದಂತಹ ಹಣವನ್ನು ಒಟ್ಟು ಮಾಡಿ ಸಹಾಯ ಮಾಡುತ್ತಿದ್ದರು.

ಸಮಾಜ‌ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಯುವಕ ಸಾವು Read More »

ಅಜ್ಜಾವರ : ವಿಶ್ವ ಯೋಗ ದಿನಾಚರಣೆ

ಸರಕಾರಿ ಪ್ರೌಢಶಾಲೆ ಅಜ್ಜಾವರ ದಲ್ಲಿ ವಿಶ್ವ ಯೋಗ ದಿನಾಚರಣೆ, ವನಮಹೋತ್ಸವ ಹಾಗೂ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ನಡೆಯಿತು. ಹೊಸದಾಗಿ ಶಾಲೆಗೆ ದಾಖಲಾತಿಯಾದ ವಿದ್ಯಾರ್ಥಿಗಳನ್ನು ಹೂಗುಚ್ಚ ನೀಡಿ ಸ್ವಾಗತಿಸಲಾಯಿತು.ಈ ಸಂದರ್ಭದಲ್ಲಿ ಇಕೋ ಕ್ಲಬ್ ವತಿಯಿಂದ ವನಮಹೋತ್ಸವ ಆಚರಿಸಲಾಯಿತು. ಉಪ ವಲಯ ಅರಣ್ಯಾಧಿಕಾರಿ ಶ್ರೀ ಸಂದೀಪ್ ಅವರು ಗಿಡ ನೆಡುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.ಈ ಸಂದರ್ಭದಲ್ಲಿ ಸುಂದರ ಭಾರತ್ ಟ್ರಸ್ಟ್ ವತಿಯಿಂದ ನೀಡಿದ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.ಶಾಲಾ ಮುಖ್ಯ್ಯೋಪಾಧ್ಯಯರಾದ ಗೋಪಿನಾಥ್ ಮೆತ್ತಡ್ಕ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿ

ಅಜ್ಜಾವರ : ವಿಶ್ವ ಯೋಗ ದಿನಾಚರಣೆ Read More »

ನಗರ ಪಂಚಾಯತ್ ಸದಸ್ಯ ದಿಡೀರ್ ಸಾವು

ಪುತ್ತೂರು ಬಿಜೆಪಿ ಹಾಗೂ ಪುತ್ತೂರು ನಗರಸಭೆ ಮತ್ತೋರ್ವ ನಿಧನರಾಗಿದ್ದಾರೆ.ಇತ್ತೀಚೆಗಷ್ಟೇ ನಗರಸಭಾ ಸದಸ್ಯ ರಮೇಶ್ ರೈ ಮೃತಪಟ್ಟ ಬೆನ್ನಲ್ಲೇ ಇದೀಗ ನಗರಸಭೆ ಸದಸ್ಯ ಶೀನಪ್ಪ ನಾಯ್ಕ ಅವರು ನಿಧನರಾಗಿದ್ದಾರೆ.ಮುಕ್ರಂಪಾಡಿ ಸಮೂಪದ ಆನಂದಾಶ್ರಮ ಸಮೀಪದ ನಿವಾಸಿ ಶೀನಪ್ಪ ನಾಯ್ಕ ಅವರು ಅನಾರೋಗ್ಯದಿಂದ ಶನಿವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಕಳೆದ ಅರು ತಿಂಗಳು ಅನಾರೋಗ್ಯದಿಂದ ಬಳಲುತ್ತಿದ್ದರು. ಬಳಿಕ ಅವರು ನಗರಸಭೆ ಸದಸ್ಯರಾಗಿ ಕೆಲಸಕ್ಕೆ ಮರಳಿದ್ದರು. ಇದೀಗ ಅವರು ಮತ್ತೆ ಅನಾರೋಗ್ಯಕ್ಕೆ ತುತ್ತಾಗಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ

ನಗರ ಪಂಚಾಯತ್ ಸದಸ್ಯ ದಿಡೀರ್ ಸಾವು Read More »

ಯೋಗ ಶಾರೀರಿಕ ,ಮಾನಸಿಕ ಸದೃಡತೆಯ ಕೊಂಡಿ : ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ

ಯೋಗದಿಂದ ಶಾರೀರಿಕ, ಮಾನಸಿಕತೆ ಸದೃಡತೆಗೊಳ್ಳುತ್ತದೆ. ಇದು ಮನುಷ್ಯನ ಶಾರೀರಿಕ ಮತ್ತು ಮಾನಸಿಕತೆ ಕೊಂಡಿಯಾಗಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ರಾಜ್ಯ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯ ಅಧ್ಯಕ್ಷ ಹಾಗೂ ಪಯಸ್ವಿನಿ ಪ್ರೌಢಶಾಲಾ ಸಂಚಾಲಕ ಸದಾನಂದ ಮಾವಜಿ ಹೇಳಿದರು.ಅವರು ಸುಳ್ಯ ಕೆ. ವಿ ಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ, ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಇದರ ಸಹಯೋಗದಲ್ಲಿ ಪಯಸ್ವಿನಿ ಪ್ರೌಢಶಾಲೆಯಲ್ಲಿ ನಡೆದ 11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ದೀಪಬೆಳಗಿಸಿ ಉದ್ಘಾಟಿಸಿ, ಮಾತನಾಡಿದರು.ಆಯುರ್ವೇದ ಕಾಲೇಜಿನ ವೈದ್ಯೆ ಡಾ.

ಯೋಗ ಶಾರೀರಿಕ ,ಮಾನಸಿಕ ಸದೃಡತೆಯ ಕೊಂಡಿ : ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ Read More »

ಲಾರಿಗೆ ಬೆಂಕಿ ಹತ್ತಿಕೊಂಡು ಸುಟ್ಟು ಹೋದ ಟಯರ್

ಭತ್ತ ಸಾಗಿಸುತ್ರಿದ್ದ ಲಾರಿಯೊಂದಕ್ಕೆ ಬೆಂಕಿ ಹತ್ರಿಕೊಂಡ ಘಟನೆ ಶನಿವಾರ ಸಂಪಾಜೆ ಸಮೀಪದ ದೇವರಕೊಲ್ಲಿಯಿಂದ ವರದಿಯಾಗಿದೆ.ಮಡಿಕೇರಿ‌ ಕಡೆಯಿಂದ ಕಾರ್ಕಳಕ್ಕೆ ಲಾರಿಯಲ್ಲಿ ಭತ್ತ ಸಾಗಿಸಲಾಗುತ್ತಿತ್ತು.ಲಾರಿಯ ಒಂದು ಟಯರ್ ಸಂಪೂರ್ಣ ಸುಟ್ಟು ಹೋಗಿದೆ.ಲೈನರ್ ಬಿಸಿಯಾಗಿ ಬೆಂಕಿ ಹತ್ತಿಕೊಂಡಿರಬೇಕೆಂದು ಅಂದಾಜಿಸಲಾಗಿದೆ.

ಲಾರಿಗೆ ಬೆಂಕಿ ಹತ್ತಿಕೊಂಡು ಸುಟ್ಟು ಹೋದ ಟಯರ್ Read More »

ಸುಳ್ಯ : ಕಲ್ಕುಡ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಕಾರ್ಯಕ್ರಮ

ಸುಳ್ಯ ನಾವೂರು ಶ್ರೀ ಕಲ್ಕುಡ ದೈವಸ್ಥಾನದದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಜೂ.20ರಂದು ನಡೆಯಿತು‌.ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿ ಪಿ.ಕೆ ಉಮೇಶ,ಧರ್ಮದರ್ಶಿಗಳಾದ ಬಿ. ಭಾಸ್ಕರ ಐಡಿಯಲ್ ,ಕೆ. ಪ್ರಕಾಶ್ ಹೆಗ್ಡೆಪಿ.ಆರ್. ಚಂದ್ರಶೇಖರ ಕೆ. ಸೋಮನಾಥ ಪೂಜಾರಿ ಹರೀಶ್ ಬೂಡುಪನ್ನೆ ಕೇಶವ ನಾಯಕ್ಸತ್ಯಪ್ರಸಾದ್ ಕೆ. ದೈವಸ್ಥಾನದ ಪೂಜಾರಿಗಳಾದ,ತಿಮ್ಮಪ್ಪ ಗೌಡ ನಾವೂರು ಮೋನಪ್ಪ ಹಾಗೂ ಭಕ್ತರು ಉಪಸ್ಥಿತರಿದ್ದರು.

ಸುಳ್ಯ : ಕಲ್ಕುಡ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಕಾರ್ಯಕ್ರಮ Read More »

ಮೇದಿನಡ್ಕ : ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ

ಅರಣ್ಯ ಇಲಾಖೆ ಸುಳ್ಯ ವಲಯ ಇದರ ಸಹಯೋಗದೊಂದಿಗೆ ಚೈತ್ರ ಯುವತಿ ಮಂಡಲ(ರಿ)ಅಜ್ಜಾವರ ಪ್ರತಾಪ ಯುವಕ ಮಂಡಲ (ರಿ)ಅಜ್ಜಾವರ,ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಕರ್ಲಪ್ಪಾಡಿ, ಅರಿವು ಕೇಂದ್ರ ಅಜ್ಜಾವರ, ಸ. ಹಿ. ಪ್ರಾ ಶಾಲೆ ಅಡ್ಪoಗಾಯ ಇವುಗಳ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಅಂಗವಾಗಿ ಮೇದಿನಡ್ಕ ಅರಣ್ಯದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಗಸ್ತು ಅರಣ್ಯ ಪಾಲಕರಾದ ಗೀತಾ ಬಿ, ದೀಪಕ್ ಕೆ.ಎಸ್, ಭಾಗ್ಯ ಪಿ.ಸಿ, ಅರಣ್ಯ ವೀಕ್ಷಕರಾದ ಶ್ರೀಧರ್, ಭವಿತ್, ಮಾಯಿಲಪ್ಪ ಹಾಗೂ

ಮೇದಿನಡ್ಕ : ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ Read More »

error: Content is protected !!
Scroll to Top