ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ರೂಡಿಸಿಕೊಂಡು ವ್ಯಕ್ತಿತ್ವ ವಿಕಾಸನ ಮಾಡಿಕೊಳ್ಳಬೇಕು : ಬಿ.ಇ.ಒ ಕೃಷ್ಣಪ್ಪ
ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ರೂಡಿಸಿಕೊಂಡು ವ್ಯಕ್ತಿತ್ವ ವಿಕಾಸನ ಮಾಡಿಕೊಳ್ಳಬೇಕು ಎಂದು ಬಿ.ಇ.ಒ ಕೃಷ್ಣಪ್ಪ ಹೇಳಿದರು.ಅವರು ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ಬಡ ವಿದ್ಯಾರ್ಥಿಗಳಿಗೆ ಚೈತನ್ಯ ಸೇವಾಶ್ರಮದ ವತಿಯಿಂದ ಲೇಖನ ಸಾಮಾಗ್ರಿ ವಿತರಣೆ,ಹಾಗೂ ಸೇವಾಶ್ರಮದ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ 222ನೇ ಕ್ರತಿ ಸತ್ಸಂಗದಿಂದ ಸಜ್ಜನನಾಗುವೆ ಬಿಡುಗಡೆಗೊಳಿಸಿ ಮಾತನಾಡಿದರು.ಆಶ್ರಮದ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ ಪುಸ್ತಕ ಬಿಡುಗಡೆಗೊಳಿಸಿ ವಿದ್ಯಾರ್ಥಿಗಳಿಗೆ ಲೇಖನ ಸಾಮಾಗ್ರಿ ವಿತರಿಸಿ ಮಾತನಾಡಿದರು.ಸ್ವಾಮೀಜಿಯವರು ಪುಸ್ತಕ ಬರೆದು ಉಚಿತವಾಗಿ ವಿತರಿಸುತ್ತಿರುವುದು ಶ್ರೇಷ್ಠ ಕಾರ್ಯ.ಈ ಪುಸ್ತಕವನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಿ […]










