ಅರೆಭಾಷೆ ಅಕಾಡೆಮಿಯ ವಿನೂತನ ಕಾರ್ಯಾಗಾರ ಕಥೆ ಬರೆಮೊ ಬನ್ನಿ…ಸುಳ್ಯದಲ್ಲಿ ಅರೆಭಾಷೆ ಕಥೆ ಬರೆಮೋ ಕಾರ್ಯಕ್ರಮಕ್ಕೆ ಚಾಲನೆ
ಮಕ್ಕಳಲ್ಲಿ ಕಥೆ ಬರೆಯುವ ಹವ್ಯಾಸವನ್ನು ಬೆಳೆಸಿದರೆ ಮುಂದೆ ಉತ್ತಮ ಕಥೆಗಾರರಾಗಿ ಭಾಷೆಯ ದೊಡ್ಡ ಆಸ್ತಿ ಆಗಲಿದ್ದಾರೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಾಜಿ ಅಭಿಪ್ರಾಯ ವ್ಯಕ್ತಪಡಿಸಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ನಗರದ ಕನ್ನಡ ಭವನದಲ್ಲಿ ಅರೆಭಾಷೆ ಕತೆ ಬರೆಮೊ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕತೆ ಎಂಬುದು ಎಲ್ಲರ ಜೀವನದಲ್ಲೂ ಇರುತ್ತದೆ ಅದನ್ನು ವ್ಯವಸ್ಥಿತವಾಗಿ ಅಕ್ಷರ ರೂಪಕ್ಕೆ ಇಳಿಸಲು ಪ್ರೇರೇಪಿಸುವುದಕ್ಕಾಗಿ ಈ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದರು. […]










