Uncategorized

ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ,ಕೊರಗಜ್ಜ ದೈವದ ಹರಕೆ ಕೋಲ

ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಭಾರಿಗೆ ದೇಶದ ಪ್ರಧಾನಿಯಾಗಬೇಕೆಂದು ಜಯನಗರ ಬೂತ್ ಸಮಿತಿಯವರು ಹರಕೆ ಹೇಳಿಕೊಂಡ ಪ್ರಕಾರ ಇಂದು ಕೊರಗಜ್ಜ ದೈವದ ನೇಮೋತ್ಸವ ನಡೆಯಿತು.ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ‌ ಅಧ್ಯಕ್ಷ ಬಿ.ವೈ ವಿಜಯೇಂದ್ರ,ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಭಾಗೀರಥಿ ಮುರುಳ್ಯ, ಹರೀಶ್ ಪೂಂಜ, ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಸಚಿವ ಎಸ್.ಅಂಗಾರ ಸಹಿತ ಹಲವು ಗಣ್ಯರು ಈ ಸಂದರ್ಭದಲ್ಲಿದ್ದು ಪ್ರಸಾದ ಸ್ವೀಕರಿಸಿದರು.ದೈವಸ್ಥಾನದ ಪ್ರಮುಖರಾದ ಕೇಶವ ಮಾಸ್ತರ್ ಹೊಸಗದ್ದೆ, ಜಿ.ಜಗನ್ನಾಥ ಜಯನಗರ, ನಗರ ಬಿಜೆಪಿ ಅಧ್ಯಕ್ಷ ಎ.ಟಿ. […]

ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ,ಕೊರಗಜ್ಜ ದೈವದ ಹರಕೆ ಕೋಲ Read More »

ಆರತಕ್ಷತೆ ಊಟ ಸೇವಿಸಿದ ಮಹಿಳೆ ಸಾವು,ಹಲವರು ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದಲ್ಲಿ ಮೇ.12 ರಂದು ನಡೆದ ಆರತಕ್ಷತೆ ಊಟ ಮಾಡಿದ ಬಹುತೇಕ ಮಂದಿಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು 60 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೇ.16 ರಂದು ಮೃತಪಟ್ಟಿದ್ದಾರೆ.ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ 5 ಮಂದಿಯ ಪೈಕಿ ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮದುವೆ ಸಮಾರಂಭಕ್ಕೆ ಆಗಮಿಸಿ ಊಟ ಮಾಡಿದ ವ್ಯಕ್ತಿಗಳಲ್ಲಿ ಹಲವರಿಗೆ ವಾಂತಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದು ಅವರೆಲ್ಲರೂ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ ಎನ್ನಲಾಗಿದೆ.

ಆರತಕ್ಷತೆ ಊಟ ಸೇವಿಸಿದ ಮಹಿಳೆ ಸಾವು,ಹಲವರು ಆಸ್ಪತ್ರೆಗೆ ದಾಖಲು Read More »

ಲಾರಿಗಳ ನಡುವೆ ಅಪಘಾತ ಸಂಭವಿಸಿ ಚಾಲಕ ಸಾವು

ಬಂಟ್ವಾಳ; ಎರಡು ಲಾರಿಗಳ ನಡುವೆ ನಡೆದ ಅಪಘಾತ ಸಂಭವಿಸಿ ಬಿಸಿ ಜಲ್ಲಿ ಮಿಶ್ರಿತ ಡಾಂಬಾರು ಬಿದ್ದು ಲಾರಿ ಚಾಲಕ ಸಾವನ್ನಪ್ಪಿರುವ ಘಟನೆ ಬಂಟ್ವಾಳ ತಾಲೂಕಿನ ಸಜಿಪನಾಡು ಬಳಿ ನಡೆದಿದೆ.ಸಜೀಪನಡು ಗೋಳಿಪಡ್ಡು ನಿವಾಸಿ ರಫೀಕ್ ( 45) ಮೃತ ವ್ಯಕ್ತಿ. ಲಾರಿಯಲ್ಲಿದ್ದ ಕ್ಲೀನ‌ರ್ ಯೂಸುಫ್ ಎಂಬಾತನ ಕೈ ಕಾಲುಗಳ ಮೇಲೆ ಡಾಂಬಾರು ಬಿದ್ದಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೊಂದು ಲಾರಿಯ ಚಾಲಕ ರಿಜ್ವಾನ್ ಹಾಗೂ ಅಲ್ಪಾಸ್ ಎಂಬವರಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಂಚಿನಡ್ಕಪದವು ಎಂಬಲ್ಲಿ ಈ ಅಪಘಾತ

ಲಾರಿಗಳ ನಡುವೆ ಅಪಘಾತ ಸಂಭವಿಸಿ ಚಾಲಕ ಸಾವು Read More »

ವಿದ್ಯಾ ಹರೀಶ್ ಬಂಗಾರಕೋಡಿಯವರು ಹಿರಿಯರ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಾಂಪಿಯನ್

ವಿದ್ಯಾ ಹರೀಶ್ ಬಂಗಾರಕೋಡಿಯವರು ಹಿರಿಯರ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.ವಿದ್ಯಾ ಹರೀಶ್‌ರವರು ೪೪ನೇ ನ್ಯಾಷನಲ್ ಗೇಮ್ ಮೈಸೂರು ಚಾಂಪಿಯನ್‌, ೪೫ನೇ ಫೆಡರೇಶನ್ ಆಫ್ ಇಂಡಿಯಾ ನ್ಯಾಷನಲ್ ಗಮ್ಸ್ ಚಾಂಪಿಯನ್‌, ೪ನೇ ಖೇಲೋ ಮಾಸ್ಟರ್ ನ್ಯಾಷನಲ್ ಗೇಮ್ಸ್ ಹೊಸ ದಿಲ್ಲಿ ಚಾಂಪಿಯನ್ ತಮಿಳುನಾಡು, ಬೆಂಗಳೂರು, ಮುಂಬೈ, ಮಹಾರಾಷ್ಟ್ರ, ಗುಜರಾತ್, ತಮಿಳುನಾಡು ಸೇಲಂ, ಮಂಗಳೂರು, ತಮಿಳುನಾಡು ಈರೋಡು ಸೇಲಂ, ಗುಜರಾತಿನ ಸೂರತ್ ಮಹಾರಾಷ್ಟ್ರದ ಪುಣೆ, ಅಹಮದಾಬಾದ್ ಈಬಳ್ಳಾರಿ, ವಿಜಯಪುರ , ಕರ್ಣಾಟದ ಹಲವು ರಾಜ್ಯಗಳಲ್ಲಿ ೧೦ ಕಿ.ಮೀ ನಲ್ಲಿ

ವಿದ್ಯಾ ಹರೀಶ್ ಬಂಗಾರಕೋಡಿಯವರು ಹಿರಿಯರ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಾಂಪಿಯನ್ Read More »

ಮುಂದಿನ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳ ಹಾಜರಾತಿಗೆ ಹೊಸ ಆ್ಯಪ್

ಮುಂದಿನ ಶೈಕ್ಷಣಿಕ ವರ್ಷದಿಂದ ಆನ್‌ಲೈನ್ ಹಾಜರಾತಿ ದಾಖಲಿಸಲು ಹೊಸ ಆ್ಯಪ್ ಅನ್ನು ಶಿಕ್ಷಣ ಇಲಾಖೆ ಅಭಿವೃದ್ಧಿಪಡಿಸಿದೆ. ಮುಖ್ಯಮಂತ್ರಿಗಳು ಮತ್ತು ಶಿಕ್ಷಣ ಮಂತ್ರಿಗಳು ಇದನ್ನು ಲೋಕಾರ್ಪಣೆ ಮಾಡಲಿದ್ದಾರೆ. ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಿಸುವಾಗ ಶಿಕ್ಷಣ ಸಚಿವರು ಇದರ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿರುವರು ಎಂದು ಕಲಬುರಗಿ ಶಾಲಾ ಶಿಕ್ಷಣ ಇಲಾಖೆ ಅಪರ ಆಯುಕ್ತ ಡಾ. ಅಕಾಶ್ ಎಸ್. ಹೇಳುತ್ತಾರೆ. ಆ್ಯಪ್ ಆಧಾರಿತ ಶಿಕ್ಷಕರ ಹಾಜರಾತಿ ಸಿಕ್ಕಿಂನಲ್ಲಿ ಇದು ಜಾರಿಯಲ್ಲಿದ್ದು, ಯಶಸ್ವಿಯೂ ಆಗಿದೆ. ಪ್ರಧಾನಿಗಳು ಇದಕ್ಕೆ ಪ್ರಶಸ್ತಿಯೂ ನೀಡಿದ್ದಾರೆ. ಎಲ್ಲ ಶಿಕ್ಷಕರು ಸ್ಮಾರ್ಟ್

ಮುಂದಿನ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳ ಹಾಜರಾತಿಗೆ ಹೊಸ ಆ್ಯಪ್ Read More »

ಬಾ‌ರ್ & ರೆಸ್ಟೋರೆಂಟ್‌ ಸಿಬ್ಬಂದಿ ಆತ್ಮಹತ್ಯೆಗೆ ಶರಣು

ಬಾ‌ರ್ & ರೆಸ್ಟೋರೆಂಟ್‌ವೊಂದರ ಸಿಬ್ಬಂದಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪುತ್ತೂರಿನ ಪೂರ್ಲಿಪ್ಪಾಡಿ ಎಂಬಲ್ಲಿ ಇಂದು ನಡೆದಿದೆ.ಪೂರ್ಲಿಪ್ಪಾಡಿ ನಿವಾಸಿ ಪದ್ಮನಾಭ(42) ಮೃತ ವ್ಯಕ್ತಿ. ಪದ್ಮನಾಭಅವರು ಪುತ್ತೂರು ಪಡೀಲ್‌ನಲ್ಲಿರುವ ಬಾರ್ & ರೆಸ್ಟೋರೆಂಟ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಪದ್ಮನಾಭ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಬಂಟ್ವಾಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬಾ‌ರ್ & ರೆಸ್ಟೋರೆಂಟ್‌ ಸಿಬ್ಬಂದಿ ಆತ್ಮಹತ್ಯೆಗೆ ಶರಣು Read More »

ಹಿಂದೂ ಎಂಬ ಕಾರಣಕ್ಕೆ ಮತಾಂಧರ ಒತ್ತಾಯಕ್ಕೆ ಮಣಿದು ಸರಕಾರ ಮತ್ತು ಇಲಾಖೆ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಮ್ಮನ್ನು ಕಡೆಗಣಿಸಿರುವುದು ಮನಸ್ಸಿಗೆ ತುಂಬಾ ದುಃಖ ತಂದಿದೆ

ಹುಟ್ಟು ಕಾಂಗ್ರೇಸಿಗರಾದರೂ ಹಿಂದೂ ಎಂಬ ಕಾರಣಕ್ಕೆ ಮತಾಂಧರ ಒತ್ತಾಯಕ್ಕೆ ಮಣಿದು ಸರಕಾರ ಮತ್ತು ಇಲಾಖೆ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಮ್ಮನ್ನು ಕಡೆಗಣಿಸಿರುವುದು ಮನಸ್ಸಿಗೆ ತುಂಬಾ ದುಃಖ ತಂದಿದೆ. ಆಡಳಿತ ವ್ಯವಸ್ಥೆಯ ಈ ನಡೆ ಸಮಸ್ತ ಹಿಂದೂಗಳನ್ನು ಆತ್ಮಾವಲೋಕನ ಮಾಡುವಂತೆ ಮಾಡಿದೆ ಎಂದು ಹತ್ಯೆಗೀಡಾದ ಸುಹಾಸ್ ಶೆಟ್ಟಿಯ ಮಾವ ರಾಜೇಶ್ ಶೆಟ್ಟಿ ಹೇಳಿದರು. ಅವರು ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ವಠಾರದಲ್ಲಿ ಇಂದು ಆಯೋಜಿಸಲಾಗಿದ್ದ ಶ್ರದ್ದಾಂಜಲಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಹಿಂದೂ ಎಂಬ ಕಾರಣಕ್ಕೆ ಮತಾಂಧರ ಒತ್ತಾಯಕ್ಕೆ ಮಣಿದು ಸರಕಾರ ಮತ್ತು ಇಲಾಖೆ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಮ್ಮನ್ನು ಕಡೆಗಣಿಸಿರುವುದು ಮನಸ್ಸಿಗೆ ತುಂಬಾ ದುಃಖ ತಂದಿದೆ Read More »

ನರೇಂದ್ರ ಮೋದಿಯವರ ಮನೆ ಮೇಲೆ ಬಾಂಬು ದಾಳಿ ನಡೆಸಬೇಕೆಂದು ಹೇಳಿಕೆ ನೀಡಿದ ಆರೋಪಿಯ ಬಂಧನ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಮನೆಯಮೇಲೆ ಮೊದಲು ಬಾಂಬ್ ದಾಳಿ ನಡೆಸಬೇಕು ಎಂದು ಹೇಳಿಕೆ ನೀಡಿದ್ದ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಯುವಕನನ್ನು ಬೆಂಗಳೂರಿನಲ್ಲಿ ಬಂಡೇಪಾಳ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಸುಭಾಷ್‌ನಗರ ನಿವಾಸಿ ನವಾಜ್ (26) ಬಂಧಿತ ಆರೋಪಿ.ಬಳಿಕ ಆರೋಪಿಯನ್ನು ನ್ಯಾಯಾಧೀಶರ ಎದುರು ಹಾಜರು ಪಡಿಸಲಾಯಿತು.ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಭಾರತ ಮತ್ತು ಪಾಕ್ ಮಧ್ಯೆ ಯುದ್ಧ ನಡೆಯುತ್ತಿದೆ. ಜನರೆಲ್ಲ ನೆಮ್ಮದಿಯಿಂದ ಇರುವಾಗ ಈ ಪರಿಸ್ಥಿತಿ ಸೃಷ್ಟಿಸಿದ್ದು ಮೋದಿ. ಮೊದಲು ಮೋದಿ ಮನೆಯ ಮೇಲೆ ಬಾಂಬ್ ಹಾಕಬೇಕು; ಆದರೆ

ನರೇಂದ್ರ ಮೋದಿಯವರ ಮನೆ ಮೇಲೆ ಬಾಂಬು ದಾಳಿ ನಡೆಸಬೇಕೆಂದು ಹೇಳಿಕೆ ನೀಡಿದ ಆರೋಪಿಯ ಬಂಧನ Read More »

ಮೇ.18 ರಂದು ಕೇಶವ ಕೃಪಾ ವೇದ ಯೋಗ ಕಲಾ ಶಿಬಿರದ ಸಮಾಪನಾ ಸಮಾರಂಭ ಮತ್ತು ಕೇಶವಸ್ಮೃತಿ ಪ್ರಶಸ್ತಿ ಪ್ರದಾನ ಸಮಾರಂಭ

ಮೇ.18 ರಂದು ಕೇಶವ ಕೃಪಾ ವೇದ ಯೋಗ ಕಲಾ ಶಿಬಿರದ ಸಮಾಪನಾ ಸಮಾರಂಭ ಮತ್ತು ಕೇಶವಸ್ಮೃತಿ ಪ್ರಶಸ್ತಿ ಪ್ರದಾನ ಸಮಾರಂಭ ಸುಳ್ಯದ ಶಿವಕೃಪಾ ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ಶ್ರೀ ಕೇಶವ ಕೃಪಾ ವೇದ ಕಲಾ ಪ್ರತಿಷ್ಠಾನ ಅಧ್ಯಕ್ಷ ವೇದ ಮೂರ್ತಿ ಪುರೋಹಿತ ನಾಗರಾಜ್ ಭಟ್ ತಿಳಿಸಿದ್ದಾರೆ.ಅವರು ಮೇ.13ರಂದು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.ಶ್ರೀ ಕೇಶವ ಕೃಪಾ ವೇದ-ಯೋಗ – ಕಲಾ ಶಿಬಿರವು ರಜತ ಸಂಭ್ರಮದಲ್ಲಿದ್ದು, ಸಾರ್ಥಕ 25 ವರ್ಷಗಳನ್ನು ಪೂರೈಸಿದೆ ಏ.

ಮೇ.18 ರಂದು ಕೇಶವ ಕೃಪಾ ವೇದ ಯೋಗ ಕಲಾ ಶಿಬಿರದ ಸಮಾಪನಾ ಸಮಾರಂಭ ಮತ್ತು ಕೇಶವಸ್ಮೃತಿ ಪ್ರಶಸ್ತಿ ಪ್ರದಾನ ಸಮಾರಂಭ Read More »

ಹಣದ ಸಮಸ್ಯೆ ನಿದ್ರೆ ಮಾತ್ರೆ ಸೇವಿಸಿದ ತಾಯಿ ಮಗ,ತಾಯಿ ಸಾವು ಮಗ ಗಂಭೀರ

ತೀರಾ ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ಜೀವನದಲ್ಲಿ ಜಿಗುಪ್ಪೆ ಹೊಂದಿ ಅತಿಯಾದ ನಿದ್ದೆ ಮಾತ್ರೆ ಸೇವಿಸಿದ್ದ ವೃದ್ದೆ ತಾಯಿ ಕೊನೆಯುಸಿರೆಳೆದಿದ್ದು, ಮಗನ ಸ್ಥಿತಿ ಗಂಭೀರವಾಗಿದೆ.ಮೃತರು ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ದಿ. ಕುಂಞರಾಮನ್ ನಾಯರ್ ಅವರ ಪುತ್ನಿ ಕಲ್ಯಾಣಿ(96) ಎಂಬವರಾಗಿದ್ದಾರೆ. ಅವರ ಪುತ್ರ, ಖ್ಯಾತ ಜನಪದ ಕಲಾವಿದ, ಶಿಕ್ಷಕ ಜಯರಾಂ ಕೆ (58) ಅವರು ಗಂಭೀರಾವಸ್ಥೆಯಲ್ಲಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಹಾಕ್ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ.ಕಲ್ಯಾಣಿ ಮತ್ತು ಜಯರಾಂ ಕೆ ಅವರು

ಹಣದ ಸಮಸ್ಯೆ ನಿದ್ರೆ ಮಾತ್ರೆ ಸೇವಿಸಿದ ತಾಯಿ ಮಗ,ತಾಯಿ ಸಾವು ಮಗ ಗಂಭೀರ Read More »

error: Content is protected !!
Scroll to Top