Uncategorized

ಬಿಜೆಪಿ ಕಾರ್ತಕರ್ತನ ಬರ್ಬರ ಹತ್ಯೆ

ದುಷ್ಕರ್ಮಿಗಳು ಬಿಜೆಪಿ ಕಾರ್ಯಕರ್ತನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ಕೂಚ್‌ಬೆಹರ್ ಪ್ರದೇಶದ ಚುನಾವಣಾRX ಕೇಂದ್ರದ ಬಾಗಿಲಲ್ಲೇ ಆತನಿಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಇಂದಿನಿಂದ ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆ ಆರಂಭಗೊಂಡಿದ್ದು, ಹಿಂಸಾಚಾರವೂ ಸಹ ಆರಂಭಗೊಂಡಿದೆ. ಮೃತನನ್ನು ಬಿಜೆಪಿ ಪೋಲಿಂಗ್ ಏಜೆಂಟ್ ಮದ್ದಾಬ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಆತನ ತಲೆಗೆ ಗುಂಡು ಹಾರಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.ಸದ್ಯ ಈ ಪ್ರದೇಶದಲ್ಲಿ ಮತದಾನ ರದ್ದುಗೊಂಡಿದೆ

ಬಿಜೆಪಿ ಕಾರ್ತಕರ್ತನ ಬರ್ಬರ ಹತ್ಯೆ Read More »

ಬುರ್ಖಾ ತೊಟ್ಟು ಉಚಿತ ಪ್ರಯಾಣ: ಬಸ್ಸು ನಿಲ್ದಾಣದಲ್ಲಿ ಕುಳಿತಿದ್ದ ವ್ಯಕ್ತಿ ಪೊಲೀಸ್ ವಶ

ಸರ್ಕಾರದ ಯೋಜನೆಗಳನ್ನು ಪಡೆಯಲು ಜನರು ನಕಲಿ ಆಧಾರ್, ವೋಟರ್ ಐಡಿ ಸೇರಿದಂತೆ ಅನೇಕ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಸಿಕ್ಕಿಬಿದ್ದ ಸಾಕಷ್ಟು ನಿದರ್ಶನಗಳಿವೆ. ಅಂತಹುದೇ ಮತ್ತೊಂದು ಪ್ರಸಂಗ ಸಂಶಿಯಲ್ಲಿ ನಡೆದಿದೆ.ಸಂಶಿಯ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಗುರುವಾರ ಬುರ್ಖಾ ತೊಟ್ಟು ಕುಳಿತಿದ್ದ ವ್ಯಕ್ತಿಯನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಮಾಡಿರುವ ತಂತ್ರ ಎಂದು ಅನುಮಾನಿಸಿ ಹಿಡಿದಿದ್ದಾರೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬುರ್ಖಾ ತೊಟ್ಟು ಉಚಿತ ಪ್ರಯಾಣ: ಬಸ್ಸು ನಿಲ್ದಾಣದಲ್ಲಿ ಕುಳಿತಿದ್ದ ವ್ಯಕ್ತಿ ಪೊಲೀಸ್ ವಶ Read More »

ಗುಡ್ಡ ಮನೆಗೆ ಕುಸಿದು ಬಿದ್ದು ಮಹಿಳೆ ಸಾವು

ಬಂಟ್ವಾಳ: ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರ ಗುಂಪುಮನೆಯಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದು, ಮನೆಯೊಳಗೆ ಸಿಲುಕಿ ಹಾಕಿಕೊಂಡಿದ್ದ ಇಬ್ಬರು ಮಹಿಳೆಯರ ಪೈಕಿ ಓರ್ವ ಮಹಿಳೆ ಮೃತಪಟ್ಟು ಇನ್ನೊಬ್ಬರು ಮಹಿಳೆಯನ್ನು ಅಪಾಯದಿಂದ ಪಾರಾದ ಘಟನೆ ವರದಿಯಾಗಿದೆ.ಮಣ್ಣಿನೊಳಗಿದ್ದ ಮಹಿಳೆಯನ್ನು ರಕ್ಷಣೆ ಮಾಡಲು ಮಾಡಿದ ಸತತ ಪ್ರಯತ್ನ ವಿಫಲವಾಗಿದೆ.ನಂದಾವರ ನಿವಾಸಿ ಮಹಮ್ಮದ್ ಅವರ ಪತ್ನಿ ಝರೀನಾ(49) ಹಾಗೂ ಶಫಾ(20) ಮನೆಯಡಿಯಲ್ಲಿ ಸಿಲುಕಿ ಹಾಕಿಕೊಂಡವರು.ಅವರಲ್ಲಿ ಸಫಾ ಅವರನ್ನು ತಕ್ಷಣ ರಕ್ಷಣೆ ಮಾಡಲಾಗಿದೆ.ಉಳಿದಂತೆ ಝರಿನಾ ಅವರು ಮೃತಪಟ್ಟಿದ್ದಾರೆ. ಕೆಲವು ಗಂಟೆಗಳ ಕಾಲ ರಕ್ಷಣಾ

ಗುಡ್ಡ ಮನೆಗೆ ಕುಸಿದು ಬಿದ್ದು ಮಹಿಳೆ ಸಾವು Read More »

ಕಾಲು ಜಾರಿ ಬಿದ್ದು ನೀರು ಪಾಲಾದ ಕಾರ್ಮಿಕನ‌ ಗುರುತು ಪತ್ತೆ

ಆಲೆಟ್ಟಿ : ಪಾಲ ದಾಟುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ಕೂಲಿ ಕಾರ್ಮಿಕ ನೀರು ಪಾಲಾದ ಘಟನೆ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ಗುರುವಾರ ಸಂಜೆ ಸಂಭವಿಸಿದೆ. ಕೇರಳದ ಬಾಲಕೃಷ್ಣ (47) ಎಂಬವರು ನೀರು ಪಾಲಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಅವರು ಆಲೆಟ್ಟಿಯ ಸ್ಥಳೀಯರ ಮಾವಾಜಿ ಎಸ್ಟೇಟ್ ಗೆ ಅಡಿಕೆ ತೋಟದ ಕೆಲಸಕ್ಕೆ ಬಂದಿದ್ದರು. ಗುರುವಾರ ಸಂಜೆ ಕೆಲಸ ಮುಗಿಸಿ ನಾಲ್ಕು ಜನರ ತಂಡ ಹಿಂತಿರುಗುವ ವೇಳೆ ತೋಡಿನ ಅಡಿಕೆ ಮರದ ಪಾಲ

ಕಾಲು ಜಾರಿ ಬಿದ್ದು ನೀರು ಪಾಲಾದ ಕಾರ್ಮಿಕನ‌ ಗುರುತು ಪತ್ತೆ Read More »

ಭೀಕರ ರಸ್ತೆ ಅಪಘಾತ : ವಿದ್ಯಾರ್ಥಿನಿ ಸಾವು

ಬಂಟ್ವಾಳ ತಾಲೂಕಿನ ತುಂಬೆ ಸಮೀಪ ನಡೆದ ಭೀಕರ ರಸ್ತೆ ಅಪಘಾತಕ್ಕೆ ಮಂಗಳೂರು ಅಲೋಶಿಯಸ್ ವಿದ್ಯಾರ್ಥಿನಿ, ಪುತ್ತೂರಿನ ಕೂರ್ನಡ್ಕ ನಿವಾಸಿ ಹನಾ(19) ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಕೂರ್ನಡ್ಕ ನಿವಾಸಿ ಅಬ್ದುಲ್ ಮಜೀದ್ ಹಾಗೂಶಮೀಮಾ ದಂಪತಿ ಪುತ್ರಿ ಹನಾ ಮೃತಪಟ್ಟವರು. ಇವರು ಅಲೋಶಿಯಸ್ ನಲ್ಲಿಬಿಬಿಎಂ ವಿದ್ಯಾರ್ಥಿನಿ.ಪುತ್ತೂರಿನಿಂದ ಮಂಗಳೂರು ಕಡೆಗೆ ಐ20ಕಾರಿನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.ಚಾಲಕನ ನಿಯಂತ್ರಣ ತಪ್ಪಿದ ಕಾರು, ಪಲ್ಟಿಯಾಗಿ ಅಪಘಾತಕ್ಕೀಡಾಗಿದೆ.

ಭೀಕರ ರಸ್ತೆ ಅಪಘಾತ : ವಿದ್ಯಾರ್ಥಿನಿ ಸಾವು Read More »

ಮರ ಬಿದ್ದು ವಿದ್ಯುತ್ ಕಂಬಗಳಿಗೆ ಹಾನಿ

ಗೂನಡ್ಕ : ಶಾಲಾ ವಠಾರದಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳಿಗೆ ಹಾನಿಯಾದ ಘಟನೆ ಗುರುವಾರ ವರದಿಯಾಗಿದೆ. ಸಂಪಾಜೆ ಗ್ರಾಮದ ಗೂನಡ್ಕ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಮರ ಬಿದ್ದು ವಿದ್ಯುತ್ ಕಂಬಗಳು ತುಂಡಾಗಿದೆ. ಒಟ್ಟು 3 ಕಂಬಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ.ಹಮೀದ್ ನೇತೃತ್ವದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಹಾಗೂ ಧರ್ಮಸ್ಥಳ ಶೌರ್ಯ ವಿಪತ್ತು ತಂಡದವರು ಕಾರ್ಯಾಚರಣೆ ನಡೆಸಿ ಮರ ತೆರವು ಮಾಡಿದರು.

ಮರ ಬಿದ್ದು ವಿದ್ಯುತ್ ಕಂಬಗಳಿಗೆ ಹಾನಿ Read More »

ಭಾರೀ ಮಳೆಯಿಂದ ಚೆಲ್ಯಡ್ಕ ಸೇತುವೆ ಮುಳುಗಡೆ: ಸಂಚಾರ ಸ್ಥಗಿತ

ದ.ಕ ಜಿಲ್ಲೆಯಲ್ಲಿ ಕಳೆದ ಎರಡು ದಿವಸಗಳಿಂದ ಭಾರೀಮಳೆ ಸುರಿಯುತ್ತಿದ್ದು ಪುತ್ತೂರು ತಾಲೂಕಿನ‌ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರ್ದೇ ಗ್ರಾಮದ ಚೆಲ್ಯಡ್ಕ ಮುಳುಗು ಸೇತುವೆ ಜು.6ರಂದು ಮುಂಜಾನೆ ಮುಳುಗಡೆಯಾಗಿದೆ.ಚೆಲ್ಯಡ್ಕ ಸೇತುವೆ ಮುಳುಗಡೆಗೊಂಡ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡಿದ್ದು, ವಾಹನಗಳು ಸೆಂಟ್ಯಾರು ಪಾಣಾಜೆ ಲೋಕೋಪಯೋಗಿ ರಸ್ತೆಯ ಮೂಲಕ ಸಂಚರಿಸುತ್ತಿದೆ.ಇನ್ನು ಮುಳುಗು ಸೇತುವೆ ಎಂದು ಪ್ರಖ್ಯಾತಿ ಪಡೆದಿರುವ ಚೆಲ್ಯಡ್ಕ ಸೇತುವೆ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಪ್ರಥಮ ಬಾರಿಗೆ ಮುಳುಗಡೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇದರಿಂದ ಸ್ಥಳೀಯರು ಸುತ್ತು

ಭಾರೀ ಮಳೆಯಿಂದ ಚೆಲ್ಯಡ್ಕ ಸೇತುವೆ ಮುಳುಗಡೆ: ಸಂಚಾರ ಸ್ಥಗಿತ Read More »

ಮರ ಬಿದ್ದು ಮನೆಗೆ ಹಾನಿ

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಬೊಳುಗಲ್ಲು ಎಂಬಲ್ಲಿ ನಿರ್ಮಾಣ ಹಂತದ ಮನೆ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿಬಿದ್ದು ಮನೆ ಸಂಪೂರ್ಣ ಜಖಂಗೊಂಡು ಮತ್ತು ಮನೆ ಮಾಲಕ ಓಡಿ ಪ್ರಾಣಾಪಯದಿಂದ ಪಾರಾದ ಘಟನೆ ಬುಧವಾರ ವರದಿಯಾಗಿದೆಬೊಳುಗಲ್ಲು ಬಾಲಚಂದ್ರ ಎಂಬವರು ನೂತನ ಮನೆ ನಿರ್ಮಿಸುತ್ತಿದ್ದು ಮನೆ ಪಕ್ಕದಲ್ಲಿದ್ದ ಮರವೊಂದು ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ಬಿದ್ದು ಮನೆ ಸಂಪೂರ್ಣ ಹಾನಿಯಾಗಿದೆ. ಮರ ಬೀಳುತ್ತಿದ್ದಂತೆ ಮನೆ ಮಾಲಕ ಹಿಂದಿನ ಬಾಗಿಲ ಮೂಲಕ ಓಡಿ ಪ್ರಾಣಾಪಯದಿಂದ ಪಾರಾಗಿದ್ದಾರೆ. ಎರಡು ವರ್ಷದ ಹಿಂದೆ

ಮರ ಬಿದ್ದು ಮನೆಗೆ ಹಾನಿ Read More »

ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

ಸುರತ್ಕಲ್ ಸಮೀಪ ಮಂಗಳವಾರ ತಡರಾತ್ರಿ ಸಮುದ್ರ ತೀರದಲ್ಲಿ ಭಾರಿ ಸುಂಟರಗಾಳಿಗೆ ಕುಲಾಯಿ ಪ್ರದೇಶದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಸಂತೋಷ್ ಎಂಬವರು ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದನ್ನು ತಿಳಿಯದೆ ಅದನ್ನ ತುಳಿದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು Read More »

ಸುಳ್ಯದಲ್ಲಿ ಖಾಸಗಿ ಬಸ್ಸುಗಳು ಸೀಝ್

ಸುಳ್ಯ ತಾಲೂಕಿನ ಅತೀ ಹಳೆಯದಾದ ಪರ್ಮಿಟ್ ಹೊಂದಿದ್ದ ಸುಳ್ಯ – ಮಂಡೆಕೋಲು ಮಾರ್ಗದಲ್ಲಿ ಚಲಿಸುತ್ತಿದ್ದ ಬಸ್ಸುಗಳು ಧಿಡೀರ್ ಆಗಿ ಸೋಮವಾರ ಮುಂಜಾನೆ ಸಾರಿಗೆ ಇಲಾಖೆ ಇನ್ಸ್ ಪೆಕ್ಟರ್ ಇಸ್ಮಾನ್ ನೇತೃತ್ವದಲ್ಲಿ ಸೀಝ್ ಮಾಡಲಾಗಿದೆ ಎಂದು ಪುತ್ತೂರು ಆರ್ ಟಿ ಓ ಅಧಿಕಾರಿಗಳು ತಿಳಿಸಿದ್ದಾರೆ.ಈ ಹಿಂದಿನಿಂದಲೂ ಅಜ್ಜಾವರ ಮಂಡೆಕೋಲು – ಅಡೂರು ಗೆ ತೆರಳುತ್ತಿದ್ದ ಕೆಎ-20-ಸಿ-1809 ಖಾಸಗಿ ಬಸ್ಸ್ ಅನಿಲ್ ಛಾತ್ರ ಎಂಬುವವರ ಹೆಸರಿನಲ್ಲಿದ್ದು ಈ ಬಸ್ಸು ಒಂದು ಲಕ್ಷದ ಹನ್ನೆರಡು ಸಾವಿರ ಟ್ಯಾಕ್ಸ್ ಉಳಿಸಿಕೊಂಡಿದೆ. ಅಲ್ಲದೇ ಕೆಎ-19-ಸಿ-0329

ಸುಳ್ಯದಲ್ಲಿ ಖಾಸಗಿ ಬಸ್ಸುಗಳು ಸೀಝ್ Read More »

error: Content is protected !!
Scroll to Top